ರೋಣ: ಗಜೇಂದ್ರಗಡ ತಹಶೀಲ್ದಾರ್ ತೋರಿದ ಪತ್ರಿಕಾ ಪ್ರತಿನಿಧಿ ಮೇಲೆ ತೋರಿದ ದರ್ಪ ಖಂಡಿಸಿ ರೋಣ ತಾಲೂಕ ಕಾರ್ಯ ನಿರತ ಪತ್ರಕರ್ತ ಸಂಘದಿಂದ ಮನವಿ ಸಲ್ಲಿಸಲಾಯಿತು.

ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಸುದ್ದಿ ಮಾಡಲು ಹೋದ ವರದಿಗಾರನ ಮೇಲೆ ಗಜೇಂದ್ರಗಡ ದಂಡಾಧಿಕಾರಿ ಅಶೋಕ ಕಲಘಟಗಿ ಅವರು ಅಧಿಕಾರದ ಮದದಲ್ಲಿ ಅಹಂಕಾರದಿಂದ ನಿನ್ನನ್ನು ಡಿಸ್ಮಿಸ್ ಮಾಡುತ್ತೇನೆ ಎಂದು ಅವಾಜ್ ಹಾಕಿರುವ ಘಟನೆ ಗುರುವಾರ ನಡೆದಿದೆ. ಪತ್ರಿಕಾ ಸ್ವಾತಂತ್ರ ಕಿತ್ತು ಕೊಳ್ಳುತ್ತಿರುವ ಇಂತಹ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದು ರೋಣ ತಹಸೀಲ್ದಾರರ ಮುಖಾಂತರ ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಅಶೋಕ ಕಲಘಟಗಿ ಅವರ ಮೇಲೆ ಶಿಸ್ತು ಕ್ರಮ ಜರುಗಿಸದೇ ಹೋದರೆ ಮುಂದಿನ ದಿನಮಾನಗಳಲ್ಲಿ ಜಿಲ್ಲಾದ್ಯಾಂತ ಉಗ್ರ ಪ್ರತಿಭಟನೆ ಮಾಡಲಾಗುವದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ರೋಣ ಕಾರ್ಯನಿರತ ಪತ್ರ ಕರ್ತರಾದ ಯಚ್ಚರಗೌಡ ಗೋವಿಂದಗೌಡರ, ಯಲ್ಲಪ್ಪ ತಳವಾರ, ಕೆ.ಡಿ. ಇಟಗಿ, ಚಂದ್ರು ನೆಲ್ಲೂರ, ಎಮ್.ಎಚ್.ಮೊತೆಖಾನ್, ಸೋಮಶೇಖರ್ ಲದ್ದಿಮಠ, ಪಿ.ಎಸ್.ಪಾಟೀಲ, ಪ್ರಕಾಶ ಗುದ್ನೇಪ್ಪನವರ, ಗಂಗಾಧರ ಕಿರೇಸೂರ ಇನ್ನಿತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಮಾಸ್ಕ-ಸಾಮಾಜಿಕ ಅಂತರಕಡ್ಡಾಯ : ಪಾಲಿಸದಿದ್ದರೆ ದಂಡ

ಇಂದಿನಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್ಯಾಲಿಗೆ ಅವಕಾಶವಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಿಯಮ ಪಾಲಿಸದಿದ್ದರೇ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಸಾರಿಗೆ ಸಂಸ್ಥೆಯ ಬಸ್ ಪಲ್ಟಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿಲಕ್ಷ್ಮೇಶ್ವರ: ಸಾರಿಗೆ ಸಂಸ್ಥೆಯ ಬಸವೊಂದರ ವೀಲ್ ಜೇಂಟ್ ಕಟ್ ಆಗಿರುವ ಪರಿಣಾಮ, ಬಸ್ ಪಲ್ಟಿಯಾಗಿ…

ಒಂದು ತಿಂಗಳಿನಿಂದ ಕೊರೊನಾ ಚಿಕಿತ್ಸೆ : 6 ಬಾರಿಯ ಟೆಸ್ಟ್ ನಲ್ಲಿಯೂ ವರದಿ ಪಾಸಿಟಿವ್!

ಮಂಗಳೂರು: ಇಲ್ಲೊಬ್ಬ ವ್ಯಕ್ತಿ ಕೊರೊನಾ ಸೋಂಕು ತಗುಲಿ ತಿಂಗಳಾದರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬರೋಬ್ಬರಿ…

ಸಹಕಾರ ಬ್ಯಾಂಕ್ ಗಳ ಮೂಲಕ ರೈತರಿಗೆ 20,810 ಕೋಟಿ ಬೆಳೆ ಸಾಲ-ಸಚಿವ ಸೋಮಶೇಖರ್

ಬೆಂಗಳೂರು: ಸಹಕಾರ ಬ್ಯಾಂಕ್ ಗಳ ಮೂಲಕ ಈ ವರ್ಷ20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗುರಿ ತಲುಪಲು ರಾಜ್ಯದ 212 ಡಿಸಿಸಿ ಬ್ಯಾಂಕ್ ಗಳಿಗೆ ತಿಳಿಸಲಾಗಿದೆ. 303 ಲಕ್ಷ ರೈತರನ್ನು ತಲುಪಲು ಹೇಳಿದ್ದೇವೆ ಎಂದರು.