ಕೋಲಾರ:
ನಗರದಲ್ಲಿ ರಸ್ತೆಗಳು, ಚರಂಡಿ ಒತ್ತುವರಿ ಆಗುವುದನ್ನು ತಡೆಯಬೇಕು. ಒತ್ತುವರಿ ಮಾಡಿಕೊಂಡಿರುವವರು ಎಂತಹ ಪ್ರಭಾವಿಗಳೇ ಆದರೂ ತೆರವುಗೊಳಿಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸೂಚಿಸಿದರು.
ನಗರಸಭೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ನಗರದ ಶ್ರೀನಿವಾಸಪುರ ರಸ್ತೆಯ ವೃತ್ತದಿಂದ ಚಿಕ್ಕಬಳ್ಳಾಪುರ ಮಾರ್ಗದ ರೈಲ್ವೆ ಸೇತುವೆವರೆಗೆ ರಸ್ತೆಗಳ ಒತ್ತುವರಿ ವೀಕ್ಷಿಸಿ ಒತ್ತುವರಿದಾರರಿಗೆ ನೋಟಿಸ್ ಕೊಟ್ಟು ತೆರವಿಗೆ ಸೂಚನೆ ನೀಡಿದರು.
ರಸ್ತೆ ಬದಿಯ ಚರಂಡಿಗಳಲ್ಲಿ ಕಸವನ್ನು ಹಾಕುವುದರಿಂದ ಕೊಳಚೆ ನೀರು ಸರಾಗವಾಗಿ ಹರಿಯದೆ ರೋಗಗಳಿಗೆ ಅವಕಾಶ ಮಾಡಿ ಕೊಟ್ಟಂತಾಗುವುದು. ಹಾಗಾಗಿ ಸಾರ್ವಜನಿಕರು ತಮ್ಮ ಸುತ್ತಮುತ್ತಲು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ರಸ್ತೆಬದಿಗಳಲ್ಲಿ ಯಾವುದೇ ರೀತಿಯ ವಾಹನಗಳನ್ನು ನಿಲ್ಲಿಸಬಾರದು. ವಾಹನಗಳ ಸಂಚಾರಕ್ಕೆ ಅನುವು ಮಾಡಬೇಕು. ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸುವವರಿಗೆ ದಂಡ ವಿಧಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಜಿ.ಪಂ ಸಮೀಪದ ಟರ್ಮಿನಲ್ ಟ್ರಕ್ ಲಾರಿ, ಟೆಂಪು ನಿಲ್ದಾಣಗಳು ನಗರಸಭೆಗೆ ಸೇರಿದ ಆಸ್ತಿಯಾಗಿರುವುದರಿಂದ ಲಾರಿ, ಟೆಂಪುಗಳ ಬಳಿ ಪಾರ್ಕಿಂಗ್ ಶುಲ್ಕವನ್ನು ವಸೂಲಿ ಮಾಡಿ ಚಾಲಕರಿಗೆ ಅಗತ್ಯವಾದ ಮೂಲ ಸೌಲಭ್ಯಕಲ್ಪಿಸಿ ಎಂದು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.
ನಗರ ಯೋಜನಾ ನಿರ್ದೇಶಕ ರಾಮಸ್ವಾಮಿ, ನಗರಸಭೆ ಪೌರಾಯುಕ್ತ ಶ್ರೀಕಾಂತ್, ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಮುಸ್ಟಕ್ ಆಹಮದ್, ಅಮೃತ ಯೋಜನಾಧಿಕಾರಿ ನಾರಾಯಣಸ್ವಾಮಿ, ಶ್ರೀನಾಥ್, ನಗರಸಭೆ ಎಂಜಿನಿಯರ್ ರಾಮಮೂರ್ತಿ, ಪರಿಸರ ಅಧಿಕಾರಿ ಪುನೀತ್, ನಗರಸಭೆ ಕಂದಾಯಾಧಿಕಾರಿ ಚಂದ್ರು, ನಿರೀಕ್ಷಕ ತ್ಯಾಗರಾಜ್, ನಾರಾಯಣಸ್ವಾಮಿ, ಮುಹೂಬೂಪ್ ಪಾಷ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಮಹಾಮಾರಿಗೆ ಬಾಗಲಕೋಟೆಯಲ್ಲಿ ಬಲಿ

ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.…

ಮಹಿಳೆಯಿಂದ ಕಾಂಗ್ರೆಸ್ ಮುಖಂಡನಿಗೆ ಥಳಿತ

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಉತ್ತರ ಪ್ರದೇಶದ ಜಲೌನ್ ಜಿಲ್ಲಾಧ್ಯಕ್ಷ ಅನುಜ್ ಮಿಶ್ರಾ ಎಂಬ ವ್ಯಕ್ತಿಯ ಮೇಲೆಯೇ ಹಲ್ಲೆ ನಡೆದಿದೆ.

ಕೃಷ್ಣೆಯ ಒಡಲಿಗೆ ಸಿಎಂ ಬಾಗಿನ ಅರ್ಪಣೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಮುಸುಕು ಮುಸುಕು.ಕೂಲ್ ಥಂಢಾ ಸಂಭ್ರಮದ ವಾತಾವರಣ. ಹೂ, ಸಸ್ಯ ಗುಚ್ಚುಗಳ ಸೊಬಗು. ತಳಿರು…

ಪ್ರಶ್ನೆಪತ್ರಿಕೆ ಲೀಕ್ ಪ್ರಕರಣದಲ್ಲಿ ಮತ್ತೊಬ್ಬ ಸೆರೆ

ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಎಪ್‌ಡಿಎ ಹುದ್ದೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಈತ ಈಗಾಗಲೇ ಬಂಧಿತನಾಗಿರುವ ಆರೋಪಿ ರಾಚಪ್ಪನ ಚಿಕ್ಕಪ್ಪನ ಮಗನಾಗಿದ್ದಾನೆ.