ಲಕ್ಷ್ಮೇಶ್ವರ: ತಾಲೂಕಿನ ಗೊಜನೂರು ಎರೆ ಬೂದಿಹಾಳ ರಸ್ತೆ ಕಾಮಗಾರಿಗೆ ರವಿವಾರ ಶಾಸಕ ರಾಮಣ್ಣ ಲಮಾಣಿ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ರಾಮಣ್ಣ, ಗೊಜನೂರು ಭಾಗದ ರೈತರ ಸಾವಿರಾರು ಜಮೀನುಗಳು ಈ ರಸ್ತೆಯಲ್ಲಿಯೇ ಇದ್ದು ಮಳೆಗಾಲದಲ್ಲಿ ರೈತರು ತ್ರೀವ ತೊಂದರೆ ಅನುಭವಿಸುತ್ತಿದ್ದರು. ಅನೇಕ ವರ್ಷಗಳಿಂದ ಈ ರಸ್ತೆಯ ನಿರ್ಮಾಣದ ಬೇಡಿಕೆ ಕನಸಾಗಿ ಉಳಿದಿತ್ತು. ಈ ರಸ್ತೆಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ ಇಲಾಖೆಯ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ 5.65 ಕಿಮಿ ರಸ್ತೆಯನ್ನು ಸುಧಾರಣಾ ಮಾಡಿ 5.32 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಕಾರ್ಯ ಕೈಗೊಳಲಾಗುತ್ತಿದೆ. ಗ್ರಾಮಸ್ಥರ ಬಹು ದಿನದ ಬೇಡಿಕೆಗೆ ಸ್ಪಂದಿಸಿದ ಆತ್ಮಸಂತೃಪ್ತಿ ನನಗಿದೆ ಎಂದರು.

ಇನ್ನು ಹೆಚ್ಚಿನ ಪ್ರಮಾಣದಲ್ಲಿ ಗ್ರಾಮೀಣ ಪ್ರದೇಶದ ರೈತ ಸಂಪರ್ಕ ರಸ್ತೆಗಳನ್ನು ಸುಧಾರಣೆಗಾಗಿ ಶ್ರೀಘವೇ ಸಾಕಷ್ಟು ಅನುದಾನ ತರಲಾಗುವುದು ಎಂದರು.

ಈ ಸಂದರ್ಭದಲ್ಲಿ ಹಿರಿಯರಾದ ಎಸ್.ಪಿ.ಪಾಟೀಲ್, ಶಿವನಗೌಡ್ರು ಪಾಟೀಲ್, ನಾಗಪ್ಪಶೆಟ್ಟರ ವಡಕಣ್ಣವರ, ವಿರುಪಾಕ್ಷ ಪಾಟೀಲ್, ಶಂಭು ಸೊರಟೂರ, ಶೇಖಣ್ಣ ಸೊರಟೂರ, ಗುತ್ತಿಗೆದಾರ ರವೀಂದ್ರ ರೆಡ್ಡಿ ಬಾಪುಗೌಡ ಪಾಟೀಲ್, ರಮೇಶ ದನದಮನಿ, ದುಂಡೇಶ ಕೊಟಗಿ, ಫಕ್ಕೀರೇಶ ರಟ್ಟೆಹಳ್ಳಿ, ಗಂಗಾಧರ ಮೆಣಸಿನಕಾಯಿ, ಸಿ.ಪಿ.ಮಾಡಳ್ಳಿ, ಮಲ್ಲೇಶಪ್ಪ ಲಮಾಣಿ, ವಿರುಪಾಕ್ಷಪ್ಪ ಅಣ್ಣಿಗೇರಿ, ಹನಮಂತಗೌಡ ಪಾಟೀಲ್, ಕುಮಾರ ಗಾವಿ, ಗೀತಾ ಪುರದ, ದ್ಯಾಮವ್ವ ಮೆಣಸಿನಕಾಯಿ, ಯೋಜನಾ ವಿಭಾಗದ ಕಾರ್ಯನಿರ್ವಾಹಕ ಇಂಜನಿಯರ ಎಸ್.ಎಚ್.ಶ್ರೀನಿವಾಸ, ಸಹಾಯಕ ಕಾರ್ಯನಿರ್ವಾಹಕ ಎಂ.ಎಸ್.ದಿವಟರ್, ಸಹಾಯಕ ಇಂಜನೀಯರ್ ಅಬ್ದುಲ್ ಚಂದ್ರಗೌಡ ಪಾಟೀಲ್ ಇದ್ದರು.

Leave a Reply

Your email address will not be published. Required fields are marked *

You May Also Like

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ಒಡಿಶಾ ಸಿಎಂ ಜೊತೆ ಪ್ರಧಾನಿ ಸಭೆ: ಯಾಸ್ ಚಂಡಮಾರುತದಿಂದ ಹಾನಿ ಮಾಹಿತಿ

ಭುವನೇಶ್ವರ: ಶುಕ್ರವಾರ ಬೆಳಗ್ಗೆ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಲ್ಲಿನ ವಿಮಾನ ನಿಲ್ದಾಣದ ಕಾನ್ಫರೆನ್ಸ್ ಹಾಲ್ ನಲ್ಲಿ ಇಡಿಶಾ ಸಿಎಂ ನವೀನ್ ಪಟ್ನಾಯಕ್ ಜೊತೆ ಸಭೆ ನಡೆಸಿದ್ದಾರೆ.

ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಮಹಿಳೆಯಲ್ಲಿದೆ : ತಹಶೀಲ್ದಾರ ಭ್ರಮರಾಂಭ

ಮಹಿಳೆಯರಿಗೆ ಎಲ್ಲಾಕ್ಷೇತ್ರದಲ್ಲಿ ಸಮಾನ ಅವಕಾಶ ನೀಡಿ ಅವಳನ್ನು ಸಂಪೂರ್ಣವಾಗಿ ತೊಡಗಿಸಿದ್ದೇ ಆದರೆ ದೇಶದ ಅರ್ಥ ವ್ಯವಸ್ಥೆಯ ಜತೆಗೆ ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಅವಳಲ್ಲಿದೆ ಎಂದು ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹೇಳಿದರು.

ನಗರ ಸಭೆ ಚುನಾವಣೆ: 5ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 5 ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 5ನೇ  ವಾರ್ಡನಲ್ಲಿ…