ಬೆಂಗಳೂರು: ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಈ ಕುರಿತು ಮಾಹಿತಿ ನೀಡಿದ ಅವರು, ಜಿಎಸ್ ಡಿಪಿಗೆ (ಗ್ರಾಸ್ ಸ್ಟೇಟ್ ಡೊಮೆಸ್ಟಿಕ್ ಪ್ರಾಡಕ್ಟ್) ಡಿಜಿಟಲ್ ಎಕಾನಮಿಯ ಕೊಡುಗೆ ಶೇ.30 ತಲುಪಿಸಬೇಕು ಮತ್ತು ಬಿಯಾಂಡ್ ಬೆಂಗಳೂರು ಆರಂಭಿಸುವುದರಿಂದ ಈ ಗುರಿಯನ್ನು ತಲುಪಿಸುವಲ್ಲಿ ಸಹಾಯ ಮಾಡುತ್ತದೆ ಎಂದಿದ್ದಾರೆ.

ಕೆಡಿಇಎಮ್, ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಹೆಚ್ಚು ಬಂಡವಾಳವನ್ನು ಆಕರ್ಷಿಸಲಿದ್ದು, ಮಾಹಿತಿ ತಂತ್ರಜ್ಞಾನ ರಫ್ತಿನಲ್ಲಿ ಕರ್ನಾಟಕವು 150 ಬಿಲಿಯನ್ ಅಮೆರಿಕನ್ ಡಾಲರ್ ಗುರಿ ತಲುಪುವುದಕ್ಕೆ ಹಾಗು 2025ರ ಹೊತ್ತಿಗೆ 300 ಬಿಲಿಯನ್ ಯುಎಸ್ ಡಿ ಆಗುವಲ್ಲಿ ಸಹಾಯ ಮಾಡಲಿದೆ ಎಂದರು.

ಕೆಡಿಇಎಮ್ ಹೆಚ್ಚು ಉದ್ಯಮಸ್ನೇಹಿ ಆಗಬೇಕು ಎಂದು ಸರ್ಕಾರ ಬಯಸಿದೆ. ಸರ್ಕಾರವು ತನ್ನ ಬಳಿ ಅಧಿಕಾರ ಇಟ್ಟುಕೊಳ್ಳುವ ಬದಲಿಗೆ ಅನುಕೂಲ ಮಾಡಿಕೊಡುವ ಸ್ಥಾನ ನಿರ್ವಹಿಸುವುದಕ್ಕೆ ಮುಂದಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೈಗಾರಿಕೆ ಒಕ್ಕೂಟಗಳಿಗೆ ಶೇ.51ರಷ್ಟು ಪಾಲಿಗೆ ಅವಕಾಶ ನೀಡಲಾಗಿದೆ. ಶೇ.49 ತನ್ನ ಬಳಿ ಇರಿಸಿಕೊಂಡಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಭಾವನೆಗಳ ರಸಕಾವ್ಯಕ್ಕೆ ಚಿತ್ರಕಲೆ ಸ್ಪೂರ್ತಿ- ಉಮೇಶ ಶಿರಹಟ್ಟಿಮಠ ಅಭಿಮತ

ಚಿತ್ರ ಬರಹ : ಗುಲಾಬಚಂದ ಜಾಧವವಿಜಯಪುರ : ಚಿತ್ರಕಲೆ ನಮ್ಮ ಸಂಸ್ಕೃತಿಗಳ ಜೀವನಾಡಿ.ಅದು ಜೀವನದ ಒಂದು…

ಲಕ್ಷ್ಮೇಶ್ವರದಲ್ಲಿ ಕರ್ಫ್ಯೂ ಭಾಗಶಃ ಯಶಸ್ವಿ; ದಂಡಾಧಿಕಾರಿಗಳಿಂದ ರೂಲ್ಸ್ ಬ್ರೇಕ ಮಾಡಿದವರಿಗೆ ದಂಡ.

ಲಕ್ಷ್ಮೇಶ್ವರ: ಬಿಕೋ ಎನ್ನುತ್ತಿರುವ ಪ್ರಮುಖ ಹೆದ್ದಾರಿ, ಬಸ್ ನಿಲ್ದಾಣಗಳು… ಶುಕ್ರವಾರ ರಾತ್ರಿಯಿಂದಲೇ ಪೊಲೀಸರು ನೈಟ್ –…

ಕೊರೊನಾ ವಾರಿಯರ್ಸ್ ಗೆ ಸಿಗದ ಸಂಬಳ!

ಕೊರೊನಾ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೋರಾಡುತ್ತಿದ್ದಾರೆ. ಆದರೆ, ಇವರ ಸಂಬಳಕ್ಕೆ ಕತ್ತರಿ ಹಾಕಿರುವುದು ಬೆಳಕಿಗೆ ಬಂದಿದೆ.

ಆಸ್ಟ್ರಿಯಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರರ 'ಅಮೃತಮತಿ' ಆಯ್ಕೆ

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ…