ಕುಣಿಗಲ್: ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾದರೆ ಸಮುದಾಯ ಸುಮ್ಮನಿರಲ ಎಂದು ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ತಾಲೂಕು ಒಕ್ಕಲಿಗ ಧರ್ಮ ಮಹಾಸಭಾ ಹಮ್ಮಿಕೊಂಡಿದ್ದ ಭೈರವೈಕ್ಯ ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರ ಪುಣ್ಯಸ್ಮರಣೆ ಹಾಗೂ ಒಕ್ಕಲಿಗ ಧರ್ಮ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದರು.

ಒಕ್ಕಲಿಗ ಸಮುದಾಯವೂ ಧ್ವನಿ ಎತ್ತದಿದ್ದರೆ ಸುಮುದಾಯಕ್ಕೆ ಬೇಕಾದ ಸವಲತ್ತು ಹಾಗೂ ಸೌಲಭ್ಯಗಳು ಸಿಗುವುದಿಲ್ಲ. ಇಡೀ ದೇಶವೇ ಜಾತಿ, ಧರ್ಮದ ವ್ಯವಸ್ಥೆಯಡಿ ನಿಂತಿದೆ. ಜಾತಿ ವ್ಯವಸ್ಥೆ ಬಗ್ಗೆ ವಿಸ್ತೃತ ಚರ್ಚೆಗಳು ನಡೆಯಬೇಕಿದೆ. ಎಲ್ಲರೂ ಒಂದು ಜಾತಿ, ಒಂದು ಧರ್ಮವನ್ನು ಸ್ವೀಕರಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಆರು ತಿಂಗಳಿAದ ಸುಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದು, ಸಮುದಾಯ ಸೂಕ್ಷತ್ರ‍್ಮವಾಗಿ ಗಮನಿಸುತ್ತಿದೆ. ಅದು ಮುಂದುವರಿದರೆ ಮುಂದಿನ ವಿದ್ಯಮಾನಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಸರಕಾರ ಎಚ್ಚರಿಕೆಯಿಂದ ನಡೆದು ಕೊಳ್ಳಬೇಕು ಎಂದರು.

ಏರುಪೇರುಗಳಾದ ಸಂದರ್ಭದಲ್ಲಿ ಧ್ವನಿ ಇಲ್ಲದೇ ಯಾರೂ ಏನನ್ನೂ ಕೊಡಲ್ಲ. ಕುಣಿಗಲ್‌ನ ಇಂದಿನ ಒಕ್ಕಲಿಗ ಧರ್ಮ ಸಮಾವೇಶದಿಂದಲೇ ಒಕ್ಕಲಿಗರ ಧ್ವನಿ ಕೇಳತೊಡಗಲಿದೆ. ಆಡಳಿತ ನಡೆಸುವ ವರ್ಗ, ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ಯಾವುದೇ ನಿರ್ಧಾರ ಕೈಗೊಂಡಿದ್ದು, ಸರ್ಕಾರ ಇಂತಹ ದುಸ್ಸಾಹಸಕ್ಕೆ ಕೈಹಾಕುವುದು ಬಿಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಶಾಖಾ ಮಠದ ಮಂಗಳಾನAದನಾಥ ಸ್ವಾಮೀಜಿ, ಅರೆಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ, ಒಕ್ಕಲಿಗ ಮಹಾ ಸಭಾದ ಅಧ್ಯಕ್ಷ ಕೃಷ್ಣೆಗೌಡ ಮುಂತಾದವರಿದ್ದರು.

Leave a Reply

Your email address will not be published. Required fields are marked *

You May Also Like

ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಭೆ ಸಮಾರಂಭಗಳನ್ನು ಮುಂದೂಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಒಂದು ವಾರದ ಹಿಂದೆ ಧಾರವಾಡ ಎಸ್ ಡಿ ಎಮ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೋನಾ…

ಫೀಸ್ ಅವಾಂತರ – ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಭೇಟಿ ಮಾಡಿದ ಶಿಕ್ಷಣ ಸಚಿವ!

ಬೆಂಗಳೂರು : ಶಾಲಾ ಶುಲ್ಕಕ್ಕೆ ಕಿರುಕುಳ ನೀಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿಯ ಮನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು?: ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ

ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ.

ಎಷ್ಟು ವಿರೋಧಿಸುತ್ತಾರೋ ಅಷ್ಟು ಗಟ್ಟಿಯಾಗುತ್ತೇನೆ

ರಮೇಶ್ ಜಾರಕಿಹೊಳಿ ಅವರನ್ನು ನಾವೇ ಮಂತ್ರಿ ಮಾಡಿದ್ದೇವೆ. ಹೈಕಮಾಂಡ್ ಗೆ ನಾವೇ ಶಿಫಾರಸು ಮಾಡಿದ್ದೇವೆ. ನಾನು ನನ್ನಿಂದ ಅಂದವರೆಲ್ಲ ಹೆಸರು ಇಲ್ಲದಂಗೆ ಹೋಗಿದ್ದಾರೆ. ಅವರು ಎಷ್ಟು ವಿರೋಧಿಸುತ್ತಾರೆಯೋ ನಾನು ಅಷ್ಟು ಗಟ್ಟಿಯಾಗುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.