ತೀರ್ಥಹಳ್ಳಿ:
ತಾಲೂಕು ಹೆದ್ದೂರು ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. 1 ವರ್ಷ ಒಂದು ತಿಂಗಳ ಮಗು ನಿಶಾನ್ ಮೃತಪಟ್ಟಿದೆ. ಸಂದೇಶ ಮತ್ತು ಅರ್ಚನಾ ದಂಪತಿಗಳ ಮಗು ನಿಶಾನ್ ಆರೋಗ್ಯವಾಗಿತ್ತು. ಆಟವಾಡುವಾಗ ಅಡಕೆ ನುಂಗಿದ್ದರಿಂದ, ಉಸಿರುರಾಡಲು ಕಷ್ಟವಾಗಿದೆ.
ತಕ್ಷಣವೇ ಮಗುವನ್ನು ಕಟ್ಟೆಹಕ್ಕಲುವಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಅಲ್ಲಿಂದ ತೀರ್ಥಹಳ್ಳಿಯ ಜೆ. ಸಿ. ಆಸ್ಪತ್ರೆಗೆ ಕರೆತಂದು ದಾಖಲು ಮಾಡಲಾಗಿದೆ. ಆದರೆ, ಉಸಿರಾಡಲು ಕಷ್ಟವಾಗಿ ಮಗು ಮೃತಪಟ್ಟಿದೆ.
ಸಂದೇಶ ಮತ್ತು ಅರ್ಚನಾ ದಂಪತಿಗಳು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಬಂದಿದ್ದರು. ಬೆಂಗಳೂರಿಗೆ ವಾಪಸ್ ತೆರಳಲು ಸಿದ್ಧತೆ ನಡೆಸುತ್ತಿದ್ದರು. ಇಂತಹ ಸಮಯದಲ್ಲಿಯೇ ಈ ದುರ್ಘಟನೆ ಸಂಭವಿಸಿದೆ.
ಅಡಕೆ ನುಂಗಿ ಮಗು ಮೃತಪಟ್ಟಿದ್ದರಿಂದ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಆರೋಗ್ಯ ಇಲಾಖೆ ಇತ್ತೀಚೆಗೆ ಆಯೋಜಿಸಿದ್ದ ಶಿಶು ಪ್ರದರ್ಶನ ಕಾರ್ಯಕ್ರಮದಲ್ಲಿ ಉತ್ತಮ ಆರೋಗ್ಯವಂತ ಮಗು ಎಂದು ನಿಶಾನ್ ಪ್ರಥಮ ಬಹುಮಾನವನ್ನು ಗಳಿಸಿತ್ತು

Leave a Reply

Your email address will not be published. Required fields are marked *

You May Also Like

ವಲಸೆ ಕಾರ್ಮಿಕರನ್ನು ಕಳುಹಿಸಿಕೊಡುವ ಜವಾಬ್ದಾರಿ ನಮ್ಮದು: ಸುಧಾಕರ್

ಅಧಿಕೃತ ಚಿಕ್ಕಬಳ್ಳಾಪುರ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಅರಮನೆ ಮೈದಾನದಲ್ಲಿ ಜನದಟ್ಟಣೆ ಗಮನಿಸಿ, ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಯಂತ್ರಿಸಿ, ಜನರಿಗೆ ವೈದ್ಯಕೀಯ ಶಿಕ್ಷಣ ಸಚಿವರು ಸಮಾಧಾನ ಹೇಳಿದ ಘಟನೆ ನಡೆಯಿತು.

ಕಾರ್ಮಿಕರ ಬದುಕಲ್ಲಿ ನಗೆ ಮೂಡಲಿ – ಕುಮಾರಸ್ವಾಮಿ!

ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ಶುಭಾಶಯ ಕೋರಿದ್ದಾರೆ.

ಕಾನೂನು ಲೆಕ್ಕಕ್ಕಿಲ್ಲ ಲಕ್ಕುಂಡಿ ಗ್ರಾಮ ಪಂಚಾಯತಿಗೆ..?: ಜನರ ಆರೋಗ್ಯ ಒತ್ತೆ ಇಡಲು ಹೊರಟಿತ್ತಾ ಗ್ರಾಪಂ..!

ಗದಗ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿರಬೇಕಿದ್ದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಗ್ರಾಮವನ್ನೆ ಮಾರಾಟ ಮಾಡಲು ಹಿಂಜರಿಯುವುದಿಲ್ಲ…

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಾಸೀಮಸಾಹೇಬ್ ಹುಸೇನಸಾಹೇಬ

ಉತ್ತರಪ್ರಭನಿಡಗುಂದಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಜನಪದ ಸಾಹಿತಿ ಕಾಸೀಮಸಾಹೇಬ್ ಹುಸೇನಸಾಹೇಬ ಬಿಜಾಪುರ (87)…