ನರೆಗಲ್: ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಹಾಗು ದೇಶದ ಬಹುದೊಡ್ಡ ಆಸ್ತಿ ಎಂದು ನರೆಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ  ಅಕ್ಕಮ್ಮ ಯ ಮಣೋಡ್ಡರ ಹೇಳಿದರು.

ಅವರು ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಐದು ವರ್ಷದ ಎಲ್ಲಾ ಮಕ್ಕಳಿಗೆ ತಪ್ಪದೆ ಪೋಲಿಯೊ ಲಸಿಕೆ ಹಾಕಿಸಿ ಹಾಗೂ ಮಕ್ಕಳ ಜೀವಕ್ಕೆ ಮುಂದೆ ಆಗುವ ಅಪಾಯವನ್ನು ತಪ್ಪಿಸಲು ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದರು

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಎ.ಡಿ.ಸಾಮುದ್ರಿ ಮಾತನಾಡಿ, ಪೋಲಿಯೊ ಮುಕ್ತ ದೇಶ ನಮ್ಮದಾಗಲಿ 1995 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಸುತ್ತಾ ಬಂದಿದ್ದು, ಮೊದಲು ಎರಡು ಸುತ್ತು ಪಲ್ಸ್ ಪೋಲಿಯೊ ಹಾಕಲಾಗುತ್ತಿತ್ತು. ಕಳೆದ ವರ್ಷದಿಂದ ಒಂದು ಸುತ್ತು ಲಸಿಕೆ ಹಾಕಲಾಗುತ್ತಿದೆ ಎಂದು ಹೇಳಿದರು.

ಪಟ್ಟಣ ಪಂಚಾಯತಿ ಉಪಾಧ್ಯಕ್ಷ ಕುಮಾರಸ್ವಾಮಿ ಕೂರಧಾನ್ಯಮಠ ಮಾತನಾಡಿ, ಭಾರತವು ಪೋಲಿಯೊ ಮುಕ್ತ ದೇಶವಾಗಿದೆ. ಆದರೆ ನೆರೆ ಹೊರೆ ದೇಶಗಳಲ್ಲಿ ಇನ್ನೂ ಪೊಲೀಯೊ ಸಮಸ್ಯೆ ಇದೆ. ಈ ನಿಟ್ಟಿನಲ್ಲಿ ದೇಶದಲ್ಲಿ 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿ ಮಕ್ಕಳನ್ನು ಕಾಪಾಡಬೇಕು ಎಂದರು

ಎಸ್.ಎಫ್.ಅಂಗಡಿ, ಎಸ್.ಎನ್.ಪಾಟೀಲ, ಎಂ.ಎಚ್.ಜಾಲಿಹಾಳ, ಎಂ.ಎ.ಡಾಲಾಯತ್, ಜೆ.ಎಸ್.ಬಿಭೂತಿ, ಶೋಭಾ ಪಲ್ಲೇದ, ಜ್ಯೋತಿ ಪಲ್ಲೇದ, ಪಿ.ಸಿ.ಹಳಗೇರಿ, ರತ್ನಾ ಧರ್ಮಾಯತ, ಎಸ್.ವಿ.ಹಿರೇವಡೆಯರ, ವಿರಣ್ಣ ಕಮಲಾಪುರ, ಚಂದ್ರು ಹುನಗುಂಡಿ, ರಾಮಚಂದ್ರ ಕಜ್ಜಿ, ವಿ.ಬಿ.ಪೋಲಿಸ್ ಪಾಟೀಲ, ಎಸ್.ಎಸ್.ಮುಚಕಂಡಿ, ಭಾಗ್ಯಲಕ್ಷ್ಮೀ ಅರಕೇರಿ ಸೇರಿದಂತೆ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ವೀರಪ್ಪನ್ ಸಹಚರ ಸಾವು!

ಚಾಮರಾಜನಗರ ಜಿಲ್ಲೆಯ ಗಡಿಭಾಗದ ಪಾಲಾರ್ ಸಮೀಪದ ಸೋರೆಕಾಯಿಮಡುವು ಬಳಿ ನೆಲಬಾಂಬ್ ಸ್ಪೋಟಿಸಿ 22 ಜನರ ಸಾವಿಗೆ ಕಾರಣರಾಗಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಗದಗ ಜಿಲ್ಲೆಯಲ್ಲಿಂದು 73 ಕೊರೊನಾ ಪಾಸಿಟಿವ್!

ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ.

ಲಕ್ಷ್ಮೇಶ್ವರ ಪೊಲೀಸರ ಕಾರ್ಯಾಚರಣೆ: ಕುರಿ, ಮೇಕೆ ಕಳ್ಳರು ಅಂದರ್..!

ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮೇಕೆ ಹಾಗೂ ಕುರಿ ಕಳ್ಳತನ ಪ್ರಕರಣಗಳು ಕಂಡು ಬಂದಿದ್ದವು. ಘಟನೆ ಗ್ರಾಮೀಣ ಭಾಗದ ಜನರ ನಿದ್ದೆಗೆಡಿಸಿತ್ತು. ಆದರೆ ಕೊನೆಗೂ ಕಳ್ಳರನ್ನು ಸೆರೆ ಹಿಡಿಯುವಲ್ಲಿ ಲಕ್ಷ್ಮೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ.