ಮುಂಬಯಿ : ಶೂಟಿಂಗ್ ಮುಗಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ನಟ ಅಲ್ಲು ಅರ್ಜುನ್ ಅವರ ಕ್ಯಾರವಾನ್ ಗೆ ಹಿಂದಿನಿಂದ ಲಾರಿ ಗುದ್ದಿದ ಘಟನೆ ನಡೆದಿದೆ.

ಅಲ್ಲು ಅರ್ಜುನ್ ಅವರು ಪುಷ್ಫ ಸಿನಿಮಾದಲ್ಲಿ ಸದ್ಯ ಬ್ಯೂಸಿಯಾಗಿದ್ದಾರೆ. ಆದರೆ, ಕ್ಯಾರವಾನ್ ನಲ್ಲಿ ಅಲ್ಲು ಇರಲಿಲ್ಲ. ಅವರ ಮೇಕಪ್ ಟೀಂ ಮಾತ್ರ ಇತ್ತು. ವಾಹನವು ರಂಪಚೋದವರಂನಿಂದ ಹೈದರಾಬಾದ್ ಗೆ ತೆರಳುತ್ತಿತ್ತು. ಈ ಸಂದರ್ಭದಲ್ಲಿಯೇ ಈ ಘಟನೆ ನಡೆದಿದೆ.

ಕ್ಯಾರವಾನ್ ನ ಚಾಲಕ ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಹಿಂದೆ ಬರುತ್ತಿದ್ದ ಲಾರಿ ಗುದ್ದಿದೆ. ಆದರೆ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತು ಖಮ್ಮಂ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ನಟ ಅಲ್ಲು ಅರ್ಜುನ್ ಅವರ ಕ್ಯಾರವಾನ್ ನ್ನು ವಿಶೇಷವಾಗಿ ವಿನ್ಯಾಸಗೊಳಸಲಾಗಿತ್ತು. ಇದರ ಮೌಲ್ಯ ಸುಮಾರು ರೂ. 7 ಕೋಟಿ. ರೆಡ್ಡಿ ಕಸ್ಟಮ್ಸ್ ಎಂಬ ಕಂಪನಿ ಈ ವಾಹವನ್ನು ಡಿಸೈನ್ ಮಾಡಿದೆ.

Leave a Reply

Your email address will not be published. Required fields are marked *

You May Also Like

ಅಂದು ”ಅದೇ ಕಣ್ಣು”… ಇಂದು ”ಅದೇ ಮುಖ”….!: ಅದೇ ಮುಖದೊಂದಿಗೆ ಪ್ರೇಕ್ಷಕರಿಗೆ ಲಗ್ಗೆ ಇಡಲು ಸಜ್ಜಾಗಿದ್ದಾರೆ ಸಂದೇಶ

‘ಅದೇ ಮುಖ” ಎಂಬ ಸಿನಿಮಾದ ಟೈಟಲ್. ಗಾಂಧಿನಗರದಲ್ಲಿ ಈ ಚಿತ್ರ ಹೇಗಿರಬಹುದು ಎಂಬ ಕುತೂಹಲ ಗರಿಗೆದರುವಂತೆ ಮಾಡಿದೆ.

ಮನೆ ಚಲನಚಿತ್ರಕ್ಕೆ ‘ಯು’ ಸರ್ಟಿಫಿಕೇಟ್

ಗಾಯತ್ರಿ ಕ್ರಿಯೇಷನ್ಸ್ ಬೆಂಗಳೂರ ಹಾಗೂ ಸಂಯುಕ್ತ ಸ್ಟುಡಿಯೋಸ್ ಸಹಯೋಗದಲ್ಲಿ ನಿರ್ಮಾಣವಾಗಿರುವ ಕಲಾತ್ಮಕ ಕನ್ನಡ ಚಿತ್ರ ‘ಮನೆ’ಗೆ ಸೆನ್ಸಾರ್ ಮಂಡಳಿಯಿಂದ ‘ಯು’ ಸರ್ಟಿಫಿಕೇಟ್ ದೊರೆತಿದೆ.

ನೆಕೆಡ್ ಚಿತ್ರ 27ರಂದು ತೆರೆಗೆ ಬರಲಿದೆ: ಮಾದಕ ಫೋಟೋ ಹಂಚಿಕೊಂಡ RGV

ಮುಂಬೈ: ಬಾಲಿವುಡ್ ನ ಪ್ರತಿಭಾವಂತ ಮತ್ತು ಅನೇಕ ಕಾರಣಗಳಿಂದ ವಿವಾದದ ಸುಳಿಗೆ ಸಿಲುಕುವ ನಿರ್ದೇಶಕ ರಾಮ್…

ಸರ್ಕಾರಿ ಶಾಲೆ ದತ್ತು ಪಡೆದ ಕಿಚ್ಚ

ಕಿಚ್ಚ ಸುದೀಪ್ ಸಾಮಾಜಿಕ ಕಳಕಳಿಯ ಮಾನವೀಯತೆಯ ಹರಿಕಾರರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಭಿಮಾನಿಗಳ ಮನೆ ಗೆಲ್ಲುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಆಟೋ ಚಾಲಕನ ಸಹೋದರಿಯ