ಬಾಗಲಕೋಟೆ :
ಜಿಲ್ಲೆಯ ಇಳಕಲ್ ನಗರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಾಲ್ಕು ಅಂತಸ್ತಿನ ವಾಣಿಜ್ಯ ಮಳಿಗೆಯೊಂದು ಭಾರೀ ಅಗ್ನಿ ಅವಘಡಕ್ಕೆ ತುತ್ತಾಗಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಇಳಕಲ್ ನ ಬಸವೇಶ್ವರ ಸರ್ಕಲ್ ನಲ್ಲಿರುವ ಚಂದ್ರಶೇಖರ್ ಸಜ್ಜನ ಎಂಬುವರಿಗೆ ಸೇರಿದ ಶಾಪಿಂಗ್ ಸೆಂಟರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೋರ್ ಸೂಪರ್ ಮಾರ್ಕೆಟ್, ಹಾರ್ಡ್ ವೇರ್ ಅಂಗಡಿ, ಕೇಕ್ ಬೇಕರಿ, ಸರೋದ್ ಇಳಕಲ್ ಸೀರೆ, ಪೀಟರ್ ಇಂಗ್ಲೆಂಡ್ ಬಟ್ಟೆ ಮಳಿಗೆ ಸೇರಿದಂತೆ ಅನೇಕ ಅಂಗಡಿಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.
ಮಾಹಿತಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಸುಮಾರು 20 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಯ ಮೇಲಿನ ದಾಳಿ ಬಗ್ಗೆ ಸಿಸಿಬಿ ಹೇಳಿದ್ದೇನು?

ಬೆಂಗಳೂರು : ನಗರದಲ್ಲಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮಧ್ಯಂತರ ಚಾರ್ಜ್‌ ಶೀಟ್‌ ಸಲ್ಲಿಸಿದ್ದಾರೆ.

ಲೋಕಸಭೆಯಲ್ಲಿ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಮಂಡನೆ –ಮತದಾರರ ಪಟ್ಟಿಗೆ ಆಧಾರ ಜೊಡಣೆ ಪ್ರತಿಪಕ್ಷ ವಿರೋಧ

ದೆಹಲಿ:ಲೋಕಸಭೆಯಲ್ಲಿ ಚುಣಾವಾಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿಯಲ್ಲಿ ಮುಖ್ಯವಾಗಿ ನಕಲಿ ಮತದಾರರನ್ನು ತಡೆಯುವುದು…

ಲಾಕ್ ಡೌನ್ : ಸೀಜ್ ಆದ ವಾಹನ ಮಾಲಿಕರಿಗೆ ಸಿಹಿ ಸುದ್ದಿ

ಈಗಾಗಲೇ ದೇಶಾದ್ಯಂತ ಮಾ.24 ರಿಂದಲೇ ಲಾಕ್ ಡೌನ್ ಆರಂಭವಾಗಿದೆ. ಪೊಲೀಸರು ವಶಪಡಿಸಿಕೊಂಡ ವಾಹನಗಳನ್ನು ಮೇ.1 ರಂದು ಮಾಲಿಕರಿಗೆ ಮರಳಿ ನೀಡುವ ಬಗ್ಗೆ ನಿರ್ಧರಿಸಲಾಗಿದೆ.