ಬಾಗಲಕೋಟೆ : ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಾಲ್ಕು ಅಂತಸ್ತಿನ ವಾಣಿಜ್ಯ ಮಳಿಗೆಯೊಂದು ಭಾರೀ ಅಗ್ನಿ ಅವಘಡಕ್ಕೆ ತುತ್ತಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಇಳಕಲ್ ನ ಬಸವೇಶ್ವರ ಸರ್ಕಲ್ ನಲ್ಲಿರುವ ಚಂದ್ರಶೇಖರ್ ಸಜ್ಜನ ಎಂಬುವರಿಗೆ ಸೇರಿದ ಶಾಪಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೋರ್ ಸೂಪರ್ ಮಾರ್ಕೆಟ್, ಹಾರ್ಡ್ ವೇರ್ ಅಂಗಡಿ, ಕೇಕ್ ಬೇಕರಿ, ಸರೋದ್ ಇಳಕಲ್ ಸೀರೆ, ಪೀಟರ್ ಇಂಗ್ಲೆಂಡ್ ಬಟ್ಟೆ ಮಳಿಗೆ ಸೇರಿದಂತೆ ಅನೇಕ ಅಂಗಡಿಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.
ಮಾಹಿತಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಸುಮಾರು 20 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.