ಬಾಗಲಕೋಟೆ :
ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಾಲ್ಕು ಅಂತಸ್ತಿನ ವಾಣಿಜ್ಯ ಮಳಿಗೆಯೊಂದು ಭಾರೀ ಅಗ್ನಿ ಅವಘಡಕ್ಕೆ ತುತ್ತಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಇಳಕಲ್ ನ ಬಸವೇಶ್ವರ ಸರ್ಕಲ್ ನಲ್ಲಿರುವ ಚಂದ್ರಶೇಖರ್ ಸಜ್ಜನ ಎಂಬುವರಿಗೆ ಸೇರಿದ ಶಾಪಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೋರ್ ಸೂಪರ್ ಮಾರ್ಕೆಟ್, ಹಾರ್ಡ್ ವೇರ್ ಅಂಗಡಿ, ಕೇಕ್ ಬೇಕರಿ, ಸರೋದ್ ಇಳಕಲ್ ಸೀರೆ, ಪೀಟರ್ ಇಂಗ್ಲೆಂಡ್ ಬಟ್ಟೆ ಮಳಿಗೆ ಸೇರಿದಂತೆ ಅನೇಕ ಅಂಗಡಿಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.
ಮಾಹಿತಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಸುಮಾರು 20 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಮಹಿಳೆಯರ ಬಟ್ಟೆ ಕದಿಯುತ್ತಿದ್ದ ಕಳ್ಳನಿಗೆ ಥಳಿತ..!

ಹುಬ್ಬಳ್ಳಿ: ಚಿನ್ನಾಭರಣ ಕದ್ದಿರೋ ಕಳ್ಳರನ್ನು ನೋಡಿದ್ದೇವೆ. ಮನೆ ದರೋಡೆ ಮಾಡಿರೋದನ್ನು ನೋಡಿದ್ದೇವೆ. ಆದ್ರೆ ಮಹಿಳೆಯರ ಬಟ್ಟೆ…

ರೈತರ ಮೇಲೆ ಕಾನೂನು ಕ್ರಮದ ಬೆದರಿಕೆಗೆ ಕುಮಾರಸ್ವಾಮಿ ವಿರೋಧ

ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಆಲಮಟ್ಟಿ ಜಲಾಶಯ ಭದ್ರತಾ ಪಡೆ ಇನ್ಸ್‌ಪೆಕ್ಟರ್ ಮರನೂರ ಸೇವೆಯಿಂದ ಅಮಾನತ್ತು

ಆಲಮಟ್ಟಿ : ಆಲಮಟ್ಟಿ ಜಲಾಶಯ ಭದ್ರತಾ ಕರ್ತವ್ಯಕ್ಕೆ ನಿಯೋಜನೆವಾಗಿದ್ದ ಕೆ.ಎಸ್.ಐ.ಎಸ್.ಎಫ್. 3 ನೇ ಪಡೆ ಪೋಲಿಸ್…

ಸಿನಿಮಾ ಮಂದಿರದಲ್ಲಿ ಪ್ರೇಕ್ಷಕರ ಕಡಿತವಿಲ್ಲ

ಕೊರೊನಾ ಸಂಖ್ಯೆ ಮತ್ತೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಸಿನಿಮಾ ಮಂದಿರಗಳು ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.