ನರೆಗಲ್: ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಹಾಗು ದೇಶದ ಬಹುದೊಡ್ಡ ಆಸ್ತಿ ಎಂದು ನರೆಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ  ಅಕ್ಕಮ್ಮ ಯ ಮಣೋಡ್ಡರ ಹೇಳಿದರು.

ಅವರು ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಐದು ವರ್ಷದ ಎಲ್ಲಾ ಮಕ್ಕಳಿಗೆ ತಪ್ಪದೆ ಪೋಲಿಯೊ ಲಸಿಕೆ ಹಾಕಿಸಿ ಹಾಗೂ ಮಕ್ಕಳ ಜೀವಕ್ಕೆ ಮುಂದೆ ಆಗುವ ಅಪಾಯವನ್ನು ತಪ್ಪಿಸಲು ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದರು

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎ.ಡಿ.ಸಾಮುದ್ರಿ ಮಾತನಾಡಿ, ಪೋಲಿಯೊ ಮುಕ್ತ ದೇಶ ನಮ್ಮದಾಗಲಿ 1995 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಸುತ್ತಾ ಬಂದಿದ್ದು, ಮೊದಲು ಎರಡು ಸುತ್ತು ಪಲ್ಸ್ ಪೋಲಿಯೊ ಹಾಕಲಾಗುತ್ತಿತ್ತು. ಕಳೆದ ವರ್ಷದಿಂದ ಒಂದು ಸುತ್ತು ಲಸಿಕೆ ಹಾಕಲಾಗುತ್ತಿದೆ ಎಂದು ಹೇಳಿದರು.

ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಕುಮಾರಸ್ವಾಮಿ ಕೂರಧಾನ್ಯಮಠ ಮಾತನಾಡಿ, ಭಾರತವು ಪೋಲಿಯೊ ಮುಕ್ತ ದೇಶವಾಗಿದೆ. ಆದರೆ ನೆರೆ ಹೊರೆ ದೇಶಗಳಲ್ಲಿ ಇನ್ನೂ ಪೊಲೀಯೊ ಸಮಸ್ಯೆ ಇದೆ. ಈ ನಿಟ್ಟಿನಲ್ಲಿ ದೇಶದಲ್ಲಿ 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿ ಮಕ್ಕಳನ್ನು ಕಾಪಾಡಬೇಕು ಎಂದರು

ಎಸ್.ಎಫ್.ಅಂಗಡಿ, ಎಸ್.ಎನ್.ಪಾಟೀಲ, ಎಂ.ಎಚ್.ಜಾಲಿಹಾಳ, ಎಂ.ಎ.ಡಾಲಾಯತ್, ಜೆ.ಎಸ್.ಬಿಭೂತಿ, ಶೋಭಾ ಪಲ್ಲೇದ, ಜ್ಯೋತಿ ಪಲ್ಲೇದ, ಪಿ.ಸಿ.ಹಳಗೇರಿ, ರತ್ನಾ ಧರ್ಮಾಯತ, ಎಸ್.ವಿ.ಹಿರೇವಡೆಯರ, ವಿರಣ್ಣ ಕಮಲಾಪುರ, ಚಂದ್ರು ಹುನಗುಂಡಿ, ರಾಮಚಂದ್ರ ಕಜ್ಜಿ, ವಿ.ಬಿ.ಪೋಲಿಸ್ ಪಾಟೀಲ, ಎಸ್.ಎಸ್.ಮುಚಕಂಡಿ, ಭಾಗ್ಯಲಕ್ಷ್ಮೀ ಅರಕೇರಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ನ.30ಕ್ಕೆ ಗಾಣಿಗ ಸಮುದಾಯ ಭವನದ ಲೋಕಾರ್ಪಣೆ

ಹಾತಲಗೇರಿ ನಾಕಾ ಬಳಿ ವಿವೇಕಾನಂದ ನಗರದಲ್ಲಿ ನೂತನವಾಗಿ ನಿರ್ಮಿಸಿದ ಗಾನಿಗ ಸಮಾಜದ ಸಮುದಾಯ ಭವನ ನ.30 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಗಾಣಿಗ ಸಮುದಾಯ ಭವನ ಕಟ್ಟಡ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ನಿಂಗಪ್ಪ ಕೆಂಗಾರ ಹೇಳಿದರು.

ಡಿಕೆಶಿ ಹೇಳಿಕೆ ಹಾಸ್ಯಾಸ್ಪದವಾಗಿವೆ : ರಾಮದಾಸ್ ಟೀಕೆ

ಲಸಿಕೆಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಂದು ಲಸಿಕೆಗೋಸ್ಕರ ಬಿಕ್ಷೆ ಬೇಡುತ್ತಿದ್ದೇವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಶಾಸಕ ರಾಮದಾಸ್ ಡೀಕಿಸಿದ್ದಾರೆ.

ಪ್ರಕಾಶ್ ಜಾವ್ಡೇಕರ್ ಜೊತೆ ಬಿ.ಎಸ್.ವೈ ವಿಡಿಯೋ ಸಂವಾದ

ಸಿಎಂ ಬಿ.ಎಸ್.ಯಡಿಯೂರಪ್ಪ, ಪಶ್ಚಿಮ ಘಟ್ಟಗಳಲ್ಲಿ ಸೂಕ್ಷ್ಮ ಪರಿಸರ ವಲಯಗಳೆಂದು ಘೋಷಿತವಾಗಿರುವ ಪ್ರದೇಶಗಳ ಕುರಿತ ಕರಡು ಅಧಿಸೂಚನೆ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಬಸ್ ಬ್ರೇಕ್ ಫೇಲ್ : ಸಮಯ ಪ್ರಜ್ಞೆ ಮೆರೆದ ಚಾಲಕ

ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ.