ನವದೆಹಲಿ: ಸೋತು ಎಂಎಲ್ಸಿಯಾಗಿದ್ದಂತ ಹೆಚ್.ವಿಶ್ವನಾಥ್ ಅವರಿಗೆ ಪರಿಷತ್ ಸ್ಥಾನದ ಮೂಲಕ ಸಚಿವ ಸ್ಥಾನದ ಕನಸು ಕಂಡಿದ್ದ ವಿಶ್ವನಾಥ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.

ರಾಜ್ಯ ಸರ್ಕಾರ ಮಾತ್ರ ಸಚಿವ ಸ್ಥಾನ ನೀಡೋದಕ್ಕೆ ಚಿಂತನೆಯೂ ನೆಡೆಸಿತ್ತು.

ಇಂತಹ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ಹೆಚ್.ವಿಶ್ವನಾಥ್ ಅವರು ನಾಮನಿರ್ದೇಶನಗೊಂಡು ಸದಸ್ಯರಾಗಿರುವವರು. ಅವರು ಜನರಿಂದ ಆಯ್ಕೆಯಾಗಿಲ್ಲ. ಹೀಗಾಗಿ ಮಂತ್ರಿಯಾಗಲು ಅರ್ಹರಲ್ಲ ಎಂಬುದಾಗಿ ಆದೇಶ ನೀಡಿತ್ತು.

ಇಂತಹ ಆದೇಶ ಪ್ರಶ್ನಿಸಿ ಅವರು, ಸುಪ್ರೀಂ ಮೋರೆ ಹೋಗಿದ್ದರು. ಇದೀಗ ಸುಪ್ರೀಂ ಕೋರ್ಟ್ ಸಹ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ವಿಶ್ವನಾಥ್ ಮಂತ್ರಿಯಾಗಲು ಅರ್ಹರಲ್ಲ ಎಂಬುದಾಗಿ ತಿಳಿಸಿದೆ.

ಸುಪ್ರೀಂ ಕೋರ್ಟ್ ಕೂಡ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಹೆಚ್ ವಿಶ್ವನಾಥ್ ಅವರು ಮಂತ್ರಿಯಾಗುವಂತಿಲ್ಲ ಎಂಬ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿರುವಂತ ಸುಪ್ರೀಂ ಕೋರ್ಟ್, ವಿಶ್ವನಾಥ್ ಸಲ್ಲಿಸಿದ್ದ ಮೇಲ್ಮನವಿಯ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪರಿಷತ್ ಸದಸ್ಯ ಎಚ್. ವಿಶ್ವನಾಥ್‌ಗೆ ಸುಪ್ರೀಂ ಕೋರ್ಟ ಸಚಿವ ಸ್ಥಾನದ ಆಸೆಗೆ ತಣ್ಣಿರರೆಚಿದೆ.

Leave a Reply

Your email address will not be published. Required fields are marked *

You May Also Like

ವಿವಿಧ ಸಂಘಟನೆಗಳಿಂದ 916ನೇ ಬಸವ ಜಯಂತಿ ಆಚರಣೆ

ಬಸವಣ್ಣನವರ ತತ್ವಗಳು ಸರ್ವಕಾಲಿ ಸತ್ಯಗಳಾಗಿವೆ ಉತ್ತರಪ್ರಭ ಸುದ್ದಿ ಗದಗ : ಶ್ರೀ ತೋಂಟದಾರ್ಯ ಮಠದ ಪೂಜ್ಯ…

ಕೋವಿಡ್ ನಿಯಮ ಉಲ್ಲಂಘಿಸಿ ಬರ್ತ್ ಡೇ ಪಾರ್ಟಿ: ಶ್ರೀರಾಮುಲು ಆಪ್ತನಿಗೆ ಬಿಜೆಪಿ ಗೇಟ್ಪಾಸ್

ಕೋವಿಡ್ ನಿಯಮ ಉಲ್ಲಂಘಿಸಿ ಭರ್ಜರಿ ಪಾರ್ಟಿ ಆಚರಿಸಿಕೊಂಡಿದ್ದ ಶ್ರೀರಾಮುಲು ಆಪ್ತ ಎಚ್.ಎಸ್. ಶಿವನಗೌಡರನ್ನು ಜಿಲ್ಲಾ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಪೊಲೀಸರು ಪಾರ್ಟಿ ಕುರಿತಂತೆ ಕೋರ್ಟಿನಲ್ಲಿ ಸ್ವಯಂ ದೂರು ದಾಖಲಿಸಿದ್ದು ಇಂದು ಸೋಮವಾರ ಶಿವನಗೌಡರು ಕೋರ್ಟಿಗೆ ಹಾಜರಾಗಬಹುದು ಎನ್ನಲಾಗಿದೆ.

ಡಿಎಪಿ ರಸಗೊಬ್ಬರ ದರ ಇಳಿಕೆ

ಧಾರವಾಡ: ಡಿಎಪಿ ರಸಗೊಬ್ಬರ ದರ ಇಳಿಕೆ ಮಾಡಿ ಸರ್ಕಾರ ಆದೇಶಿಸಿದೆ. ಸಂಗ್ರಹವಿರುವ ಡಿಎಪಿ ರಸಗೊಬ್ಬರ ಪ್ರತಿ ಚೀಲಕ್ಜೆ 1200 ರೂ. ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕಾಪು ದಾಸ್ತಾನು ಅಡಿ ಕೆಎಸ್ಸಿಎಮ್ಎಫ್ ದಲ್ಲಿ ಸಂಗ್ರಹವಿದ್ದ 1960 ಟನ್ ಡಿಎಪಿ ಗೊಬ್ಬರ ಪ್ರತಿ ಚೀಲಕ್ಕೆ 1450 ರೂ.ಗಳ ದರ ನಿಗದಿಪಡಿಸಲಾಗಿತ್ತು.

ಗೃಹ ಸಚಿವರ ತವರಲ್ಲಿ ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..!

ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..! ತಳ್ಳದೆ ಸ್ಟಾರ್ಟ್ ಆಗ್ತಿಲ್ಲಾ ಕರೊನಾ ವಾರಿಯರ್ಸ್ ರಥ..…