ಬೆಂಗಳೂರು : ಐದು ವರ್ಷಗಳ ಹಿಂದೆಯೇ ಕೊರೊನಾ ವೈರಸ್ ನಂತಹ ಗಂಡಾಂತರದ ಬಗ್ಗೆ ಎಚ್ಚರಿಕೆ ನೀಡಿದ್ದ ಉದ್ಯಮಿ ಬಿಲ್ ಗೇಟ್ಸ್ ಈಗ ಮತ್ತೆ ಎರಡು ಗಂಡಾಂತರಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಬಿಲ್ ಗೇಟ್ಸ್ ಅವರು 2015ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೊರೊನಾ ವೈರಸ್ ನಂತಹ ಸಾಂಕ್ರಾಮಿಕದ ಕುರಿತು ಮಾತನಾಡಿದ್ದರು. ಮುಂದೊಂದು ದಿನ ಹರಡುವ ಸೋಂಕಿನಿಂದ ಮನೆ ಮನೆಗೂ ಸಂಕಷ್ಟ ಎದುರಾಗಲಿದೆ ಎಂಬ ಎಚ್ಚರಿಕೆ ನೀಡಿದ್ದರು. ಅಲ್ಲದೇ, ಇಂತಹ ಸೋಂಕುಗಳನ್ನು ಮೆಟ್ಟಿ ನಿಲ್ಲಲು ಜಗತ್ತು ಸಿದ್ಧವಾಗಬೇಕು ಎಂದು ಹೇಳಿದ್ದರು. 

ಆದರೆ, ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ವೊಂದರಲ್ಲಿ ಅವರು ಮತ್ತೆ ಇಂತಹ ಗಂಡಾಂತರಗಳ ಬಗ್ಗೆ ಮಾತನಾಡಿದ್ದಾರೆ. ಉಸಿರಾಟದ ಕಾಯಿಲೆ ಸೃಷ್ಟಿಸುವ ಸೋಂಕುಗಳು ಆಗಾಗ ಬರುತ್ತವೆ. ಇವು ತುಂಬಾ ಅಪಾಯಕಾರಿ. ಈ ಸಾಂಕ್ರಾಮಿಕ ಸೋಂಕುಗಳಿಂದ ಜನರು ಪ್ರತಿ ವರ್ಷ ಸಾಯುತ್ತಲೇ ಇದ್ದಾರೆ. ಹೀಗಾಗಿ ಬಿಕ್ಕಟ್ಟು ದೊಡ್ಡದಾಗುವ ಮೊದಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ. ಅಲ್ಲದೇ, ಜೈವಿಕ ಹಾನಿಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಅವರು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ವಾರಂಟಿಯೇ ಇಲ್ಲದ ಮೇಲೆ ಗ್ಯಾರಂಟಿ ಹೇಗೆ ?
ಕಾಂಗೈ ಕಾಡ್೯ ಠುಸ್ಸು ಪರಸ್ಥಿತಿ ಈಗ ಬಲು ದುಸ್ಥಿತಿ ಸಿ.ಟಿ.ರವಿ ವ್ಯಂಗ್ಯ

ಆಲಮಟ್ಟಿ: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಭರಪೂರ ಸುಳ್ಳು ಭರವಸೆ ನೀಡುತ್ತಿದ್ದು, ಆ ಪಕ್ಷದ ವಾರಂಟಿಯೇ…

ಅಂದು ವಿಶ್ವ ಕಪ್ ತಂದು ಕೊಟ್ಟ ತಂಡದಲ್ಲಿ ಕ್ರಿಕೆಟಿಗ ಯಶ್ ಪಾಲ್ ಇನ್ನಿಲ್ಲ!

ನವದೆಹಲಿ: 1983 ರಲ್ಲಿ ಭಾರತ ತಂಡ ವಿಶ್ವ ಕಪ್ ತನ್ನ ಮುಡಿಗೇರಿಸಿಕೊಂಡಿತ್ತು. ಇದು ಭಾರತದ ಕ್ರೀಕೆಟ್ ಇತಿಹಾಸದಲ್ಲಿ ಮಹತ್ವದ ವರ್ಷವಾಗಿತ್ತು. ಕ್ರೀಕೆಟ್ ಇತಿಹಾಸದಲ್ಲಿ ಭಾರತಕ್ಕೊಂದು ಮೈಲುಗಲ್ಲಾದ 1983 ರ ವಿಶ್ವಕಪ್ ಪಡೆದ ತಂಡದ ಸದಸ್ಯರೊಬ್ಬರು ನಿಧನ ಹೊಂದಿದ್ದಾರೆ. ಹೌದು, ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ದೇಶದಲ್ಲಿ 7 ಸಾವಿರದಷ್ಟು ರೂಪಾಂತರ ಕೊರೊನಾ ವೈರಸ್

ದೇಶದಲ್ಲಿ ಕೊರೊನಾ ವೈರಸ್‌ನ 7 ಸಾವಿರಕ್ಕೂ ಹೆಚ್ಚು ರೂಪಾಂತರಗಳು ಇರುವ ಸಾಧ್ಯತೆ ಇದ್ದು, ಈ ಪೈಕಿ ಕೆಲವು ಗಂಭೀರ ಅಪಾಯ ಉಂಟುಮಾಡಬಹುದು ಎಂದು ಹಿರಿಯ ವಿಜ್ಞಾನಿ ರಾಕೇಶ್ ಮಿಶ್ರಾ ಹೇಳಿದ್ದಾರೆ.

ಮದುಮಗ ಹಾರ ಹಾಕಿದ್ ಕೂಡಲೇ ಖುಷಿಯಾದ ಮದುಮಗಳು ಮಾಡಿದ್ದೇನು?

ಉತ್ತರ ಪ್ರದೇಶ: ಪ್ರತಿಯೊಬ್ಬರಿಗೂ ಮದುವೆ ಬಗ್ಗೆ ಅವರದ್ದೆ ಕನಸಿರುತ್ತೆ. ಆಸೆ-ಆಕಾಂಕ್ಷೆಗಳಿರುತ್ತೆ. ಆದರೆ ಇಲ್ಲೊಬ್ಬ ಯುವತಿ ಮದುಮಗ ತನ್ನ ಕೊರಳಿಗೆ ಹಾರ ಹಾಕಿದ ತಕ್ಷಣ ತನ್ನ ಪ್ರತಿಕ್ರಿಯೇ ಹೇಗಿರಬೇಕೆಂದು ವಿಭಿನ್ನ ಕಲ್ಪನೆಯೊಂದನ್ನು ಕಟ್ಟಿಕೊಂಡಿದ್ದಳು. ಈ ಕಾರಣಕ್ಕಾಗಿ ಏನೋ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.