ಮಸ್ಕಿ: ಬಿಜೆಪಿ ಮಹಾಶಕ್ತಿ ಕೇಂದ್ರದ ಮುಖಂಡರು ಪಕ್ಷ ಸಂಘಟನೆ ಮಾಡುವುದರ ಮೂಲಕ ಬಿಜೆಪಿಗೆ ಬಲ ನೀಡಬೇಕೆಂದು ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಅವರು ಕರೆ ನೀಡಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳ ನೇಮಕಾತಿ ಆದೇಶ ಪತ್ರವನ್ನು ವಿತರಿಸಿದ ಬಳಿಕ ಮಾತನಾಡಿ, ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ಗುರಿ ನಮ್ಮದಾಗಬೇಕು, ಎದುರಾಳಿ ಮುಖಂಡರ ಪ್ರಭಾವ ಇರುವ ಬೂತ್ ಗಳಲ್ಲಿ ಬಿಜೆಪಿ ಲೀಡ್ ಮಾಡಿ ತೋರಿಸಬೇಕು. ಈ ನಿಟ್ಟಿನಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಕೆಲಸ ನಿರ್ವಹಿಸಬೇಕೆಂದು ಹೇಳಿದರು.
ಈ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಾಣೇಶ ದೇಶಪಾಂಡೆ ಮಾತನಾಡಿ, ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಸವಾಲಾಗಿ ಸ್ವೀಕರಿಸಿ ಬೂತ್ ಮಟ್ಟದಲ್ಲಿ ಹೆಚ್ಚಿನ ಒತ್ತು ಕೊಟ್ಟು ಉಪ ಚುನಾವಣೆಯಲ್ಲಿ ಪ್ರತಾಪಗೌಡ ಅವರನ್ನು ಗೆಲ್ಲಿಸುವ ಪ್ರಯತ್ನ ನಮ್ಮದಾಗಬೇಕು ಎಂದರು.
ಬಿಜೆಪಿ ಮಸ್ಕಿ ಮಂಡಲದ ಅಧ್ಯಕ್ಷರಾದ ಶಿವಪುತ್ರಪ್ಪ ಹರಳಹಳ್ಳಿ, ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿಗೌಡ ಪಾಟೀಲ, ಬಿಜೆಪಿ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ಶರಣಬಸವ ಉಮಲೂಟಿ, ಬಿಜೆಪಿ ಹಿರಿಯ ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್, ಅಂದಾನಪ್ಪ ಗುಂಡಳ್ಳಿ, ದೊಡ್ಡಪ್ಪ ಕಡಬೂರ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ವಾಸಪ್ಪಗೌಡ, ಬಿಜೆಪಿ ಮಂಡಳ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ಎಪಿಎಂಸಿ ಅಧ್ಯಕ್ಷ ಮಲ್ಲರೆಡ್ಡೆಪ್ಪ ಇನ್ನಿತರ ಬಿಜೆಪಿ ಮುಖಂಡರಿದ್ದರು.