ಬೆಂಗಳೂರು : ಐದು ವರ್ಷಗಳ ಹಿಂದೆಯೇ ಕೊರೊನಾ ವೈರಸ್ ನಂತಹ ಗಂಡಾಂತರದ ಬಗ್ಗೆ ಎಚ್ಚರಿಕೆ ನೀಡಿದ್ದ ಉದ್ಯಮಿ ಬಿಲ್ ಗೇಟ್ಸ್ ಈಗ ಮತ್ತೆ ಎರಡು ಗಂಡಾಂತರಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಬಿಲ್ ಗೇಟ್ಸ್ ಅವರು 2015ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೊರೊನಾ ವೈರಸ್ ನಂತಹ ಸಾಂಕ್ರಾಮಿಕದ ಕುರಿತು ಮಾತನಾಡಿದ್ದರು. ಮುಂದೊಂದು ದಿನ ಹರಡುವ ಸೋಂಕಿನಿಂದ ಮನೆ ಮನೆಗೂ ಸಂಕಷ್ಟ ಎದುರಾಗಲಿದೆ ಎಂಬ ಎಚ್ಚರಿಕೆ ನೀಡಿದ್ದರು. ಅಲ್ಲದೇ, ಇಂತಹ ಸೋಂಕುಗಳನ್ನು ಮೆಟ್ಟಿ ನಿಲ್ಲಲು ಜಗತ್ತು ಸಿದ್ಧವಾಗಬೇಕು ಎಂದು ಹೇಳಿದ್ದರು. 

ಆದರೆ, ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ವೊಂದರಲ್ಲಿ ಅವರು ಮತ್ತೆ ಇಂತಹ ಗಂಡಾಂತರಗಳ ಬಗ್ಗೆ ಮಾತನಾಡಿದ್ದಾರೆ. ಉಸಿರಾಟದ ಕಾಯಿಲೆ ಸೃಷ್ಟಿಸುವ ಸೋಂಕುಗಳು ಆಗಾಗ ಬರುತ್ತವೆ. ಇವು ತುಂಬಾ ಅಪಾಯಕಾರಿ. ಈ ಸಾಂಕ್ರಾಮಿಕ ಸೋಂಕುಗಳಿಂದ ಜನರು ಪ್ರತಿ ವರ್ಷ ಸಾಯುತ್ತಲೇ ಇದ್ದಾರೆ. ಹೀಗಾಗಿ ಬಿಕ್ಕಟ್ಟು ದೊಡ್ಡದಾಗುವ ಮೊದಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ. ಅಲ್ಲದೇ, ಜೈವಿಕ ಹಾನಿಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಅವರು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ದೇಶದಲ್ಲಿ ಮಿತಿ ಮೀರಿ ಆವರಿಸಿದ ಸೋಂಕು!

ನವದೆಹಲಿ: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ಏರಿಕೆ ಕಾಣುತ್ತಿದೆ. ಪ್ರತಿ ದಿನ ಕೊರೊನಾ ತನ್ನ ದಾಖಲೆಯನ್ನು…

ಪ್ರಾಣಿಗಳೊಂದಿಗೆ ನಿಮ್ಮ ಹೇಡಿತನ ಪ್ರದರ್ಶನ ಬೇಡ : ವಿರಾಟ್ ಕೊಹ್ಲಿ

ಪ್ರಾಣಿಗಳೊಂದಿಗೆ ಹೇಡಿತನ ಪ್ರದರ್ಶಿಸಬೇಡಿ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

ಚನ್ನೈನಲ್ಲಿ ಕೊರೋನಾ ಕಾಟ

ತಮಿಳುನಾಡಿನಲ್ಲಿ ಕೊರೋನಾ ವೈರಸ್ ಹಾವಳಿ ಹೆಚ್ಚಾಗುತ್ತಿದೆ. ಒಂದೇ ದಿನ ಬರೋಬ್ಬರಿ 771 ಹೊಸ ಪ್ರಕರಣಗಳು ದಾಖಲಾಗಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆಯಾಗಿದೆ.

ಒಬ್ಬನ ಕೊಲ್ಲಲು ಇಲ್ಲಿ ಲಾಂಗ್ ಹಿಡಿದು ಬಂದವರು ಎಷ್ಟು ಜನ ಗೊತ್ತಾ?

ಮುಂಬಯಿ : ಒಬ್ಬನನ್ನು ಕೊಲ್ಲಲು ನೂರು ಜನ ಲಾಂಗ್ ಹಿಡಿದುಕೊಂಡು ಬಂದಿದ್ದ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.