ನರೇಗಲ್: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರಿದ್ದು ಇದರಿಂದ ಬಡ ಹಾಗೂ ಮಧ್ಯಮ ವರ್ಗದವರ ಬದುಕು ಬೀದಿಗೆ ಬರುತ್ತದೆ ಎಂದು ಕರವೇ ಜಿಲ್ಲಾ ಅಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ  ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ, ಕೇಂದ್ರ ಸರಕಾರವು ಪೆಟ್ರೋಲ್, ಡೀಸೆಲ್ ಸೇರಿದಂತೆ  ದಿನನಿತ್ಯದ ಪದಾರ್ಥಗಳ ಬೆಲೆ ಏರಿಕೆ ಮಾಡುತ್ತಿರುವುದರಿಂದ ಜನರು ಪರಿತಪಿಸುವಂತಾಗಿದೆ. ಕೇಂದ್ರ ಸರಕಾರ ಬೆಲೆ ಏರಿಕೆಯ ನಿಯಂತ್ರಣ ಮಾಡುವ ಮೂಲಕ ಜನತೆ ಪರಿತಪಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾ ಪ್ರಭಾವದಿಂದ ಬಡ ಹಾಗೂ ಮಧ್ಯಮ ವರ್ಗದವರ ಬದುಕು ಬೀದಿಗೆ ಬಂದಿದೆ.  ಈ ನಡುವೆ ಜನಸಾಮಾನ್ಯರಿಗೆ ಅಗತ್ಯವಾದ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಗಾಯದ ಮೇಲೆ ಬರೆ ಹಾಕಿದೆ. ತೈಲಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತು ಬೆಲೆ ಹೆಚ್ಚಾಗಿ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ. ಸರ್ಕಾರ ಕೂಡಲೇ ತೈಲಬೆಲೆ ಏರಿಕೆ ನಿಯಂತ್ರಣ ಮಾಡಬೇಕಿದೆ ಎಂದು ಆಗ್ರಹಿಸಿದರು.

ಹಳೆ ಬಸ್ ನಿಲ್ದಾಣದಿಂದ ಪ್ರತಿಭಟನೆ ನಡೆಸುತ್ತಾ ದುರ್ಗಾ ವೃತ್ತದಲ್ಲಿ ಬಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ  ಆಕ್ರೋಶ ವ್ಯಕ್ತಪಡಿಸಿದರು. ನಂತರ ಉಪತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ನಿಂಗಪ್ಪ ಹೊನ್ನಾಪುರ,  ಶರಣಪ್ಪ ಕರಮುಡಿ,  ಪರಶುರಾಮ ನವಲಗುಂದ, ಕಳಕಪ್ಪ ಹುನಗುಂದ, ರಮೇಶ ಕಾಟಿ, ಕಳಕಪ್ಪ ಹೆಗಡೆ, ಮಹಾಂತೇಶ ಅರಹುಣಸಿ, ಅನಿಲ ಸಿಳ್ಳಿ, ಮಂಜುನಾಥ ನಡವಲಕೇರಿ, ವಸಂತ ನಡವಲಕೇರಿ, ಅರ್ಜುನ ನಡವಲಕೇರಿ ಇದ್ದರು.

Leave a Reply

Your email address will not be published. Required fields are marked *

You May Also Like

ಗಂಗಾಪುರ ಸಕ್ಕರೆ ಕಾರ್ಖಾನೆಯಲ್ಲಿ ಕೊಲೆ ಪ್ರಕರಣ: ಆರೋಪಿ ಬಂಧನ!

ಇತ್ತಿಚೆಗೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಂಗಾಪುರದ ವಿಜಯನಗರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಸೆಕ್ಯೂರಿಟಿ ಗಾರ್ಡ್ ಕೊಲೆ ಪ್ರಕರಣವನ್ನು ಕೊನೆಗೂ ಮುಂಡರಗಿ ಪೊಲೀಸರು ಭೇದಿಸಿದ್ದಾರೆ.

ಪ್ರಾಣಿ ಪ್ರೇಮ ತೋರಿದ ಡಿಬಾಸ್

ಡಿಬಾಸ್ ದರ್ಶನ್ ಇದೀಗ ಪ್ರಾಣಿ ಪ್ರೇಮ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ. ಎತ್ತೊಂದರ ಚಿಕಿತ್ಸೆಗೆ ನೆರವಾಗುವ ಮೂಲಕ ತಮ್ಮಲ್ಲಿರುವ ಪ್ರಾಣಿಗಳ ಬಗೆಗಿರುವ ಕಾಳಜಿಯನ್ನು ತೋರಿಸಿದ್ದಾರೆ.

ಬಾಲ್ಯ ವಿವಾಹ ಮದುವೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತಿನ ಕ್ರಮ

ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಆಂಟೋನಿ ಸೆಬಾಸ್ಟಿನ್ ಸೂಚನೆ ನೀಡಿದರು.