ಬಾಗಲಕೋಟೆ :
ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಾಲ್ಕು ಅಂತಸ್ತಿನ ವಾಣಿಜ್ಯ ಮಳಿಗೆಯೊಂದು ಭಾರೀ ಅಗ್ನಿ ಅವಘಡಕ್ಕೆ ತುತ್ತಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಇಳಕಲ್ ನ ಬಸವೇಶ್ವರ ಸರ್ಕಲ್ ನಲ್ಲಿರುವ ಚಂದ್ರಶೇಖರ್ ಸಜ್ಜನ ಎಂಬುವರಿಗೆ ಸೇರಿದ ಶಾಪಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೋರ್ ಸೂಪರ್ ಮಾರ್ಕೆಟ್, ಹಾರ್ಡ್ ವೇರ್ ಅಂಗಡಿ, ಕೇಕ್ ಬೇಕರಿ, ಸರೋದ್ ಇಳಕಲ್ ಸೀರೆ, ಪೀಟರ್ ಇಂಗ್ಲೆಂಡ್ ಬಟ್ಟೆ ಮಳಿಗೆ ಸೇರಿದಂತೆ ಅನೇಕ ಅಂಗಡಿಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.
ಮಾಹಿತಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಸುಮಾರು 20 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಚುರುಕು: 14 ಕಣ್ಗಾವಲು ಆರೋಗ್ಯ ತಂಡಗಳ ರಚನೆ

ಜಿಲ್ಲಾ ಮಟ್ಟದ 14 ಕಣ್ಗಾವಲು ಸಾರ್ವಜನಿಕ ಆರೋಗ್ಯ ಸುರಕ್ಷತಾ ತಂಡಗಳ ರಚಿಸಿ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಆದೇಶ ಹೊರಡಿಸಿದ್ದಾರೆ.

ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವರಾಜ ಕುರಿಕಾರ ಗೆಲುವು ಖಚಿತ: ಮಾಜಿ ಶಾಸಕ ಜಿ.ಎಸ್.ಪಾಟೀಲ

ಉತ್ತರಪ್ರಭ ನರೆಗಲ್: ವಿಧಾನ ಪರಿಷತ್‍ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಪರವಾಗಿ…

ನೊಂದವರ ನೆರವಿಗೆ ದಾಸೋಹ ಕಾರ್ಯವಾಗಬೇಕು: ತೋಂಟದ ಸಿದ್ಧರಾಮಶ್ರೀಗಳು

ನಮ್ಮ ಭಾರತ ದೇಶದ ಸಂಸ್ಕಾರ ಸಂಸ್ಕೃತಿಯೇ ವೈರಸ್ ಕಾಟ ಕಡಿಮೆಯಾಗಲು ಕಾರಣವಾಗಿದೆ. ಆದರೆ ಇಂದು ಕಲಿತವರಿಂದ ಕೆಲ ಆಚರಣೆ ಗಾಳಿಗೆ ತೂರಲಾಗಿದೆ. ಹೀಗಾಗಿ ವೈರಸ್ ಕಾಟದಿಂದ ಸಾಕಷ್ಟು ಜನರು ಸಂಕಷ್ಟು ಎದುರಿಸುವಂತಾಗಿದೆ.

ಉತ್ತಮ ಆಡಳಿತ ನಡೆಸುತ್ತಿರುವ ರಾಜ್ಯ ಯಾವುದು ಗೊತ್ತಾ?

ಬೆಂಗಳೂರು : ದೇಶದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದೆ ಈ ಪೈಕಿ ಕೇರಳ ಹಾಗೂ ಗೋವಾ ರಾಜ್ಯಗಳು ಮೊದಲ ಸ್ಥಾನ ಗಳಿಸಿವೆ.