ಬೆಂಗಳೂರು: ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್‌ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬAಧಿ ಸೇವೆ ಸಿಗಲಿದೆ. ಸದ್ಯ 387 ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಲಭ್ಯವಿತ್ತು. 187 ಜಿಲ್ಲೆಗಳಲ್ಲಿ ಭಾಗಶಃ ಸೇವೆಗಳು ಲಭ್ಯವಿದ್ರೆ 161 ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಯಾವುದೇ ಸೇವೆ ಲಭ್ಯವಿರಲಿಲ್ಲ.


ಇಎಸ್‌ಐಸಿ ಅಡಿಯಲ್ಲಿ ಬರುವ ನೌಕರರು ಈವರೆಗೆ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಒಪ್ಪಂದ ಮಾಡಿಕೊಂಡಿರುವ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆ ಪಡೆಯುತ್ತಿದ್ದರು.

ಪ್ರಧಾನ್ ಮಂತ್ರಿ ಜನ್ ಆರೋಗ್ಯ ಯೋಜನೆಯಡಿ ಇಎಸ್‌ಐಸಿ ಅಡಿ ಬರುವ ಎಲ್ಲ ನೌಕರರಿಗೆ ಈ ಸೇವೆ ಸಿಗಲಿದೆ. ಬುಧವಾರ ನಡೆದ ಸಭೆಯಲ್ಲಿ ಈ ಬಗ್ಗೆ ಒಪ್ಪಿಗೆ ಸಿಕ್ಕಿದೆ. ಏಪ್ರಿಲ್ 1ರಿಂದ ಎಲ್ಲ ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಇಎಸ್‌ಐ ಯೋಜನೆಯಡಿ ಸೇವೆ ಸಿಗಲಿದೆ.


ಇಎಸ್‌ಐಸಿ ಫಲಾನುಭವಿಗಳು ಎಬಿಪಿಎಂಜೆವೈ ಆಸ್ಪತ್ರೆಯಲ್ಲಿ ಸೇವೆಯನ್ನು ಪಡೆಯಬಹುದು. ಹಾಗೆ ಎಬಿಪಿಎಂಜೆವೈ ಫಲಾನುಭವಿಗಳು ಇಎಸ್‌ಐಸಿ ಆಸ್ಪತ್ರೆಗಳಲ್ಲಿ ಆರೋಗ್ಯ ಸಂಬAಧಿ ಸೇವೆಗಳನ್ನು ಪಡೆಯಬಹುದು. ಅನೇಕ ಆಸ್ಪತ್ರೆಗಳಲ್ಲಿ ಹಾಸಿಗೆ ಸಂಖ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ತಿಂಗಳಿಗೆ 21 ಸಾವಿರಕ್ಕಿಂತ ಕಡಿಮೆ ಸಂಬಳ ಪಡೆಯುವ ಕೈಗಾರಿಕಾ ಕಾರ್ಮಿಕರನ್ನು ಇಎಸ್‌ಐಸಿ ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗುತ್ತದೆ. ಪ್ರತಿ ತಿಂಗಳು ಸಂಬಳದ ಒಂದು ಭಾಗವನ್ನು ಕಡಿತಗೊಳಿಸಲಾಗುತ್ತದೆ. ಇದನ್ನು ಇಎಸ್‌ಐಸಿ ವೈದ್ಯಕೀಯ ಪ್ರಯೋಜನಕ್ಕೆ ಠೇವಣಿ ಇಡಲಾಗುತ್ತದೆ.

Leave a Reply

Your email address will not be published. Required fields are marked *

You May Also Like

ಮೌಲ್ಯ ಮಾಪನವಿಲ್ಲದೆ ವಿಟಿಯು ಪರೀಕ್ಷೆ ತೇರ್ಗಡೆಗೆ ಅಭಿಯಾನ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಡಿಯಲ್ಲಿ ಸುಮಾರು 2000ಕ್ಕೂ ಹೆಚ್ಚು ಕಾಲೇಜುಗಳು ಮಾನ್ಯತೆ ಪಡೆದಿವೆ. ಈ ಎಲ್ಲಾ ಕಾಲೇಜುಗಳ ವಿದ್ಯಾರ್ಥಿಗಳು ಮೌಲ್ಯಮಾಪನವಿಲ್ಲದೆ ವಿಟಿಯು ಎಲ್ಲಾ ವಿದ್ಯಾಥಿಗಳನ್ನು ತೆರ್ಗಡೆ ಮಾಡಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ.

ಎ.ಪಿ.ಎಮ್.ಸಿ ಅಧ್ಯಕ್ಷರ ಆಯ್ಕೆ: ತಡೆಯಾಜ್ಞೆ ತೆರವು ಗೊಳಸಿ ಪ್ರಕರಣ ಮುಂದುವರೆಸಿದ ನ್ಯಾಯಾಲಯ

ಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೇ ನಡೆದಿತ್ತು. ಇದರಲ್ಲಿ ಬಿಜೆಪಿಯ ರವೀಂದ್ರ ಉಪ್ಪಿನಬೆಟಗೇರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರದ ಬೆಳವಣಿಗೆಯಲ್ಲಿ ಈ ಬಗ್ಗೆ ಚುನಾವಣೆ ಪ್ರಕ್ರಿಯೇ ಪ್ರಶ್ನಿಸಿ ಹಿಂದಿನ ಅವಧಿಯ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ಇದರಿಂದ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.

ಮೋಟಾರ್ ರಿವೈಂಡಿಗ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ವರದಿ: ವಿಠಲ ಕೆಳೂತ್ ಮಸ್ಕಿ: ದೇವನಾಂಪ್ರಿಯ ಅಶೋಕ ಮೋಟಾರ ರಿವೈಂಡಿಗ್ ಕಾರ್ಮಿಕ ಸಂಘದ ನೂತನ ಪದಾಧಿಕಾರಿಗಳ…

ಏಡ್ಸ್ ರೋಗ ಹತ್ತಿಕ್ಕಲು ಜನಜಾಗೃತಿ ಹೆಚ್ಚಳ-ಬಾಬುರಾವ ತಳವಾರ

ಆಲಮಟ್ಟಿ: 2030 ರೊಳಗೆ ಭಾರತದಲ್ಲಿ ಮಹಾಮಾರಿ ಏಡ್ಸ್ ರೋಗದ ಹಾವಳಿ ಸಂಪೂರ್ಣವಾಗಿ ತಡೆಗಟ್ಟಬೇಕಿದೆ. ಈ ಮಾರಕ…