ಶಿರಹಟ್ಟಿ: ತಾಲೂಕಿನ 14 ಗ್ರಾಮ ಪಂಚಾಯತಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಸೋಮವಾರ ನಿಗದಿಪಡಿಸಿದ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಜರುಗಿತು.

ಬನ್ನಿಕೊಪ್ಪ ಗ್ರಾಪಂ ಅಧ್ಯಕ್ಷರಾಗಿ ಸಿದ್ದಲಿಂಗಯ್ಯ ಹೊಂಬಾಳಿಮಠ, ಉಪಾಧ್ಯಕ್ಷರಾಗಿ ರಕ್ಷಾ ವರ್ಣೇಕರ ಅವಿರೋಧವಾಗಿ ಆಯ್ಕೆಯಾದರು. ಬೆಳ್ಳಟ್ಟಿ ಗ್ರಾಪಂದ ಅಧ್ಯಕ್ಷರಾಗಿ ನೇತ್ರಾ ಮಲ್ಲೇಶ ಸಜ್ಜನರ, ಉಪಾಧ್ಯಕ್ಷರಾಗಿ ಮಲ್ಲಯ್ಯ ನಿರಂಜನಯ್ಯ ಶಿಲವಂತಮಠ ಆಯ್ಕೆಯಾಗಿದ್ದಾರೆ. ಛಬ್ಬಿ ಗ್ರಾಪಂದ ಅಧ್ಯಕ್ಷರಾಗಿ ಭಾರತಿ ನಿಂಗರಾಜ ತಾರಿಕೊಪ್ಪ, ಉಪಾಧ್ಯಕ್ಷರಾಗಿ ಸುವರ್ಣ ದೇವಪ್ಪ ಅರಿ ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ. ಹೆಬ್ಬಾಳ ಗ್ರಾಪಂ ಅಧ್ಯಕ್ಷರಾಗಿ ಹೆಮಕ್ಕ ಹಿರೇಮಠ, ಉಪಾಧ್ಯಕ್ಷರಾಗಿ ಫಕ್ಕಿರಪ್ಪ ನರಸಮ್ಮನವರ ಅವಿರೋಧವಾಗಿ ಆಯ್ಕೆಯಾದರು.

ಇಟಗಿ ಗ್ರಾಪಂ ಅಧ್ಯಕ್ಷರಾಗಿ ವಿಜಯಲಕ್ಷ್ಮಿ ಕೆಂಚರಡ್ಡಿ, ಉಪಾಧ್ಯಕ್ಷರಾಗಿ ಗಂಗಾ ಬಸವರಾಜ ಹುಲ್ಲೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಡಕೋಳ ಗ್ರಾಪಂ ಅಧ್ಯಕ್ಷರಾಗಿ ಬಸವ್ವ ಮಲ್ಲಪ್ಪ ಮಾದರ, ಉಪಾಧ್ಯಕ್ಷರಾಗಿ ಜಯವ್ವ ಉಪ್ಪಾರ ಅವಿರೋಧವಾಗಿ ಆಯ್ಕೆಯಾದರು. ಕೊಗನೂರ ಗ್ರಾಪಂ ಅಧ್ಯಕ್ಷರಾಗಿ ಜಡಿಯಪ್ಪ ಹೊನ್ನಪ್ಪನವರ, ಉಪಾಧ್ಯಕ್ಷರಾಗಿ ತಿರಕವ್ವ ಹರಿಜನ ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ.

ಕೊಂಚಿಗೇರಿ ಗ್ರಾಪಂ ಅಧ್ಯಕ್ಷರಾಗಿ ನಿಂಬವ್ವ ಚಳಕೇರಿ, ಉಪಾಧ್ಯಕ್ಷರಾಗಿ ನೀಲಮ್ಮ ಉದಣ್ಣವರ ಚುನಾವಣೆ ಮೂಲಕ ಆಯ್ಕೆಯಾದರು. ಮಾಚೇನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಹನುಮವ್ವ ಪಾಟೀಲ, ಉಪಾಧ್ಯಕ್ಷರಾಗಿ ಫಕ್ಕಿರವ್ವ ಪೂಜಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾಗಡಿ ಗ್ರಾಪಂ ಅಧ್ಯಕ್ಷರಾಗಿ ಶಹನಾಜಬೇಗಂ ಬುಡ್ಡೆಸಾಬ, ಉಪಾಧ್ಯಕ್ಷರಾಗಿ ವೀರಯ್ಯ ಮಠಪತಿ ಅವಿರೋಧವಾಗಿ ಆಯ್ಕೆಯಾದರು. ಮಜ್ಜೂರ ಗ್ರಾಪಂ ಅಧ್ಯಕ್ಷರಾಗಿ ಪಾರವ್ವ ಲಮಾಣಿ, ಉಪಾಧ್ಯಕ್ಷರಾಗಿ ಚನಬಸವ್ವ ಗುಡಗೇರಿ ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ. ರಣತೂರ ಗ್ರಾಪಂ ಅಧ್ಯಕ್ಷರಾಗಿ ಅಶೋಕ ಚನ್ನವೀರಪ್ಪ ಬಳ್ಳಾರಿ, ಉಪಾಧ್ಯಕ್ಷರಾಗಿ ವಿಜಯಲಕ್ಷ್ಮಿ ಚವ್ಹಾಣ ಅವಿರೋಧವಾಗಿ ಆಯ್ಕೆಯಾದರು.

