ಕನಕಪುರ:
ಜಮೀನಿನಲ್ಲಿ ಮೇಯುತ್ತಿದ್ದ ಸೀಮೆ ಹಸುವೊಂದು ನಾಡಬಾಂಬ್‌ ಜಿಗಿದ ಪರಿಣಾಮ ಅದರ ಬಾಯಿ ಛಿದ್ರಗೊಂಡಿರುವ ಘಟನೆ ತಾಲ್ಲೂಕಿನ ಕೆಬ್ಬಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಕೋಡಿಹಳ್ಳಿ ಹೋಬಳಿ ವ್ಯಾಪ್ತಿಯ ಕೆಬ್ಬಳ್ಳಿಯ ಕಾಶೀಗೌಡರಿಗೆ ಸೇರಿದ ಸೀಮೆಹಸು ಗಾಯಗೊಂಡಿದೆ. ಕಾಶೀಗೌಡ ಅವರು ತಮ್ಮ ಜಮೀನಿನಲ್ಲಿ ಹಸುವನ್ನು ಬೆಳಿಗ್ಗೆ ಮೇಯಲು ಬಿಟ್ಟು ಬಂದಿದ್ದಾಗ ಈ ಅವಘಡ ಸಂಭವಿಸಿದೆ.
ಅಕ್ಕಪಕ್ಕದ ಜಮೀನಿನಲ್ಲಿದ್ದ ರೈತರು ನೋಡಿಕೊಂಡು ಕಾಶೀಗೌಡ ಅವರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಅವರು ಕೋಡಿಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
ಕೋಡಿಹಳ್ಳಿ ಸಾತನೂರು, ಉಯ್ಯಂಬಳ್ಳಿ ಹೋಬಳಿಗಳು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿವೆ. ಈ ಭಾಗದಲ್ಲಿ ಕಳ್ಳಬೇಟೆ ಹೆಚ್ಚಾಗಿ ನಡೆಯುತ್ತದೆ. ಬೇಟೆಗಾರರು ಅರಣ್ಯದೊಳಗೆ ಹೋಗುವ ಬದಲು ಕಾಡಂಚಿನ ಜಮೀನುಗಳಲ್ಲಿ ನಾಡಬಾಂಬ್‌ (ಮದ್ದಿನ ಉಂಡೆ) ಇಟ್ಟು ಬೇಟೆಯಾಡುತ್ತಾರೆ. ಕಾಡುಪ್ರಾಣಿಗಳ ಬೇಟೆಗಾಗಿ ಇಟ್ಟಿರುವ ಉಂಡೆಗಳನ್ನು ಹಸುಗಳು ತಿಂದಾಗ ಅವುಗಳ ಬಾಯಿ ಛಿದ್ರಗೊಳ್ಳುತ್ತದೆ. ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ.
ಇಂತಹ ಘಟನೆಗಳು ನಡೆಯುತ್ತಿದ್ದರೂ ತಡೆಯುವಲ್ಲಿ ಅರಣ್ಯ ಮತ್ತು ಪೊಲೀಸ್‌ ಇಲಾಖೆ ವಿಫಲವಾಗಿದೆ. ಬಾಂಬ್‌ನಿಂದ ಛಿದ್ರಗೊಂಡಿರುವ ಹಸುವಿನ ಬಾಯಿಯನ್ನು ಸರಿಪಡಿಸಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಹಸು ಜೀವಂತವಾಗಿ ಉಳಿಯುವುದು ಅಸಾಧ್ಯವಾಗಿದೆ. ಈ ರೀತಿಯಾಗಿ ಮದ್ದಿನ ಉಂಡೆಯಿಟ್ಟು ಮೂಕಪ್ರಾಣಿಗಳ ಜೀವ ತೆಗೆಯುವ ಕಳ್ಳಬೇಟೆಗಾರರನ್ನು ಮಟ್ಟಹಾಕಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕುಂದ್ರಳ್ಳಿ ವಿದ್ಯಾರ್ಥಿಗಳು ಶಾಲಿಗ್ಹೋಗಾಕ್ 3ಕಿಮಿ ನಡಿಬೇಕಂತ!

ಕೊರೊನಾದಿಂದಾಗಿ ಲಾಕ್‌ಡೌನ್ ಮಾಡಲಾಗಿತ್ತು. ಇದಾದ ನಂತರ ಇತ್ತಿಚೆಗಷ್ಟೆ ಶಾಲೆಗಳು ಆರಂಭಿಸಲಾಗಿದೆ. ಆದರೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಹರಸಾಹಸ ಪಡುವಂತಾಗಿದೆ. ಇದಕ್ಕೆ ಕಾರಣ ಬಸ್ ಸೌಲಭ್ಯ ಕೊರತೆ.

ಗದಗ ಜಿಲ್ಲೆಯಲ್ಲಿ ಊರೂರು ವ್ಯಾಪಿಸುತ್ತಿರುವ ವೈರಸ್: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಶುಕ್ರವಾರ ದಿ. 17 ರಂದು 60(ಹೆಲ್ಥ್ ಬುಲೆಟಿನ್ ನಲ್ಲಿ 59) ಜನರಿಗೆ ಕೊವಿಡ್-19…

ಕೇಲೂರ ಘಟನೆ: ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು

ಗದಗ: ಮುಂಡರಗಿ ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಭೂಮಿ ಒತ್ತುವರಿ ತೆರವು ಕರ‍್ಯಾಚರಣೆ…

ಶೋಭಾ ಕರಂದ್ಲಾಜೆ ವಿರುದ್ಧ ಮುಗಿ ಬಿದ್ದ ಕಾಂಗ್ರೆಸ್ ಮಹಿಳೆಯರು!

ಬೆಂಗಳೂರು : ರಾಜರಾಜೇಶ್ವರಿ ನಗರ ಕ್ಷೇತ್ರದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಅವರು ಹಗುರವಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ನಾಯಕಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.