ಬೆಂಗಳೂರು: ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್‌ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬAಧಿ ಸೇವೆ ಸಿಗಲಿದೆ. ಸದ್ಯ 387 ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಲಭ್ಯವಿತ್ತು. 187 ಜಿಲ್ಲೆಗಳಲ್ಲಿ ಭಾಗಶಃ ಸೇವೆಗಳು ಲಭ್ಯವಿದ್ರೆ 161 ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಯಾವುದೇ ಸೇವೆ ಲಭ್ಯವಿರಲಿಲ್ಲ.


ಇಎಸ್‌ಐಸಿ ಅಡಿಯಲ್ಲಿ ಬರುವ ನೌಕರರು ಈವರೆಗೆ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಒಪ್ಪಂದ ಮಾಡಿಕೊಂಡಿರುವ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆ ಪಡೆಯುತ್ತಿದ್ದರು.

ಪ್ರಧಾನ್ ಮಂತ್ರಿ ಜನ್ ಆರೋಗ್ಯ ಯೋಜನೆಯಡಿ ಇಎಸ್‌ಐಸಿ ಅಡಿ ಬರುವ ಎಲ್ಲ ನೌಕರರಿಗೆ ಈ ಸೇವೆ ಸಿಗಲಿದೆ. ಬುಧವಾರ ನಡೆದ ಸಭೆಯಲ್ಲಿ ಈ ಬಗ್ಗೆ ಒಪ್ಪಿಗೆ ಸಿಕ್ಕಿದೆ. ಏಪ್ರಿಲ್ 1ರಿಂದ ಎಲ್ಲ ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಇಎಸ್‌ಐ ಯೋಜನೆಯಡಿ ಸೇವೆ ಸಿಗಲಿದೆ.


ಇಎಸ್‌ಐಸಿ ಫಲಾನುಭವಿಗಳು ಎಬಿಪಿಎಂಜೆವೈ ಆಸ್ಪತ್ರೆಯಲ್ಲಿ ಸೇವೆಯನ್ನು ಪಡೆಯಬಹುದು. ಹಾಗೆ ಎಬಿಪಿಎಂಜೆವೈ ಫಲಾನುಭವಿಗಳು ಇಎಸ್‌ಐಸಿ ಆಸ್ಪತ್ರೆಗಳಲ್ಲಿ ಆರೋಗ್ಯ ಸಂಬAಧಿ ಸೇವೆಗಳನ್ನು ಪಡೆಯಬಹುದು. ಅನೇಕ ಆಸ್ಪತ್ರೆಗಳಲ್ಲಿ ಹಾಸಿಗೆ ಸಂಖ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ತಿಂಗಳಿಗೆ 21 ಸಾವಿರಕ್ಕಿಂತ ಕಡಿಮೆ ಸಂಬಳ ಪಡೆಯುವ ಕೈಗಾರಿಕಾ ಕಾರ್ಮಿಕರನ್ನು ಇಎಸ್‌ಐಸಿ ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗುತ್ತದೆ. ಪ್ರತಿ ತಿಂಗಳು ಸಂಬಳದ ಒಂದು ಭಾಗವನ್ನು ಕಡಿತಗೊಳಿಸಲಾಗುತ್ತದೆ. ಇದನ್ನು ಇಎಸ್‌ಐಸಿ ವೈದ್ಯಕೀಯ ಪ್ರಯೋಜನಕ್ಕೆ ಠೇವಣಿ ಇಡಲಾಗುತ್ತದೆ.

Leave a Reply

Your email address will not be published. Required fields are marked *

You May Also Like

ಸರ್ಕಾರದ ಮಾರ್ಗಸೂಚಿ ಬದುಕಿನ ಭಾಗವಾಗಬೇಕು: ಸುಧಾಕರ್

ಕೋವಿಡ್ ರೋಗಕ್ಕೆ ಲಸಿಕೆ ಸಿಗುವತನಕ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಜನರು ಚಾಚೂ ತಪ್ಪದೆ ತಮ್ಮಬದುಕಿನ ಭಾಗವಾಗಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಲಕ್ಷ್ಮೇಶ್ವರ: ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯ

ಲಕ್ಷ್ಮೇಶ್ವರ: ಪಟ್ಟಣದ ಕರೇಗೋರಿ ಆಶ್ರಯ ಕಾಲೊನಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ…

ಜುಲೈ 16ರಂದು ವಿದ್ಯುತ್ ವ್ಯತ್ಯಯ

ಗದಗ (ಕರ್ನಾಟಕ ವಾರ್ತೆ) ಜುಲೈ 14 : 110 ಕೆವ್ಹಿ ಶಿರಹಟ್ಟಿ ಉಪ ವಿದ್ಯುತ್ ವಿತರಣಾ…

ನಮ್ಮ ಕರವೇ ಗ್ರಾಮ ಘಟಕ ಉದ್ಘಾಟನೆ

ತಾಲೂಕಿನ ಉಪ್ಪಾರ ಬುದ್ದಿನಿ ಗ್ರಾಮದಲ್ಲಿ ನಮ್ಮ‌ ಕರವೇ ಗ್ರಾಮ ಘಟಕ ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ತಾಲೂಕ ಘಟಕ ನಮ್ಮ ಕರವೇ ಅಧ್ಯಕ್ಷ ಬಸವರಾಜ ಉದ್ಬಾಳ ಅವರು ಮಾತನಾಡಿ, ನಾಡು ನುಡಿ, ಜಲ, ಭಾಷೆ ರಕ್ಷಣೆಗೆ ನಮ್ಮ ಕರವೇ ಕಾರ್ಯಕರ್ತರು ಬದ್ದರಾಗಿರಬೇಕೆಂದು ಹೇಳಿದರು.