ಬೆಳಗಾವಿ :
ಬಿಪಿಎಲ್ ಪಡಿತರದಾರರಿಗೆ ಆಹಾರ ಭದ್ರತೆ ಯೋಜನೆಯಡಿ ಅಕ್ಕಿಯ ಜೊತೆಗೆ ಜೋಳ, ಹೆಸರುಬೇಳೆ, ತೊಗರಿ ಹಾಗೂ ರಾಗಿ ವಿತರಿಸಲಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.
ನಗರದಲ್ಲಿ ರವವಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಆಹಾರ ಭದ್ರತೆ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಅಕ್ಕಿ ಜೊತೆಗೆ, ಇತರೆ ಧಾನ್ಯ ವಿತರಿಸುವಂತ ಯೋಜನೆ ಇದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದವರಿಗೆ ಅಕ್ಕಿಯ ಜೊತೆಗೆ ಜೋಳ, ತೊಗಲಿ, ಹೆಸರುಬೇಳೆ ವಿತರಿಸಲಾಗುತ್ತದೆ ಎಂದರು.
ಉತ್ತರ ಕರ್ನಾಟಕ ಭಾಗದವರಿಗೆ ಅಕ್ಕಿ ಜೊತೆಗೆ ಜೋಳ, ತೊಗರಿ ಹೆಸರು ಬೇಳೆ ವಿತರಿಸಿದ್ರೇ, ದಕ್ಷಿಣ ಕರ್ನಾಟಕ ಭಾಗದವರಿಗೆ ಅಕ್ಕಿಯ ಜೊತೆಗೆ ರಾಗಿ, ಹೆಸರು, ತೊಗರಿ ವಿತರಿಸಬೇಕು ಎಂಬ ಯೋಜನೆ ಹಾಕಿದ್ದೇವೆ. ಏಪ್ರಿಲ್ 1ರಿಂದ ಈ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ತಿಳೀಸಿದರು.

Leave a Reply

Your email address will not be published. Required fields are marked *

You May Also Like

ರಂಗಭೂಮಿ ಕ್ಷೇತ್ರ: ಗದಗಿನ ಸಾವಿತ್ರಿ ಗೌಡರ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ಉತ್ತರಪ್ರಭ ಸುದ್ದಿಬೆಂಗಳೂರು: ಕರ್ನಾಟಕ ಸರ್ಕಾರ 2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. 66…

ಸರ್ಕಾರಿ ನೌಕರರು ಡಿ.31ರೊಳಗೆ ಆಸ್ತಿ ಹೊಣೆಗಾರಿಕೆ ಸಲ್ಲಿಸಲು ಸೂಚನೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಿದೆ.

ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರೈತರಿಂದ ತರಾಟೆಗೆ

ಎನ್ ಆರ್ ಬಿ ಸಿ 5ಎ ನಾಲಾ ಯೋಜನೆ ಜಾರಿಗಾಗಿ ಕಳೆದ 9 ದಿನಗಳಿಂದ ಪಾಮನಕೆಲ್ಲೂರಿನಲ್ಲಿ ನಡೆದ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ರೈತರು ತರಾಟೆಗೆ ತಗೆದುಕೊಂಡ ಘಟನೆ ನಡೆಯಿತು.

ಪರಿಸರ ಮಾಲಿನ್ಯ ನಿಯಂತ್ರಣ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕ ಮೇಲಿದೆ: ಮಹೇಶ ಎಂ ಅವಟಿ

ಉತ್ತರಪ್ರಭಗದಗ: ತೋಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯದ ಸಿವ್ಹಿಲ್ ಇಂಜಿನಿಯರಿಂಗ್ ವಿಭಾಗ ಮತ್ತು ಇಐಐಸಿ ಇವರುಗಳ ಸಹಯೋಗದೊಂದಿಗೆ ರಾಷ್ಟ್ರೀಯ…