ನವದೆಹಲಿ: ಸೋತು ಎಂಎಲ್ಸಿಯಾಗಿದ್ದಂತ ಹೆಚ್.ವಿಶ್ವನಾಥ್ ಅವರಿಗೆ ಪರಿಷತ್ ಸ್ಥಾನದ ಮೂಲಕ ಸಚಿವ ಸ್ಥಾನದ ಕನಸು ಕಂಡಿದ್ದ ವಿಶ್ವನಾಥ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.

ರಾಜ್ಯ ಸರ್ಕಾರ ಮಾತ್ರ ಸಚಿವ ಸ್ಥಾನ ನೀಡೋದಕ್ಕೆ ಚಿಂತನೆಯೂ ನೆಡೆಸಿತ್ತು.

ಇಂತಹ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ಹೆಚ್.ವಿಶ್ವನಾಥ್ ಅವರು ನಾಮನಿರ್ದೇಶನಗೊಂಡು ಸದಸ್ಯರಾಗಿರುವವರು. ಅವರು ಜನರಿಂದ ಆಯ್ಕೆಯಾಗಿಲ್ಲ. ಹೀಗಾಗಿ ಮಂತ್ರಿಯಾಗಲು ಅರ್ಹರಲ್ಲ ಎಂಬುದಾಗಿ ಆದೇಶ ನೀಡಿತ್ತು.

ಇಂತಹ ಆದೇಶ ಪ್ರಶ್ನಿಸಿ ಅವರು, ಸುಪ್ರೀಂ ಮೋರೆ ಹೋಗಿದ್ದರು. ಇದೀಗ ಸುಪ್ರೀಂ ಕೋರ್ಟ್ ಸಹ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ವಿಶ್ವನಾಥ್ ಮಂತ್ರಿಯಾಗಲು ಅರ್ಹರಲ್ಲ ಎಂಬುದಾಗಿ ತಿಳಿಸಿದೆ.

ಸುಪ್ರೀಂ ಕೋರ್ಟ್ ಕೂಡ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಹೆಚ್ ವಿಶ್ವನಾಥ್ ಅವರು ಮಂತ್ರಿಯಾಗುವಂತಿಲ್ಲ ಎಂಬ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿರುವಂತ ಸುಪ್ರೀಂ ಕೋರ್ಟ್, ವಿಶ್ವನಾಥ್ ಸಲ್ಲಿಸಿದ್ದ ಮೇಲ್ಮನವಿಯ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪರಿಷತ್ ಸದಸ್ಯ ಎಚ್. ವಿಶ್ವನಾಥ್‌ಗೆ ಸುಪ್ರೀಂ ಕೋರ್ಟ ಸಚಿವ ಸ್ಥಾನದ ಆಸೆಗೆ ತಣ್ಣಿರರೆಚಿದೆ.

Leave a Reply

Your email address will not be published. Required fields are marked *

You May Also Like

ಸಿಎಂ: ವರ್ಕ್ ಫ್ರಂ ಹೋಂ?ಅಥವಾ ಹೋಂ ಕ್ವಾರಂಟೈನ್?

ಬೆಂಗಳೂರು: ನಾನು ಆರೋಗ್ಯವಾಗಿರುವೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಲವು ಸಿಬ್ಬಂದಿಗೆ ಪಾಸಿಟಿವ್ ದೃಢಪಟ್ಟಿದೆ. ಕೆಲವು ದಿನಗಳ…

ಹಲವು ಜಿಲ್ಲೆಗಳಲ್ಲಿ ಸಾರಿಗೆ ಇಲಾಖೆ ಕಚೇರಿ ಆರಂಭ!

ಗೃಹ ಸಚಿವಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.

ರಾಜ್ಯ ಸರ್ಕಾರಿ ನೌಕರರ ಡಿಎ ಗೆ ಕತ್ತರಿ..!

ಲಾಕ್‌ಡೌನ್ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ಭಾರಿ ಪೆಟ್ಟು ನೀಡಿದೆ. ಇದರಿಂದಾಗಿ ಸರ್ಕಾರ ಕೂಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ನೌಕರರ ಡಿಎಗೆ ಕತ್ತರಿ ಹಾಕಲಿದೆ..?

ಆಲಮಟ್ಟಿ ಬಸ್ ನಿಲ್ದಾಣಕ್ಕೆ ಸದನದಲ್ಲಿ ಆಗ್ರಹ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಕಳೆದ ಐದು ವರ್ಷದಿಂದ ಬಸ್ ನಿಲ್ದಾಣ ನಿಮಾ೯ಣಕ್ಕಾಗಿ ಜನಪ್ರತಿನಿಧಿ ಶಾಸಕರೊಬ್ಬರು ನಿರಂತರ…