ಬೆಂಗಳೂರು : ಐದು ವರ್ಷಗಳ ಹಿಂದೆಯೇ ಕೊರೊನಾ ವೈರಸ್ ನಂತಹ ಗಂಡಾಂತರದ ಬಗ್ಗೆ ಎಚ್ಚರಿಕೆ ನೀಡಿದ್ದ ಉದ್ಯಮಿ ಬಿಲ್ ಗೇಟ್ಸ್ ಈಗ ಮತ್ತೆ ಎರಡು ಗಂಡಾಂತರಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಬಿಲ್ ಗೇಟ್ಸ್ ಅವರು 2015ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೊರೊನಾ ವೈರಸ್ ನಂತಹ ಸಾಂಕ್ರಾಮಿಕದ ಕುರಿತು ಮಾತನಾಡಿದ್ದರು. ಮುಂದೊಂದು ದಿನ ಹರಡುವ ಸೋಂಕಿನಿಂದ ಮನೆ ಮನೆಗೂ ಸಂಕಷ್ಟ ಎದುರಾಗಲಿದೆ ಎಂಬ ಎಚ್ಚರಿಕೆ ನೀಡಿದ್ದರು. ಅಲ್ಲದೇ, ಇಂತಹ ಸೋಂಕುಗಳನ್ನು ಮೆಟ್ಟಿ ನಿಲ್ಲಲು ಜಗತ್ತು ಸಿದ್ಧವಾಗಬೇಕು ಎಂದು ಹೇಳಿದ್ದರು. 

ಆದರೆ, ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ವೊಂದರಲ್ಲಿ ಅವರು ಮತ್ತೆ ಇಂತಹ ಗಂಡಾಂತರಗಳ ಬಗ್ಗೆ ಮಾತನಾಡಿದ್ದಾರೆ. ಉಸಿರಾಟದ ಕಾಯಿಲೆ ಸೃಷ್ಟಿಸುವ ಸೋಂಕುಗಳು ಆಗಾಗ ಬರುತ್ತವೆ. ಇವು ತುಂಬಾ ಅಪಾಯಕಾರಿ. ಈ ಸಾಂಕ್ರಾಮಿಕ ಸೋಂಕುಗಳಿಂದ ಜನರು ಪ್ರತಿ ವರ್ಷ ಸಾಯುತ್ತಲೇ ಇದ್ದಾರೆ. ಹೀಗಾಗಿ ಬಿಕ್ಕಟ್ಟು ದೊಡ್ಡದಾಗುವ ಮೊದಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ. ಅಲ್ಲದೇ, ಜೈವಿಕ ಹಾನಿಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಅವರು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಮೋದಿ ವಿರುದ್ಧ ಗುಡುಗಿದ ಕಾಂಗ್ರೆಸ್ ನಾಯಕ ರಾಹುಲ್!

ನವಾಡ : ರಾಹುಲ್ ಹಾಗೂ ತೇಜಸ್ವಿ ಯಾದವ್ ಜಂಟಿಯಾಗಿ ಪ್ರಧಾನಿ ಮೋದಿ ಹಾಗೂ ಬಿಹಾರದ ನಿತೀಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉದ್ಯೋಗ ಸೃಷ್ಟಿ ಮಾಡುವ ವಿಚಾರದಲ್ಲಿ ಬಿಹಾರ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಸರ ಸ್ನೇಹಿ ರೈಲ್ವೆ ವ್ಯವಸ್ಥೆಯಾಗಿ ಮಾರ್ಪಾಡಲು ಭಾರತೀಯ ರೈಲ್ವೆಯ ಸಿದ್ಧತೆ

ಪರಿಸರ ಮತ್ತು ಪ್ರಯಾಣಿಕ ಸ್ನೇಹಿ, ಕಡಿಮೆ ವೆಚ್ಚದಾಯಕದಂತಹ ಹಲವು ಉಪ ಕ್ರಮಗಳಾದ ಬೃಹತ್ ವಿದ್ಯುದೀಕರಣ, ನೀರು ಮತ್ತು ಕಾಗದ ಸಂರಕ್ಷಣೆಯಿಂದ ಹಿಡಿದು ರೈಲ್ವೆ ಹಳಿಗಳಲ್ಲಿ ಪ್ರಾಣಿಗಳು ಗಾಯಗೊಳ್ಳದಂತೆ ಉಳಿಸುವ ಯೋಜನೆಗಳ ಮೂಲಕ ಹಲವು ಪ್ರಮುಖ ಕ್ರಮಗಳು ಪರಿಸರ ಸ್ನೇಹಿ ಕ್ರಮಗಳನ್ನು ಭಾರತೀಯ ರೈಲ್ವೆ ಕೈಗೊಳ್ಳುತ್ತಿದೆ.

ಉಗ್ರರಿಂದ ಬಿಜೆಪಿ ನಾಯಕನನ್ನು ರಕ್ಷಿಸಿ ಹುತಾತ್ಮನಾದ ಮೊಹಮ್ಮದ್ ಅಲ್ತಾಫ್!

ಶ್ರೀನಗರ : ಉಗ್ರರಿಂದ ಬಿಜೆಪಿ ನಾಯಕನನ್ನು ರಕ್ಷಿಸಿ ಪೊಲೀಸ್ ಪೇದೆ ಮೊಹಮ್ಮದ್ ಅಲ್ತಾಫ್ ಹುಸೈನ್ ಹುತಾತ್ಮರಾಗಿದ್ದಾರೆ.

ಟ್ವೀಟರ್ ನಟ ರಜನಿಕಾಂತ ಟ್ವೀಟ್ ಅಳಿಸಿ ಹಾಕಿದ್ದು ಯಾಕೆ?

ಖ್ಯಾತ ನಟ ರಜನಿಕಾಂತ್ ಮಾಡಿದ ಟ್ವೀಟ್ ನ್ನು ಸ್ವತಃ ಟ್ವೀಕರ್ ಅಳಿಸಿ ಹಾಕಿದೆ. ಅವರ ಟ್ವೀಟ್ ಜಾಗದಲ್ಲೀಗ ಟ್ವೀಟರ್ ನಿಯಮ ಉಲ್ಲಂಘಿಸಿರುವುದರಿಂದ ಈ ಟ್ವೀಟ್ ಲಭ್ಯವಿಲ್ಲ ಎಂದು ಸೂಚಿಸಿದೆ. ಟ್ವೀಟ್ ಅಳಿಸಿ ಹಾಕಲಿ ಕಾರಣ ಏನು ಗೊತ್ತೆ?