ವಾಷಿಂಗ್ಟನ್ : ದೇಶದಲ್ಲಿ ಜ.30 ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಹುತಾತ್ಮರಾದ ದಿನ ಆಚರಿಸಲಾಗುತ್ತಿದ್ದು, ಅಮೇರಿಕದಲ್ಲಿ ಮಹಾತ್ಮ ಗಾಂಧೀಜಿ ಅವರ ಕಂಚಿನ ಪ್ರತಿಮೆಯನ್ನು ದ್ವಂಸಗೊಳಸಿದ್ದಾರೆ.

ಅಮೇರಿಕದ ಕ್ಯಾಲಿರ್ಪೋನಿಯಾದ ಡೇವಿಸ್ ನಗರದಲ್ಲಿ ಕಿಡಿಗೇಡಿಗಳಿಂದ ಈ ಘಟನೆ ನಡೆದಿದ್ದು, ಇದಕ್ಕೆ ಭಾರತೀಯ ಮೂಲದ ಅಮೆರಿಕನ್ನರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಡೇವಿಸ್ ನಗರ ಸ್ಥಳೀಯ ಆಡಳಿತದ ಸದಸ್ಯ ಲೂಕಸ್ ಫ್ರೀರಿಚ್ಸ್, ನಗರದ ಸೆಂಟ್ರಳ್ ಪಾರ್ಕ್ ನಲ್ಲಿರುವ ಗಾಂಧಿಜಿ ಅವರ 6 ಅಡಿ ಎತ್ತರದ, 294 ಕೆ.ಜಿ ತೂಕದ ಕಂಚಿನ ಪ್ರತಿಮೆಯನ್ನು ದ್ವಂಸಗೊಳಿಸಲಾಗಿದೆ. ಸದ್ಯ ಪ್ರತಿಮೆಯನ್ನು ಅಲ್ಲಿಂದ ತೆಗೆಯಲಾಗಿದ್ದು, ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದೆ ಎಂದು ಹೇಳಿದ್ದಾರೆ.

ಜ.27 ರಂದು ದ್ವಂಸಗೊಂಡಿರುವ ಗಾಂಧಿ ಪ್ರತಿಮೆ ಪತ್ತೆಯಾಗಿತ್ತು. ಈ ಬಗ್ಗೆ ಪಾರ್ಕ್ ನ ಸಿಬ್ಬಂದಿ ಮಾಹಿತಿ ನೀಡಿದ್ದರು. ಗಾಂಧೀಜಿ ಅವರ ಪ್ರತಿಮೆಯು ಡೇವಿಸ್ ನಗರದ ಸಂಸ್ಕೃತಿಯ ಒಂದು ಭಾಗವಾಗಿದೆ. ನಾವು ಈ ಘಟಣೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ರೈಲು ಪ್ರಾರಂಭಕ್ಕೆ ಬ್ಯಾಳಿ ಒತ್ತಾಯ

ಬಹಳಷ್ಟು ಪ್ರಯಾಣಿಕರು ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ ಮತ್ತು ಬಳ್ಳಾರಿಯಿಂದ ರಾಯಚೂರು, ಮಂತ್ರಾಲಯ, ಗದ್ವಾಲ್ ಜಲಮ್ಮದೇವಿಗೆ ಕರ್ನೂಲ ಮೂಲಕ ಶ್ರೀಶೈಲಂಗೆ ಹೋಗಿ ಬರಲು ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ಈ ರೈಲುಗಾಡಿ ಕೋವಿಡ್ 19 ಮಹಾಮಾರಿಗಿಂತ ಮುಂಚೆ ಇದ್ದು ಅದು ಪ್ರಯಾಣಿಕರಿಗೆ ಬಹಳ ಅನುಕೂಲವಾಗಿತ್ತು

ಪಿಯುಸಿ ಫಲಿತಾಂಶ ದಿನಾಂಕ ತಿಳಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಇಂದು ಪಿಯುಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

ಮುಂಬಯಿನಲ್ಲಿ ಮನೆ ಮಾಡುತ್ತಿರುವ ಆತಂಕ!

ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಮಿತಿ ಮೀರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ರಾಜ್ಯದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಋತುಚಕ್ರದ ಬಗ್ಗೆ ಬೋಲ್ಡ್ ಆಗಿ ಮಾತನಾಡಿದ ಮಾದಕ ನಟಿ!

ಬೆಂಗಳೂರು: ಆಗ ನನಗೆ 14 ವರ್ಷ ವಯಸ್ಸು. ಈ ವೇಳೆ ನಮ್ಮ ಮನೆಯಲ್ಲಿ ದೇವರ ಪೂಜೆ ನಡೆಯುತ್ತಿತ್ತು. ಆ ಪೂಜೆಯಲ್ಲಿ ನಾನು ಪಾಲ್ಗೊಂಡಿದ್ದೆ. ಆದರೆ ಆಗಲೇ ನನಗೆ ಪೀರಿಯಡ್ಸ್ ಆಯಿತು. ಆಗ ಅಮ್ಮ ನನ್ನ ಜೊತೆಯಲ್ಲಿ ಇರಲಿಲ್ಲ. ಆದ್ದರಿಂದ ನಾನು ನನ್ನ ಪಕ್ಕದಲ್ಲಿದ್ದ ಚಿಕ್ಕಮ್ಮನಿಗೆ ಈ ವಿಚಾರವನ್ನು ತಿಳಿಸಿದೆ. ನಾನು ಆ ಸಮಯದಲ್ಲಿ ಸ್ಯಾನಿಟರಿ ಪ್ಯಾಡ್ ಕೂಡ ಧರಿಸಿರಲಿಲ್ಲ ಎಂದು ಅನೇಕ ವರ್ಷಗಳ ಹಿಂದೆ ನಡೆದಿದ್ದ ಘಟನೆಯ ಬಗ್ಗೆ ಹೇಳಿಕೊಂಡಿದ್ದಾರೆ.