ಮುಳಗುಂದ: ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ. ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹೊನ್ನಪ್ಪ ವಡ್ಡರ ಹೇಳಿದರು.

ಅವರು ಸ್ಥಳೀಯ ಸರ್ಕಾರಿ ಕನ್ನಡ ಶಾಲೆ ನಂ 1 ರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಭಾನುವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪಲ್ಸ್ ಪೋಲಿಯೋ ಲಸಿಕೆ ಮಕ್ಕಳಿಗೆ ತಗಲಬಹುದಾದ ಅಂಗವಿಕಲತೆಯನ್ನ ತಡೆಗಟ್ಟುತ್ತದೆ. ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವಿನಿ ಕಬಾಡಿ,ಡಾ. ಸುನಂದಾ, ಸಿಬ್ಬಂದಿ ಎನ್.ಎಚ್.ನಜೀರ, ಎಪ್.ವೈ.ಬಾರಿಕಾಯಿ,ಎಸ್.ಎಚ್.ಹೊಂಬಳ, ಹಾಗೂ ಅಂಗನವಾಡಿ ಕಾರ್ಯಕರ್ತೆ ಎಂ.ಎಂ ಅಬ್ಬುನವರ ಇದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 39 ಪಾಸಿಟಿವ್ : ಸೋಂಕಿನ ಮಿಂಚಿನ ಓಟ!

ಜಿಲ್ಲೆಯಲ್ಲಿಂದು 39 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 370 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 194.

ಮಲೆನಾಡ ಜನರ ನಿದ್ದೆಗೆಡಿಸಿದ ಪಾದರಾಯನಪುರ!

ಪಾದರಾಯನಪುರದ ಗಲಾಟೆ ಮಲೆನಾಡಿನಲ್ಲಿ ಭಯ ಹುಟ್ಟಿಸುತ್ತಿದೆ. ಕೊರೊನಾ ದೇಶ ಹಾಗೂ ರಾಜ್ಯದಲ್ಲಿ ವಕ್ಕರಿಸಿದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ಒಂದು ಕೇಸ್ ಕೂಡ ಇರಲಿಲ್ಲ. ಆದರೆ, ಸದ್ಯ ಈ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಅತಿಥಿ ಉಪನ್ಯಾಸಕ ನೇಮಕಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್

ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.

ವಿಶಾಖಪಟ್ಟಣ ಘಟನೆ: ಕನ್ನಡಿಗರಿಗಾಗಿ ಸಹಾಯವಾಣಿ

ವಿಶಾಖಪಟ್ಟಣದಲ್ಲಿ ಸಂಭವಿಸಿದ ವಿಷಾನೀಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.