ಕುಣಿಗಲ್: ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾದರೆ ಸಮುದಾಯ ಸುಮ್ಮನಿರಲ ಎಂದು ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ತಾಲೂಕು ಒಕ್ಕಲಿಗ ಧರ್ಮ ಮಹಾಸಭಾ ಹಮ್ಮಿಕೊಂಡಿದ್ದ ಭೈರವೈಕ್ಯ ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರ ಪುಣ್ಯಸ್ಮರಣೆ ಹಾಗೂ ಒಕ್ಕಲಿಗ ಧರ್ಮ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದರು.

ಒಕ್ಕಲಿಗ ಸಮುದಾಯವೂ ಧ್ವನಿ ಎತ್ತದಿದ್ದರೆ ಸುಮುದಾಯಕ್ಕೆ ಬೇಕಾದ ಸವಲತ್ತು ಹಾಗೂ ಸೌಲಭ್ಯಗಳು ಸಿಗುವುದಿಲ್ಲ. ಇಡೀ ದೇಶವೇ ಜಾತಿ, ಧರ್ಮದ ವ್ಯವಸ್ಥೆಯಡಿ ನಿಂತಿದೆ. ಜಾತಿ ವ್ಯವಸ್ಥೆ ಬಗ್ಗೆ ವಿಸ್ತೃತ ಚರ್ಚೆಗಳು ನಡೆಯಬೇಕಿದೆ. ಎಲ್ಲರೂ ಒಂದು ಜಾತಿ, ಒಂದು ಧರ್ಮವನ್ನು ಸ್ವೀಕರಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರ ಆರು ತಿಂಗಳಿAದ ಸುಮುದಾಯಕ್ಕೆ ಧಕ್ಕೆ ಉಂಟು ಮಾಡುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದು, ಸಮುದಾಯ ಸೂಕ್ಷತ್ರ‍್ಮವಾಗಿ ಗಮನಿಸುತ್ತಿದೆ. ಅದು ಮುಂದುವರಿದರೆ ಮುಂದಿನ ವಿದ್ಯಮಾನಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಸರಕಾರ ಎಚ್ಚರಿಕೆಯಿಂದ ನಡೆದು ಕೊಳ್ಳಬೇಕು ಎಂದರು.

ಏರುಪೇರುಗಳಾದ ಸಂದರ್ಭದಲ್ಲಿ ಧ್ವನಿ ಇಲ್ಲದೇ ಯಾರೂ ಏನನ್ನೂ ಕೊಡಲ್ಲ. ಕುಣಿಗಲ್‌ನ ಇಂದಿನ ಒಕ್ಕಲಿಗ ಧರ್ಮ ಸಮಾವೇಶದಿಂದಲೇ ಒಕ್ಕಲಿಗರ ಧ್ವನಿ ಕೇಳತೊಡಗಲಿದೆ. ಆಡಳಿತ ನಡೆಸುವ ವರ್ಗ, ಒಕ್ಕಲಿಗ ಸಮುದಾಯಕ್ಕೆ ಧಕ್ಕೆ ಉಂಟು ಮಾಡುವ ಯಾವುದೇ ನಿರ್ಧಾರ ಕೈಗೊಂಡಿದ್ದು, ಸರ್ಕಾರ ಇಂತಹ ದುಸ್ಸಾಹಸಕ್ಕೆ ಕೈಹಾಕುವುದು ಬಿಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಚಿಕ್ಕಬಳ್ಳಾಪುರದ ಆದಿಚುಂಚನಗಿರಿ ಶಾಖಾ ಮಠದ ಮಂಗಳಾನAದನಾಥ ಸ್ವಾಮೀಜಿ, ಅರೆಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ, ಒಕ್ಕಲಿಗ ಮಹಾ ಸಭಾದ ಅಧ್ಯಕ್ಷ ಕೃಷ್ಣೆಗೌಡ ಮುಂತಾದವರಿದ್ದರು.

Leave a Reply

Your email address will not be published. Required fields are marked *

You May Also Like

ಸುರಕ್ಷೆ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲ ಅಗತ್ಯ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಉತ್ತರಪ್ರಭ ಸುದ್ದಿ: ಬೆಂಗಳೂರು: ಆ. ೨-ಇಡೀ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಾವು-ನೋವುಗಳು ಆಗಿವೆ. ಈ…

ಎಚ್.ಡಿ.ದೇವೇಗೌಡರಿಗೆ ಕೃತಜ್ಞತೆ ಸಲ್ಲಿಸಿದ ಹೊರಟ್ಟಿ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ತಮ್ಮ ಹೆಸರು ಘೋಷಣೆ ಮಾಡಿದ್ದಕ್ಕೆ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಇಂದು ಬೆಳಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಬೇಟಿ ಕೊಟ್ಟು ಅವರು ಹೂಗುಚ್ಛ ನೀಡಿ ಗೌಡರಿಗೆ ಕೃತಜ್ಞತೆ ಸಮರ್ಪಿಸಿದರು.

ಗ್ರಾ.ಪಂ ಸದಸ್ಯರ ಸರ್ವಾಧಿಕಾರ ಖಂಡಿಸಿ ರೈತರ ಆಕ್ರೋಶ

ಉತ್ತರಪ್ರಭ ಮುಳಗುಂದ: ಗ್ರಾಮ ಪಂಚಾಯ್ತಿ ಯಿಂದ ಕೇಂದ್ರ ಸರ್ಕಾರದ ವರೆಗೂ ಕಾರ್ಯವೈಕರಿಯನ್ನ ಪ್ರಶ್ನಿಸುವ ಮತ್ತು ಸೌಲಭ್ಯಗಳನ್ನ…

ಸರ್ಕಾರದ ಸೌಲಭ್ಯಗಳಲ್ಲಿ ಬ್ರಹ್ಮಾಂಡ ಬ್ರಷ್ಟಾಚಾರ ನಡೆದಿದೆ

ಪಟ್ಟಣದ ಜನತೆ ವಸತಿ ಸೇರಿ ಹತ್ತು ಹಲವಾರು ಸಮಸ್ಯೆಗಳಿಂದ ಸಂಕಷ್ಟದಲ್ಲಿದ್ದಾರೆ. ಆದರೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರು ಸ್ವಾರ್ಥಪರ ಚಿಂತನೆ ನಡೆಸುವ ಮೂಲಕ ಸಾರ್ವಜನಿಕರನ್ನು ಕಡೆಗಣಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಸಿಪಿಐಎಂ ಮುಖಂಡ ಎಂ.ಎಸ್.ಹಡಪದ ಆರೋಪಿಸಿದರು.