ಚೆನ್ನೈ:
ನಟ ಧನುಷ್ ಜೊತೆ ಎನ್ನೈ ನೋಕಿ ಪಾಯಂ ಥೋಟ್ಟ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಯುವ ನಟ ಶ್ರೀವಾಸ್ತವ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.
ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀವಾಸ್ತವ್ ಅವರು ಈಚೆಗೆ ತಮ್ಮ ತಂದೆಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಮಡಿದ್ದಾರೆ. ಈ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಗೌತಮ್ ವಾಸುದೇವ್ ಮೆನನ್ ನಿರ್ದೇಶನದ ಎನ್ನೈ ನೋಕಿ ಪಾಯಂ ಥೋಟ್ಟ ಚಿತ್ರದಲ್ಲಿ ಶ್ರೀವಾಸ್ತವ್ ನಟಿಸಿದ್ದರು. ಕೆಲ ಸಮಯದಿಂದ ಮಾನಸಿಕ ಸಮಸ್ಯೆಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎಂದು ಆಪ್ತರಿಂದ ತಿಳಿದು ಬಂದಿದೆ. ಇತ್ತೀಚೆಗೆ ಡಿಜಿಟಲ್ ವೆಬ್ ಸರಣಿ ವಲ್ಲಾಮೈ ಥರಯೋದಲ್ಲಿ ನಟಿಸಿ, ಜನಪ್ರಿಯತೆ ಗಳಿಸಿದ್ದರು.

Leave a Reply

Your email address will not be published. Required fields are marked *

You May Also Like

ಗರ್ಭಿಣಿ ಪತ್ನಿ, ಮಗುವನ್ನು ಬಂಡಿಯಲ್ಲಿ ಕೂರಿಸಿಕೊಂಡು 700 ಕಿ.ಮೀ ನಡೆದ ಪತಿ!

ಇಲ್ಲೊಬ್ಬ ವ್ಯಕ್ತಿ ತನ್ನ ಗರ್ಭಿಣಿ ಪತ್ನಿಯನ್ನು ಗಾಡಿ ಬಂಡಿಯಲ್ಲಿ ಕೂರಿಸಿಕೊಂಡು ಸುಮಾರು 700 ಕಿ.ಮೀ ಎಳೆದುಕೊಂಡು ಬಂದಿರುವ ಘಟನೆ ನಡೆದಿದೆ.

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯದ ಅಹ್ಮದ್ ಪಟೇಲ್ ಇಂದು ನಿಧನ ಹೊಂದಿದರು.

ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ

ಮುಂಬೈ: ಬಾಲಿವುಡ್ ನ ಖ್ಯಾತ ಸಂಗೀತ ನಿರ್ದೇಶಕ ವಾಜಿದ್ ಖಾನ್ ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ…

4 ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಮುಂದೇನಾಯ್ತು?

ಲಕ್ನೋ : ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ನಾಲ್ಕು ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಅವಳನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.