ಬೆಂಗಳೂರು: ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್‌ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬAಧಿ ಸೇವೆ ಸಿಗಲಿದೆ. ಸದ್ಯ 387 ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಲಭ್ಯವಿತ್ತು. 187 ಜಿಲ್ಲೆಗಳಲ್ಲಿ ಭಾಗಶಃ ಸೇವೆಗಳು ಲಭ್ಯವಿದ್ರೆ 161 ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಯಾವುದೇ ಸೇವೆ ಲಭ್ಯವಿರಲಿಲ್ಲ.


ಇಎಸ್‌ಐಸಿ ಅಡಿಯಲ್ಲಿ ಬರುವ ನೌಕರರು ಈವರೆಗೆ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಒಪ್ಪಂದ ಮಾಡಿಕೊಂಡಿರುವ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆ ಪಡೆಯುತ್ತಿದ್ದರು.

ಪ್ರಧಾನ್ ಮಂತ್ರಿ ಜನ್ ಆರೋಗ್ಯ ಯೋಜನೆಯಡಿ ಇಎಸ್‌ಐಸಿ ಅಡಿ ಬರುವ ಎಲ್ಲ ನೌಕರರಿಗೆ ಈ ಸೇವೆ ಸಿಗಲಿದೆ. ಬುಧವಾರ ನಡೆದ ಸಭೆಯಲ್ಲಿ ಈ ಬಗ್ಗೆ ಒಪ್ಪಿಗೆ ಸಿಕ್ಕಿದೆ. ಏಪ್ರಿಲ್ 1ರಿಂದ ಎಲ್ಲ ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಇಎಸ್‌ಐ ಯೋಜನೆಯಡಿ ಸೇವೆ ಸಿಗಲಿದೆ.


ಇಎಸ್‌ಐಸಿ ಫಲಾನುಭವಿಗಳು ಎಬಿಪಿಎಂಜೆವೈ ಆಸ್ಪತ್ರೆಯಲ್ಲಿ ಸೇವೆಯನ್ನು ಪಡೆಯಬಹುದು. ಹಾಗೆ ಎಬಿಪಿಎಂಜೆವೈ ಫಲಾನುಭವಿಗಳು ಇಎಸ್‌ಐಸಿ ಆಸ್ಪತ್ರೆಗಳಲ್ಲಿ ಆರೋಗ್ಯ ಸಂಬAಧಿ ಸೇವೆಗಳನ್ನು ಪಡೆಯಬಹುದು. ಅನೇಕ ಆಸ್ಪತ್ರೆಗಳಲ್ಲಿ ಹಾಸಿಗೆ ಸಂಖ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ತಿಂಗಳಿಗೆ 21 ಸಾವಿರಕ್ಕಿಂತ ಕಡಿಮೆ ಸಂಬಳ ಪಡೆಯುವ ಕೈಗಾರಿಕಾ ಕಾರ್ಮಿಕರನ್ನು ಇಎಸ್‌ಐಸಿ ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗುತ್ತದೆ. ಪ್ರತಿ ತಿಂಗಳು ಸಂಬಳದ ಒಂದು ಭಾಗವನ್ನು ಕಡಿತಗೊಳಿಸಲಾಗುತ್ತದೆ. ಇದನ್ನು ಇಎಸ್‌ಐಸಿ ವೈದ್ಯಕೀಯ ಪ್ರಯೋಜನಕ್ಕೆ ಠೇವಣಿ ಇಡಲಾಗುತ್ತದೆ.

Leave a Reply

Your email address will not be published. Required fields are marked *

You May Also Like

ಸಸ್ಯ ಪ್ರೇಮ ನಿತ್ಯ ಮೂಡಲಿ-ಶಿವಾನಂದ ಪಟ್ಟಣಶೆಟ್ಟರ

ವರದಿ : ಗುಲಾಬಚಂದ ಜಾಧವಆಲಮಟ್ಟಿ: ಸಕಲ ಜೀವ ಸಂಕುಲಗಳಿಗೆ ಪ್ರಕೃತಿ ಮಾತೆಯೆ ಆಧಾರ.ಪ್ರಕೃತಿ ಸೃಷ್ಟಿಯಿಂದಲೇ ನಮಗೆಲ್ಲ…

ಹೊಳೆ ಆಲೂರು: ಮಲಪ್ರಭ ನದಿ ದಡದಲ್ಲಿ ಮೊಸಳೆ ಶವ ಪತ್ತೆ

ಇಲ್ಲಿನ ಮಲಪ್ರಭ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಗದಗ ಜಿಲ್ಲೆ ಹೊಳೆಯಾಲೂರು ಗ್ರಾಮದಲ್ಲಿ ಮೊಸಳೆ ಪತ್ತೆಯಾಗಿತ್ತು. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಇನ್ನು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿದ್ದರು. ನದಿ ದಡಕ್ಕೆ ಹೋಗದಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗುರ ಸಾರಲಾಗಿತ್ತು. ಆದರೆ ಇಂದು ಅದೇ ಸ್ಥಳದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದ್ದು, ಬುಧುವಾರ ಇಲ್ಲಿ ಕಾಣಿಸಿಕೊಂಡ ಮೊಸಳೆ ಸಾವನ್ನಪ್ಪಿದಾಗಿರಬಹುದು ಎನ್ನಲಾಗಿದೆ.

ಗುಣಮಟ್ಟದ ಕಾಮಗಾರಿಗೆ ಆಧ್ಯತೆ:ಶಾಸಕ ಬಂಡಿ

ಪ್ರಧಾನಮಂತ್ರಿ ಗ್ರಾಮ ಸಡಕ ಯೋಜನೆ ಅಡಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ಉತ್ತರಪ್ರಭ ನರೆಗಲ್ಲ: ಉತ್ತಮ ಗುಣಮಟ್ಟದ…

ಕಿಚ್ಚನಿಗೆ ಜಪಾನ್ ನಿಂದ ಅಭಿಮಾನಿಯ ಮನವಿ

ಅನಾರೋಗ್ಯದಿಂದಾಗಿ ಕಳೆದ ಎರಡು ವಾರಗಳಿಂದ ಬಿಗ್ ಬಾಸ್ನಲ್ಲಿ ಕಿಚ್ಚ ಸುದೀಪ್ ಭಾಗಿಯಾಗಿಲ್ಲ. ಇದು ಅಭಿಮಾನಿಗಳಿಗೆ ಬೇಸರವುಂಟು ಮಾಡಿದ್ದು ಒಂದುಕಡೆಯಾದರೇ, ಕಿಚ್ಚನ ಆರೋಗ್ಯದ ಬಗ್ಗೆಯೂ ಅಭಿಮಾನಿಗಳಿಗೆ ಚಿಂತೆಯಾಗಿದೆ.