ಬೆಳಗಾವಿ :
ಕೊರೋನಾ ಸೋಂಕಿನ ಭೀತಿ, ಕೊರೋನಾ ಎರಡನೇ ಅಲೆಯ ನಡುವೆಯೂ ರಾಜ್ಯದಲ್ಲಿ ಈಗಾಗಲೇ ಫೆಬ್ರವರಿ 1ರಿಂದ ಪೂರ್ಣ ಪ್ರಮಾಣದ ತರಗತಿ ಕೂಡ 9, 10, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಗೊಂಡಿವೆ.
ಇತರೆ ತರಗತಿಗಳು ವಿದ್ಯಾಗಮನದ ಮೂಲಕ ಶೈಕ್ಷಣಿಕ ತರಗತಿ ಮುಂದುವರೆಯುತ್ತಿದೆ. ಇದರ ಮಧ್ಯೆ ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳು ಮಾತ್ರ ಆರಂಭಗೊಂಡಿಲ್ಲ. ಇಂತಹ ತರಗತಿಗಳನ್ನು ಆರಂಭಕ್ಕೆ ಚಿಂತನೆ ನಡೆಸುತ್ತಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಉಚಿತ ಹೆಲ್ಮೆಟ್ ಗಾಗಿ ಮುಗಿಬಿದ್ದ ಜನರು : ಎಲ್ಲಿ ಗೊತ್ತೇ.?
ಖಾನಾಪುರ ತಾಲೂಕಿನ ಜಾಂಬೋಟಿ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಕೋವಿಡ್ ಕಾರಣದಿಂದ ತರಗತಿಗಳು ಆರಂಭವಾಗದೇ, ಮಕ್ಕಳು ಶಾಲೆಗೆ ತೆರಳದೇ ಅನೇಕ ಕಡೆಗಳಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹಾಗೂ ಬಾಲ್ಯ ವಿವಾಹ ಜಾಸ್ತಿಯಾಗಿದೆ ಎಂಬುದಾಗಿ ಕಳವಳ ವ್ಯಕ್ತ ಪಡಿಸಿದರು.
ಮಸ್ಕಿ ಉಪ ಚುನಾವಣೆ’ಯ ಸಂದರ್ಭದಲ್ಲೇ ರಾಜ್ಯ ಸರ್ಕಾರ’ದಿಂದ ಭರ್ಜರಿ ಗಿಫ್ಟ್
ರಾಜ್ಯದಲ್ಲಿ ಫೆಬ್ರವರಿ 1ರಿಂದ 9 ಮತ್ತು 11ನೇ ತರಗತಿ ಆರಂಭಿಸಲಾಗಿದೆ. ಇದಾದ ಬಳಿಕ 1ನೇ ತರಗತಿ ಆರಂಭಕ್ಕೂ ಒತ್ತಾಯ ಕೇಳಿ ಬರುತ್ತಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ 1 ರಿಂದ 5ನೇ ತರಗತಿಗಳನ್ನು ಆರಂಭ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಜೊತೆಗೆ ಮಧ್ಯಾಹ್ನದ ಬಿಸಿಯೂಟವೂ ಆರಂಭವಾಗಬೇಕಿದೆ. ಈ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Leave a Reply

Your email address will not be published. Required fields are marked *

You May Also Like

ರಾಜ್ಯದ ಬೊಕ್ಕಸಕ್ಕೆ ಭಾರಿ ಹೊಡೆತ!

ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹೀಗಾಗಿ ಇನ್ನೂ ಲಾಕ್ ಡೌನ್ ಮುಂದುವರೆದಿದೆ. ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ನಷ್ಟವಾಗಿದೆ.

ಬೈಕ್ ಡಿಕ್ಕಿ: ಪಾದಚಾರಿ ಸಾವು

ಹಿಂದಿನಿಂದ ಬಂದ ಬೈಕ್ ಹರಿದು ವಾಯುವಿಹಾರಿ ಸ್ಥಳದಲ್ಲೇ ಸಾವಿನಪ್ಪಿದ ಘಟನೆ ತಾಲೂಕಿನ ರಾಮಗೇರಿ ಗ್ರಾಮದಲ್ಲಿ ನಡೆದಿದೆ. ಶನಿವಾರ ಬೆಳಗಿನ ಸಮಯದಲ್ಲ್ಲಿ ವಾಯುವ ವಿಹಾರಕ್ಕೆ ತೆರಳಿದ್ದ ಹನಮಂತಪ್ಪ ಕಾಳೆ(52) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

SBI ಗ್ರಾಮಸೇವಾ ಕೇಂದ್ರ ಉದ್ಘಾಟನೆ: ಸಶಕ್ತಿಕರಣದ ಮೂಲ ಉದ್ದೇಶ ಸಾಕಾರವಾದಾಗ ಮಾತ್ರ ಗ್ರಾಮಗಳ ಅಭಿವೃದ್ಧಿ ಸಾಧ್ಯ

ಮುಂಡರಗಿ: ಸರ್ಕಾರದ ಯೋಜನೆಗಳು ಹಾಗು ಸೌಲಭ್ಯಗಳು ಸಾಕಷ್ಟು ಇವೆ. ಆದರೆ ಅವುಗಳ ಸದ್ಭಳಕೆಯಾಗಬೇಕು. ಮುಖ್ಯವಾಗಿ ಸಶಕ್ತಿಕರಣದ…

ಗದಗ ಎಸ್ಪಿ ಯತೀಶ ಎನ್ ವರ್ಗಾವಣೆ

ಉತ್ತರಪ್ರಭ ಸುದ್ದಿ ಗದಗ: ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.