ವೃದ್ಧರಿಗೆ ಬಿಸಿಯೂಟ ನೀಡಲು ಮುಂದಾದ ಕೇಂದ್ರ ಸರ್ಕಾರ

ನವದೆಹಲಿ : ಆಹಾರಕ್ಕೆ ತೊಂದರೆ ಅನುಭವಿಸುತ್ತಿರುವ ವಯೋವೃದ್ಧರಿಗಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.


ವೃದ್ಧರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಸ್ಟಾರ್ಟಪ್, ವೃದ್ಧರಿಗೆ ಸಹಾಯ ಮಾಡಲು ಸಾಧ್ಯವಾಗುವಂತೆ ಸ್ವಸಹಾಯ ಗುಂಪುಗಳ ಮೂಲಕ ವೃದ್ಧರಿಗೆ ಬಿಸಿಯೂಟ ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಹಿರಿಯ ನಾಗರಿಕರ ಕಲ್ಯಾಣ ನಿಧಿಯ ಅಂತರ್ ಸಚಿವಾಲಯ ಸಮಿತಿ ಫೆಬ್ರವರಿ 4 ರಂದು ಈ ಯೋಜನೆಗೆ ಅನುಮೋದನೆ ನೀಡಿದೆ.

ಅನಾಥರು ಮತ್ತು ಅಪೌಷ್ಟಿಕತೆಯಿಂದ ಬಳಲುವ ಹಾಗೂ ಯಾವುದೇ ವೃದ್ಧಾಶ್ರಮದಲ್ಲಿ ಆಶ್ರಯ ಪಡೆಯದ ವೃದ್ಧರನ್ನು ಗುರುತಿಸಿ ಪ್ರತಿದಿನ ಮಧ್ಯಾಹ್ನ ಬಿಸಿಯಾದ ಊಟ ನೀಡುವುದು ಯೋಜನೆಯಾಗಿದೆ.

Exit mobile version