ಬೆಂಗಳೂರ: ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸುವಂತೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್​ ಸುತ್ತೋಲೆ ಹೊರಡಿಸಿದ್ದಾರೆ.

ಈ ಹಿಂದೆಯೂ ವಾರದ ರಜೆ ಕಡ್ಡಾಯಗೊಳಿಸುವಂತೆ ಆದೇಶ ನೀಡಲಾಗಿತ್ತು. ಆದ್ದರಿಂದ  ಕೆಲ ಸಿಬ್ಬಂದಿಗಳು ತಮಗೆ ಠಾಣಾಧಿಕಾರಿಗಳು ವಾರದ ರಜೆಯನ್ನ ನೀಡುತ್ತಿಲ್ಲ ​ಎಂದು ಡಿಜಿ ಮತ್ತು ಐಜಿಪಿ  ಪ್ರವೀಣ್ ಸೂದ್ ಅವರಿಗೆ ಕೆಲ ನೊಂದ ಪೊಲೀಸರು ಪತ್ರದ ಮೂಲಕ ದೂರು ನೀಡಿದ್ದರು. ಈ ಬಗ್ಗೆ ಎಚ್ಚೆತ್ತುಕೊಂಡಿರುವ ಪ್ರವೀಣ್‌ ಸೂದ್‌ ಅವರು ತಮ್ಮ ಠಾಣೆಯಲ್ಲಿ ಕೆಲಸ ಮಾಡುವ ಪೊಲೀಸ್‌ ಅಧಿಕಾರಿಗಳಿಗೆ ಕಡ್ಡಾಯವಾಗಿ ರಜೆ ನೀಡುವಂತೆ ಸೂಚಿಸಿದ್ದಾರೆ.

ತುರ್ತು ಪರಿಸ್ಥಿತಿ ಬಿಟ್ಟು ಎಲ್ಲ ಸಂದರ್ಭದಲ್ಲಿ ವಾರದ ರಜೆ‌ ಕಡ್ಡಾಯವಾಗಿ ನೀಡಬೇಕು ಎಂದು ವಲಯ ಐಜಿಪಿ ಮತ್ತು ಎಸ್ ಪಿ ಗಳಿಗೆ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಾರುಕಟ್ಟೆಯಲ್ಲಿಲ್ಲ ಮೆಣಸಿನಕಾಯಿ ಘಾಟು..! ರೈತರಿಗೆ ತಪ್ಪದ ಪರಿಪಾಟಲು..!

ಕೊರೋನಾ ಕಾಟದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರ ಸಂಕಷ್ಟದ ಬದುಕಿನ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ನಿಮ್ಮ ಉತ್ತರ ಪ್ರಭ ಮಾಡಿದೆ

ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರನ್ನು ಕೆರಳಿಸಿದ ಮಹಾರಾಷ್ಟ್ರ ಸಚಿವ!

ಔರಂಗಾಬಾದ್ : ಗಡಿ ಹಾಗೂ ಭಾಷೆಯ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಮಹಾರಾಷ್ಟ್ರದ ಸಚಿವ ಜಯಂತ್ ಪಾಟೀಲ್, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

ಲಕ್ಷ್ಮೇಶ್ವರ:ಬತ್ತಿದ ಬೋರ್ ವೆಲ್ ನಲ್ಲಿ ಜಲಲ ಧಾರೆ…!

ಅಂತರ್ಜಲ ಹೆಚ್ಚಳದಿಂದ ಬತ್ತಿದ ಕೊಳವೆ ಬಾವಿಯಲ್ಲಿ ನೀರು ಚಿಮ್ಮುತ್ತಿದೆ. ಇದರಿಂದ ರೈತರಲ್ಲಿ ಸಂತಸ ಮೂಡಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಆಲಮಟ್ಟಿ 26 ಗೇಟ್ ಓಪನ್ – ಅಪಾರ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿಆಲಮಟ್ಟಿ: ನೆರೆಯ ಮಹಾರಾಷ್ಟ್ರ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಕೃಷ್ಣಾ ನದಿ ಹರಿವಿನಲ್ಲಿ…