ಉತ್ತರಾಖಂಡ ಪ್ರವಾಹ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ


ನವದೆಹಲಿ:
ಹಿಮಪಾತದಿಂದಾಗಿ ಉತ್ತರಾಖಂಡದ ಚಮೋಲಿಯಲ್ಲಿ ಉಂಟಾದ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಪ್ರವಾಹದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ನಂದಾ ದೇವಿ ಹಿಮನದಿಯ ಒಂದು ಭಾಗದಲ್ಲಿ ಹಿಮಪಾತವಾಗಿ, ಅಲಕಾನಂದ ನದಿಯು ಉಕ್ಕಿ ಹರಿದು ಜಲವಿದ್ಯುತ್ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿದ್ದ 100 ಕ್ಕೂ ಹೆಚ್ಚು ಕಾರ್ಮಿಕರು ಕಣ್ಮರೆಯಾಗಿದ್ದಾರೆ.
ಉತ್ತರಾಖಂಡದಲ್ಲಿ ಹಿಮಪಾತ 125 ಜನರು ಕಾಣೆಯಾಗಿರುವ ಬಗ್ಗೆ ಸಿಎಂ ತ್ರಿವೇಂದ್ರ ಸಿಂಗ್ ಟ್ವೀಟ್ ಮಾಡಿರುವ ಪಿಎಂಒ, ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತದಿಂದಾಗಿ ಉಂಟಾದ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ಪಿಎಂಎನ್‌ಆರ್‌ಎಫ್ (ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ) ಯಿಂದ ತಲಾ 2 ಲಕ್ಷ ರೂ. ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ನೀಡುವುದಾಗಿ ತಿಳಿಸಿದೆ.
ಉತ್ತರಾಖಂಡದಲ್ಲಿ ಸಂಭವಿಸಿದ ವಿನಾಶದ ಬಗ್ಗೆ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಪತ್ರಿಕಾಗೋಷ್ಠಿಯಲ್ಲಿ ಐಟಿಬಿಪಿ ಮತ್ತು ಎಸ್‌ಡಿಆರ್‌ಎಫ್ ತಂಡ ಜನರನ್ನು ರಕ್ಷಿಸುವಲ್ಲಿ ತೊಡಗಿದೆ ಎಂದು ತಿಳಿಸಿದರು. ಹಾಗೂ ಸಂತ್ರಸ್ತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದರು.

Exit mobile version