ಲಕ್ಷ್ಮೇಶ್ವರ: ರಾಜ್ಯದಲ್ಲಿ ದೇವಾಂಗ ಸಮಾಜ ಅತ್ಯಂತ ಆರ್ಥಿಕವಾಗಿ ರಾಜಕೀಯ ಹಾಗು ಶೈಕ್ಷಣಿಕವಾಗಿ ಮತ್ತು ಸಮಾಜಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದ್ದು ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ದೇವಾಂಗ ಅಭಿವೃದ್ಧಿ ಮಂಡಳಿ ಅಥವಾ ನಿಗಮವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ ಸಮಾಜದ ಬಾಂದವರು ಶನಿವಾರ ತಹಶಿಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ ದೇವಾಂಗ ಸಮಾಜವೂ ನೇಕಾರಿಕೆ ವೃತ್ತಿಯನ್ನೇ ನಂಬಿ ಬದಕು ಸಾಗಿಸುತ್ತಿದ್ದು ಇತ್ತೀಚಿನ ದಿನಗಳಲ್ಲಿ ನೆಕಾರಿಕೆಯಲ್ಲಿ ಆದುನಿಕ ತಂತ್ರಜ್ಞಾನ ಬಳಸುತ್ತಿರುವುದರಿಂದ ಆರ್ಥಿಕ ಹೊರೆಯಾಗಿ ವೃತ್ತಿಯನ್ನೇ ಬಿಟ್ಟು ಕೈಚೆಲ್ಲಿ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಈ ಸಮಾಜದ ಅಭಿವೃದ್ಧಿ ಆಗಬೇಕಾದರೆ ಪ್ರತ್ಯೇಕ ನಿಗಮದ ಸ್ಥಾಪನೆ ಅವಶ್ಯವಾಗಿದೆ. ಈಗಾಗಲೇ ಅನೇಕ ಮಂಡಳಿಗಳು ಅಸ್ತಿತ್ವದಲ್ಲಿದ್ದು, ಅದರರೋಟ್ಟಿಗೆ ದೇವಾಂಗ ಸಮಾಜದ ಅಭಿವೃದ್ಧಿ ಮಂಡಳಿಯು ಆಗಬೇಕಿದೆ. ಆದರಿಂದ ಜನಾಂಗದ ಹಿತಕ್ಕಾಗಿ ಮುಖ್ಯಮಂತ್ರಿ ಯುಡಿಯೂರಪ್ಪನವರು ನಿಗಮದ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜುಜಪ್ಪ ಅಗಡಿ, ಸುರೇಶ ಗುಲಗಂಜಿ, ಈರಣ್ಣ ಗಾಂಜಿ, ಈರಪ್ಪ ಸಾಂಬರಾಣಿ, ಕೃಷ್ಣ ಕೊಪ್ಪದ, ವಿಜಯ ಗುಲಗಂಜಿ, ಬಾಲಚಂದ್ರನ ನಂದರಗಿ, ದೇವರಾಜ ಬೇಟಗೇರಿ ಸೇರಿದಂತೆ ಅನೇಕರು ಇದ್ದರು