ಗದಗ: ನಗರದ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ಕುಮಾರ್ ಸಿಂಗ್ ಶುಕ್ರವಾರ ಭೇಟಿ ನೀಡಿ, ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಸುದ್ದಿಗಾರರೊಂದಿಗೆ ಮತನಾಡಿದ ಅವರು, ಗದಗ-ವಾಡಿ ರೈಲು ಮಾರ್ಗಕ್ಕೆ ಸಂಬAಧಿಸಿದAತೆ ಲಿಖಿತ ಮಾಹಿತಿ ಒದಗಿಸಲಾಗುವುದು. ಪ್ರಸ್ತುತ ಇರುವ ರೈಲೆ ನಿಲ್ದಾಣ ಯೋಜನೆಗಳ ಪರಿಶೀಲನೆ ಮಾಡಲಾಗಿದೆ. ಹೊಸ ಯೋಜನೆಗಳಿಗೆ ಕುರಿತಂತೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ನಂತರ ರೈಲು ನಿಲ್ದಾಣದ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ಭಾರತರತ್ನ ಡಾ.ಭೀಮಸೇನ್ ಜೋಶಿ ಹಾಗೂ ಗಾನಯೋಗಿ ಡಾ.ಪಂಡಿತ ಪುಟ್ಟರಾಜ ಗವಾಯಿ ಅವರ ಪುತ್ಥಳಿಗಳನ್ನು ಅನಾವರಣಗೊಳಿಸಿದರು.

ರೈಲು ನಿಲ್ದಾಣ ಹಾಗೂ ಸಿಬ್ಬಂದಿಗಳ ಕಾರ್ಯ ವೈಖರಿ ವಿವರಿಸುವ ಹಾಗೂ ನಿಲ್ದಾಣದ ಪ್ರಾತ್ಯಕ್ಷಿಕೆ ಬಿಂಬಿಸುವ ಚಿತ್ರಗಳ ಗ್ಯಾಲರಿ ಉದ್ಘಾಟಿಸಿ ವೀಕ್ಷಿಸಿದರು.

ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷ ಗಣೇಶ್‌ಸಿಂಗ್ ಬ್ಯಾಳಿ ಹಾಗೂ ಜಿಲ್ಲಾ ವಾಣಿಜ್ಯೋಧ್ಯಮ ಸಂಸ್ಥೆ ಪದಾಧಿಕಾರಿಗಳು ಜಿಲ್ಲೆಯ ರೈಲ್ವೆ ಯೋಜನೆಗಳ ಅನುಷ್ಠಾನ ಕುರಿತಂತೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *

You May Also Like

ಸುಮಲತಾಗೆ ಪಾಸಿಟಿವ್: ಸಂಪರ್ಕಿತರಿಂದ ಪರೀಕ್ಷೆಗೆ ರಶ್.!

ಮಂಡ್ಯ: ಸಂಸದೆ ಸುಮಲತಾ ತಮಗೆ ಪಾಸಿಟಿವ್ ಬಂದಿದೆ ಎಂದು ಸೋಮವಾರ ಘೋಷಿಸಿದ್ದರು. ತಮ್ಮ ಸಂಪರ್ಕಿತರ ಪಟ್ಟಿಯನ್ನು…

ರಾಜ್ಯ ಸರ್ಕಾರಕ್ಕೆ ವಿಪಕ್ಷಗಳ ಸಲಹೆ ಏನು ಗೊತ್ತಾ?

ಲಾಕ್ ಡೌನ್ ನಿಂದಾಗಿ ರಾಜ್ಯದ ಜನತೆ ಸಂಕಷ್ಟ ಎದುರಿಸುತ್ತಿದ್ದು, ಹೀಗಾಗಿ ರಾಜ್ಯಕ್ಕೆ ರೂ. 50,000ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಕೇಂದ್ರಕ್ಕೆ ಒತ್ತಾಯಿಸಬೇಕು. ಕೊರೋನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಯ ಖರ್ಚು ವೆಚ್ಚದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.

ಬಡ್ನಿ ಗ್ರಾಮದಲ್ಲಿ ಜೋಳದ ಬೆಳೆಗೆ ಬೆಂಕಿ

ಜೋಳದ ಬೆಳೆಗೆ ಬೆಂಕಿ ಬಿದ್ದು ಮೂರು ಎಕರೆ ಪ್ರದೇಶದಲ್ಲಿ ಬೆಳೆದ ಜೋಳದ ಬೆಳೆ ಹಾನಿಯಾಗೀಡಾಗಿದ ಘಟನೆ ತಾಲೂಕಿನ ಬಡ್ನಿ ಗ್ರಾಮದಲ್ಲಿ ನಡೆದಿದೆ.

ಸಾಧಕಿ ಸುಧಾಮೂರ್ತಿಗೆ ಮುತ್ತಗಿ ಗ್ರಾಮಸ್ತರಿಂದ ಸಂಮಾನ..!

ಉತ್ತರಪ್ರಭ ಸುದ್ದಿ ಆಲಮಟ್ಟಿ:2023ರ ಪದ್ಮ ಭೂಷಣ ಪ್ರಶಸ್ತಿ ಪುರಸ್ಕರಿಸಿದ ಸಾಧಕಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ…