ಸಾಗರ್ ಮೇವುಂಡಿ

ಮುಂಡರಗಿ: ಜಾನುವಾರುಗಳಿಗೆ ಚಿಕಿತ್ಸೆ ನೀಡುವುದಕ್ಕೆ ಪಶು ಆಸ್ಪತ್ರೆ ಇದ್ದರೂ ಕೂಡ ಜಾನುವಾರುಗಳಿಗೆ ಚಿಕಿತ್ಸೆ ಸಿಗದೇ ಜಾನುವಾರಗಳು ನರಳಾಡುವಂತಹ ಪರಸ್ಥಿತಿ ಎದುರಾಗಿದೆ.

      ತಾಲ್ಲೂಕಿನ ಡಂಬಳ ಹೋಬಳಿಯಲ್ಲಿ ಪಶು ಆಸ್ಪತ್ರೆ ಇದ್ದರೂ, ಅಲ್ಲಿ ವೈದ್ಯರ ಕೊರತೆಯಿಂದ ರೈತರು ಪ್ರತಿ ದಿನ ಜಾನುವಾರ ದೊಂದಿಗೆ ಪಶು ಆಸ್ಪತ್ರೆಗೆ ಬಳಿ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.

ಪಶು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇದ್ದು, ಖಾಲಿ ಇರುವ ಹುದ್ದೆಗಳಿಗೆ ವೈದ್ಯರನ್ನು ನೇಮಿಸುವಂತೆ ಸರ್ಕಾರಕ್ಕೆ ಹಲವಾರು ಬಾರಿ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೂ ವೈದ್ಯರ ನೇಮಕ ಮಾಡಿಲ್ಲ ಈಗಿರುವ ಸಿಬ್ಬಂದಿಯೇ ಕಾರ್ಯನಿರ್ವಹಿಸುತ್ತಿದ್ದಾರೆ.

–     ಡಾ.ಎಸ್.ವಿ.ತಿಗರಿಮಠ, ತಾಲೂಕು ಪಶು ವೈದ್ಯಾಧಿಕಾರಿ.

     ಪಶು ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ಅನಾರೋಗ್ಯಕ್ಕೆ ತುತ್ತಾದ ದನಕರುಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯದೆ ಪಶುಗಳ ಪರಿತಪಿಸುತ್ತಿವೆ. ವಾರದಲ್ಲಿ 2 ಬಾರಿ ಮತ್ರ ಪಶು ಆಸ್ಪತ್ರೆಗೆ ವೈದ್ಯರು ಬರುವುದರಿಂದ ಅನಾರೋಗ್ಯಕ್ಕೆ ತುತ್ತಾದ ಜಾನುವಾರಗಳಿಗೆ ಸರಿಯಾದ ಚಿಕಿತ್ಸೆ ಸಿಗದಂತಾಗಿದೆ. ಪಶು ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದಿರುವುದರಿಂದ ಹಿರಿಯ ಪಶುವೈದ್ಯಕೀಯ ಪರೀಕ್ಷಕರು ಮತ್ತು ಪಶು ವೈದ್ಯಕೀಯ ಸಹಾಯಕ ಸಿಬ್ಬಂದಿ ಪಶುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

      ಸಿಬ್ಬಂದಿ ಕೊರತೆಯಿಂದ ಜಾನುವಾರಗಳಿಗೆ ಪಶು ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆಗೆ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ತಕ್ಷಣವೇ ಇಲ್ಲಿನ ಪಶು ಆಸ್ಪತ್ರೆಗೆ ವೈದ್ಯಾಧಿಕಾರಿಗಳನ್ನು ನೇಮಿಸಬೇಕು ಎಂದು ಗ್ರಾಮಸ್ಥರಾದ ಸೋಮಣ್ಣ ಹೈತಾಪೂರ, ಮುತ್ತು ಜಕ್ಕಣ್ಣವರ್, ಕೋಟೇಶ್ ನೋಟಗಾರ ಒತ್ತಾಯಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಚಿತ್ರಕಲಾ, ಜಾನಪದ ವಿವಿ ಸಿಬ್ಬಂದಿ ವೇತನಕ್ಕೆ 11.60 ಲಕ್ಷ ಬಿಡುಗಡೆ: ವಿಪ ಸದಸ್ಯ ಸಂಕನೂರ

ರಾಜ್ಯದಲ್ಲಿ ಅಡ್ಹಾಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಚಿತ್ರಕಲಾ ಮಹಾವಿದ್ಯಾಲಯದ ಹಾಗೂ ಜಾನಪದ ವಿಶ್ವವಿದ್ಯಾಲಯ, ಕನ್ನಡ ವಿಶ್ವವಿದ್ಯಾಲಯ ಹಂಪಿ, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವುಗಳ ಸಿಬ್ಬಂದಿಗಳಿಗೆ 2020-21ನೇ ಸಾಲಿನಲ್ಲಿ ನೀಡಬೇಕಾದಂತಹ ಬಾಕಿ ವೇತನಕ್ಕಾಗಿ ಆರ್ಥಿಕ ಇಲಾಖೆ 11 ಕೋಟಿ 60 ಲಕ್ಷ ಹಣ ಬಿಡುಗಡೆ ಮಾಡಿದೆ ಎಂದು ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ.ಸಂಕನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದ ನಕ್ಷೆ ತಪ್ಪಾಗಿ ತೋರಿಸಿದ್ದಕ್ಕೆ ಟ್ವೀಟರ್ ನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸರ್ಕಾರ!

ನವದೆಹಲಿ : ಟ್ವೀಟರ್ ನಲ್ಲಿ ತಪ್ಪಾಗಿ ಭಾರತೀಯ ನಕ್ಷೆ ತೋರಿಸಿದ್ದಕ್ಕೆ ಕೇಂದ್ರ ಸರ್ಕಾರವು ಟ್ವೀಟರ್ ಸಿಇಓ ಜಾಕ್ ಡೋರ್ಸಿ ಅವರಿಗೆ ಪತ್ರ ಬರೆದಿದೆ.

ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡವರಿಗೆ ಮಾತ್ರ ಪಡಿತರ ಧಾನ್ಯ ವಿತರಣೆ: ಕೊತಬಾಳ ಗ್ರಾಪಂ ನಿರ್ದಾರ

ಗದಗ: ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಏನೆಲ್ಲ ನಿರ್ಧಾರಗಳನ್ನು ತೆಗೆದುಕೊಂಡರೂ ಜನರು ಮಾತ್ರ ಇನ್ನು ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಆದ್ರೆ ಗ್ರಾಮ ಪಂಚಾಯತಿ ಒಂದು ಮನಸ್ಸು ಮಾಡಿದ್ರೆ ಏನೆಲ್ಲವೂ ಸಾಧ್ಯ ಅನ್ನೋದು ತೋರಿಸಿಕೊಟ್ಟಿದೆ ಆ ಊರಿನ ಗ್ರಾಮ ಪಂಚಾಯತಿ.

ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ : ಅವಿರೋಧ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ ಉಳಿದ ಅವಧಿಗೆ…