ಲಕ್ಷ್ಮೇಶ್ವರ: ತಾಲೂಕಿನ ಬಾಳೆಹೊಸೂರು ಗ್ರಾಮ ಪಂಚಾಯತಿಗೆ ಇಂದು ನಡೆಯಲಿರುವ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆಗೆ ಮೀಸಲಾಗಿದ್ದು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿಯಿಂದ ಬಾಲೆಹೊಸೂರು ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.
ಇದರಿಂದ ನಿಜವಾದ ದಲಿತರಿಗೆ ಅನ್ಯಾಯ ವಾಗಲಿದೆ. ಪ್ರಕರಣ ಇತ್ಯರ್ಥ ಆಗುವವರೆಗೆ ಚುನಾವಣೆ ಮುಂದೂಡಬೇಕೆಂದು ದಲಿತ ಸಂಘರ್ಷ ಸಮೀತಿ ಆಗ್ರಹಿಸಿದೆ.
ನೂರಾರು ಕಾರ್ಯಕರ್ತರು ಗ್ರಾಪಂಗೆ ಬೀಗ ಜಡಿದು ಹಲಿಗೆ ಬಾರಿಸುತ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ.
ಡಿಎಸ್ಎಸ್ ಹಿರಿಯ ಮುಖಂಡ ಸುರೇಶ ನಂದೆಣ್ಣವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಮುಂಜಾನೆಯಿಂದಲೆ ಗಾ.ಪಂ ಎದುರು ಧಿಡೀರ ಪ್ರತಿಭಟನೆ ನಡೆಸಿದ್ದಾರೆ.
ಈಗಾಗಲೇ ಈ ಪ್ರಕರಣ ಧಾರವಾಡದ ಶ್ರೇಷ್ಠ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು ಸಂಬಂಧ ಪಟ್ಟವರಿಗೆ ನೋಟಿಸ್ ಕೂಡ ಜಾರಿಯಾಗಿದೆ. ಆದ್ದರಿಂದ ಪ್ರಕರಣ ಇತ್ಯರ್ಥ ಆಗುವವರೆಗೂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯನ್ನು ಮುಂದೂಡಬೇಕೆಂದು ಮತ್ತು ನಿಜವಾದ ದಲಿತರಿಗೆ ನ್ಯಾಯ ದೊರಕಬೇಕೆಂದು ಪಟ್ಟು ಹಿಡಿದು ಕುಳಿತಿದ್ದಾರೆ.
ಕೊಡಲೇ ಜಿಲ್ಲಾ ಅಧಿಕಾರಿಗಳು ಮಧ್ಯಪ್ರವೇಶಿಸಿ ಇಂದು ನಡೆಯಲಿರುವ ಬಾಲೆಹೊಸೂರು ಗ್ರಾ.ಪಂ ಅಧ್ಯಕ್ಷ ಚುನಾವಣೆಯನ್ನು ರದ್ದುಗೊಳಿಸಿ ತ್ವರಿತ ಆದೇಶ ಮಾಡಬೇಕೆಂದು ಪಟ್ಟುಹಿಡಿದಿದ್ದಾರೆ.