ತಾರಿಕೊಪ್ಪ ಗ್ರಾಪಂ ಅಧ್ಯಕ್ಷರಾಗಿ ಭೀಮಪ್ಪ ಲಮಾಣಿ ಉಪಾಧ್ಯಕ್ಷರಾಗಿ ರತ್ನಾ ಮಂಜಪ್ಪ ಈರಗಾರ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಎರಡು ಜನ ಸಮ ಮತ ಪಡೆದಿದ್ದರು. ಚುನಾವಣಾಧಿಕಾರಿ ಲಾಟರಿ ಮೂಲಕ ಅಧ್ಯಕ್ಷರನ್ನು ಆಯ್ಕೆ ಮಾಡಿದರು. ವಡವಿ ಗ್ರಾಪಂ ಅಧ್ಯಕ್ಷರಾಗಿ ಪರಶುರಾಮ ಗುಡಗೇರಿ, ಉಪಾಧ್ಯಕ್ಷರಾಗಿ ಉಮೇಶಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಲೂಕಿನ 14 ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ 9 ಪಂಚಾಯಿತಿಯಲ್ಲಿ ಅಧಿಕಾರದ ಗದ್ದುಗೆ ಹಿಡಿದಿದ್ದು, ಕಾಂಗ್ರೆಸ್ 5 ಪಂಚಾಯತಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

Leave a Reply

Your email address will not be published. Required fields are marked *

You May Also Like

ವಿಧಾನಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಜಾಣತನಕ್ಕೆ ಶಾಸಕ ಎಚ್ಕೆ ಪಾಟೀಲರ ಜಾಣ ಉತ್ತರ

ಸಾರ್ವಜನಿಕ ಲೆಕ್ಕ ಪತ್ರ ಸಮೀತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಈಗಾಗಲೇ ವಿಧಾನಸಭಾಧ್ಯಕ್ಷರಿಗೆ ಸಭೆ ನಡೆಸುವ ಕುರಿತು ಪತ್ರ ಬರೆದಿದ್ದರೂ ಅವರ ಆಪ್ತ ಕಾರ್ಯದರ್ಶಿ ಎಷ್ಟು ದಿನವಾದ್ರು ಪತ್ರ ತಲುಪಿರಲಿಲ್ಲ ನಿನ್ನೆಯಷ್ಟೆ ಪತ್ರ ತಲುಪಿದೆ ಎಂದು ಜಾಣತನ ಪ್ರದರ್ಶಿಸಿದ್ದರು.

ಮಾಜಿ ಸಿಎಂ ವಿರುದ್ಧ ಮತ್ತೊಮ್ಮೆ ಮುಗಿ ಬಿದ್ದ ಬಿಜೆಪಿ ನಾಯಕರು!

ಬೆಂಗಳೂರು : ಮೊದಲು ನೀವು ನಿಮ್ಮ ಪಕ್ಷದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಖರ್ಗೆ ಕುಟುಂಬಕ್ಕೆ ಜೀವಬೆದರಿಕೆ..!

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆಯ ಕರೆ ಬಂದಿದೆ…

ಜಾರ್ಖಂಡ್ ನಲ್ಲಿ ಜುಲೈ ಅಂತ್ಯದವರೆಗೆ ಲಾಕ್ ಡೌನ್ ಘೋಷಣೆ!

ರಾಂಚಿ : ಕೊರೊನಾ ವೈರಸ್ ನ ಹಾವಳಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಾರ್ಖಂಡ್ ನಲ್ಲಿ…