ಲಕ್ಷ್ಮೇಶ್ವರ: ರಾಜ್ಯದಲ್ಲಿ ದೇವಾಂಗ ಸಮಾಜ ಅತ್ಯಂತ ಆರ್ಥಿಕವಾಗಿ ರಾಜಕೀಯ ಹಾಗು ಶೈಕ್ಷಣಿಕವಾಗಿ ಮತ್ತು ಸಮಾಜಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದ್ದು ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ದೇವಾಂಗ ಅಭಿವೃದ್ಧಿ ಮಂಡಳಿ ಅಥವಾ ನಿಗಮವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ ಸಮಾಜದ ಬಾಂದವರು ಶನಿವಾರ ತಹಶಿಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ ದೇವಾಂಗ ಸಮಾಜವೂ ನೇಕಾರಿಕೆ ವೃತ್ತಿಯನ್ನೇ ನಂಬಿ ಬದಕು ಸಾಗಿಸುತ್ತಿದ್ದು ಇತ್ತೀಚಿನ ದಿನಗಳಲ್ಲಿ ನೆಕಾರಿಕೆಯಲ್ಲಿ ಆದುನಿಕ ತಂತ್ರಜ್ಞಾನ ಬಳಸುತ್ತಿರುವುದರಿಂದ ಆರ್ಥಿಕ ಹೊರೆಯಾಗಿ ವೃತ್ತಿಯನ್ನೇ ಬಿಟ್ಟು ಕೈಚೆಲ್ಲಿ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಈ ಸಮಾಜದ ಅಭಿವೃದ್ಧಿ ಆಗಬೇಕಾದರೆ ಪ್ರತ್ಯೇಕ ನಿಗಮದ ಸ್ಥಾಪನೆ ಅವಶ್ಯವಾಗಿದೆ. ಈಗಾಗಲೇ ಅನೇಕ ಮಂಡಳಿಗಳು ಅಸ್ತಿತ್ವದಲ್ಲಿದ್ದು, ಅದರರೋಟ್ಟಿಗೆ ದೇವಾಂಗ ಸಮಾಜದ ಅಭಿವೃದ್ಧಿ ಮಂಡಳಿಯು ಆಗಬೇಕಿದೆ. ಆದರಿಂದ ಜನಾಂಗದ ಹಿತಕ್ಕಾಗಿ ಮುಖ್ಯಮಂತ್ರಿ ಯುಡಿಯೂರಪ್ಪನವರು ನಿಗಮದ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜುಜಪ್ಪ ಅಗಡಿ, ಸುರೇಶ ಗುಲಗಂಜಿ, ಈರಣ್ಣ ಗಾಂಜಿ, ಈರಪ್ಪ ಸಾಂಬರಾಣಿ, ಕೃಷ್ಣ ಕೊಪ್ಪದ, ವಿಜಯ ಗುಲಗಂಜಿ, ಬಾಲಚಂದ್ರನ ನಂದರಗಿ, ದೇವರಾಜ ಬೇಟಗೇರಿ ಸೇರಿದಂತೆ ಅನೇಕರು ಇದ್ದರು

Leave a Reply

Your email address will not be published. Required fields are marked *

You May Also Like

ಕೆ.ಎಸ್.ಆರ್.ಟಿ.ಸಿ ನೌಕರರ ವಿರುದ್ಧ ಹುನ್ನಾರ!: ಸಂಬಳವಿಲ್ಲದೇ ಒಂದ್ ವರ್ಷ ರಜೆಗೆ ನಿರ್ಧಾರ!

ಕರ್ನಾಟಕ ರಾಜ್ಯ ಸಾರಿಗೆ ನಿಗಮದಲ್ಲಿ ನೌಕರರ ಹಕ್ಕುಗಳನ್ನು ದಮನ ಮಾಡಲು ವ್ಯವಸ್ಥಿತ ಹುನ್ನಾರ ನಡೆದಿದೆ ಎಂದು ಚಾಲಕರು ಮತ್ತು ನಿರ್ವಾಹಕರು ಆತಂಕಗೊಂಡಿದ್ದಾರೆ.

ರಾಜ್ಯದಲ್ಲಿ ಅಪಾಯಕಾರಿ ಮಟ್ಟದಲ್ಲಿ ಸೋಂಕು: ಇಂದು 4120 ಪಾಸಿಟಿವ್ , ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 4120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…

ಸಾರಿಗೆ ಸಂಸ್ಥೆ ಸಿಬ್ಬಂದಿಗೂ ವಕ್ಕರಿಸಿದ ಸೋಂಕು!

ಕಾರವಾರ: ಬಿಎಂಟಿಸಿ ನೌಕರರಲ್ಲಿ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸದ್ಯ ಸಾರಿಗೆ ಸಂಸ್ಥೆಯ ನೌಕರಸ್ಥರಿಗೂ ಇದರ…

ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..!

ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು…