ಮುಂಬಯಿ : ಶೂಟಿಂಗ್ ಮುಗಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ನಟ ಅಲ್ಲು ಅರ್ಜುನ್ ಅವರ ಕ್ಯಾರವಾನ್ ಗೆ ಹಿಂದಿನಿಂದ ಲಾರಿ ಗುದ್ದಿದ ಘಟನೆ ನಡೆದಿದೆ.

ಅಲ್ಲು ಅರ್ಜುನ್ ಅವರು ಪುಷ್ಫ ಸಿನಿಮಾದಲ್ಲಿ ಸದ್ಯ ಬ್ಯೂಸಿಯಾಗಿದ್ದಾರೆ. ಆದರೆ, ಕ್ಯಾರವಾನ್ ನಲ್ಲಿ ಅಲ್ಲು ಇರಲಿಲ್ಲ. ಅವರ ಮೇಕಪ್ ಟೀಂ ಮಾತ್ರ ಇತ್ತು. ವಾಹನವು ರಂಪಚೋದವರಂನಿಂದ ಹೈದರಾಬಾದ್ ಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿಯೇ ಈ ಘಟನೆ ನಡೆದಿದೆ.

ಕ್ಯಾರವಾನ್ ನ ಚಾಲಕ ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಹಿಂದೆ ಬರುತ್ತಿದ್ದ ಲಾರಿ ಗುದ್ದಿದೆ. ಆದರೆ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತು ಖಮ್ಮಂ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ನಟ ಅಲ್ಲು ಅರ್ಜುನ್ ಅವರ ಕ್ಯಾರವಾನ್ ನ್ನು ವಿಶೇಷವಾಗಿ ವಿನ್ಯಾಸಗೊಳಸಲಾಗಿತ್ತು. ಇದರ ಮೌಲ್ಯ ಸುಮಾರು ರೂ. 7 ಕೋಟಿ. ರೆಡ್ಡಿ ಕಸ್ಟಮ್ಸ್ ಎಂಬ ಕಂಪನಿ ಈ ವಾಹವನ್ನು ಡಿಸೈನ್ ಮಾಡಿದೆ.

Leave a Reply

Your email address will not be published. Required fields are marked *

You May Also Like

ನಟಿ ಪ್ರೇಮಾ ಎರಡನೇ ಮದುವೆ ಬಗ್ಗೆ ನೀಡಿದ ಸ್ಪಷ್ಟನೆ

ಬೆಂಗಳೂರು: ಕೆಲ ದಿನಗಳಿಂದ ನಟಿ ಪ್ರೇಮಾ ಎರಡನೇ ಮದುವೆ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಸೋಶಿಯಲ್ ಮಿಡಿಯಾದಲ್ಲಿ ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರೇಮಾ, ಎರಡನೇ ಮದುವೆ ಹಾಗೂ ಖಿನ್ನತೆ ಕುರಿತು ನನ್ನ ಬಗ್ಗೆ ಹರಿದಾಡುತ್ತಿರುವುದು ಫೇಕ್ ನ್ಯೂಸ್ ಇದು

ನಮ್ಮ ಜೀವನದ ಕಣಕಣದಲ್ಲಿಯೂ ದೇಶಭಕ್ತಿ ಜಾಗೃತವಾಗಿರಬೇಕು: ನಟ ದರ್ಶನ್

ಸ್ವಾತಂತ್ರ್ಯ ದಿನಾಚರಣೆಯ ಈ ಸುಸಂದರ್ಭದಲ್ಲಿ ನಟ ದರ್ಶನ್ ನಾಡಿನ ಜನತೆಗೆ ಟ್ವೀಟ್ ಮಾಡಿದ್ದಾರೆ. ಬೆಂಗಳೂರು: ದೇಶದಲ್ಲಿ…

ವೈಯಕ್ತಿಕ ಸೌಂದರ್ಯ ವರ್ಧಕಕ್ಕೆ ಹೊಸ ಬ್ರ್ಯಾಂಡ್ ಬಿಡುಗಡೆ ಮಾಡಿದ ಸಲ್ಮಾನ್ ಖಾನ್

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ FRSH ಹೆಸರಿನ ವೈಯಕ್ತಿಕ ಸೌಂದರ್ಯ ಬ್ರಾಂಡ್ ಬಿಡುಗಡೆ ಮಾಡಿದ್ದಾರೆ. ವೈಯಕ್ತಿಕ ಉಡುಪು, ದೇಹದಾರ್ಡ್ಯ ಸಲಕರಣೆ, ಜಿಮ್ ಮತ್ತು ಈ-ಸೈಕಲ್ ಬಿಡುಗಡೆಯ ನಂತರ ಇದೀಗ ಹೊಸ ಬ್ರಾಂಡ್ ಪರಿಚಯಿಸಿದ್ದಾರೆ.

ಈಗಿನಿಂದಲೇ ಹೊಸ ಗೆಟಪ್ ನಲ್ಲಿ ಬರಲು ತಯಾರಾಗುತ್ತಿದ್ದಾರೆ ಸುದೀಪ್!

ಲಾಕ್ ಡೌನ್ ಅವಧಿಯಲ್ಲಿ ಫ್ಯಾಂಟಮ್ ಕೆಲಸದಲ್ಲಿ ಸುದೀಪ್ ತೊಡಗಿಸಿಕೊಂಡಿದ್ದಾರೆ. ತಮ್ಮ ಮುಂದಿನ ಕಮರ್ಷಿಯಲ್ ಆಕ್ಷನ್ ಮೂವಿಗಾಗಿ ಹೊಸ ಗೆಟಪ್ ಪಡೆದಿದ್ದಾರೆ.