ಬೆಂಗಳೂರು: ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಈ ಕುರಿತು ಮಾಹಿತಿ ನೀಡಿದ ಅವರು, ಜಿಎಸ್ ಡಿಪಿಗೆ (ಗ್ರಾಸ್ ಸ್ಟೇಟ್ ಡೊಮೆಸ್ಟಿಕ್ ಪ್ರಾಡಕ್ಟ್) ಡಿಜಿಟಲ್ ಎಕಾನಮಿಯ ಕೊಡುಗೆ ಶೇ.30 ತಲುಪಿಸಬೇಕು ಮತ್ತು ಬಿಯಾಂಡ್ ಬೆಂಗಳೂರು ಆರಂಭಿಸುವುದರಿಂದ ಈ ಗುರಿಯನ್ನು ತಲುಪಿಸುವಲ್ಲಿ ಸಹಾಯ ಮಾಡುತ್ತದೆ ಎಂದಿದ್ದಾರೆ.

ಕೆಡಿಇಎಮ್, ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಹೆಚ್ಚು ಬಂಡವಾಳವನ್ನು ಆಕರ್ಷಿಸಲಿದ್ದು, ಮಾಹಿತಿ ತಂತ್ರಜ್ಞಾನ ರಫ್ತಿನಲ್ಲಿ ಕರ್ನಾಟಕವು 150 ಬಿಲಿಯನ್ ಅಮೆರಿಕನ್ ಡಾಲರ್ ಗುರಿ ತಲುಪುವುದಕ್ಕೆ ಹಾಗು 2025ರ ಹೊತ್ತಿಗೆ 300 ಬಿಲಿಯನ್ ಯುಎಸ್ ಡಿ ಆಗುವಲ್ಲಿ ಸಹಾಯ ಮಾಡಲಿದೆ ಎಂದರು.

ಕೆಡಿಇಎಮ್ ಹೆಚ್ಚು ಉದ್ಯಮಸ್ನೇಹಿ ಆಗಬೇಕು ಎಂದು ಸರ್ಕಾರ ಬಯಸಿದೆ. ಸರ್ಕಾರವು ತನ್ನ ಬಳಿ ಅಧಿಕಾರ ಇಟ್ಟುಕೊಳ್ಳುವ ಬದಲಿಗೆ ಅನುಕೂಲ ಮಾಡಿಕೊಡುವ ಸ್ಥಾನ ನಿರ್ವಹಿಸುವುದಕ್ಕೆ ಮುಂದಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೈಗಾರಿಕೆ ಒಕ್ಕೂಟಗಳಿಗೆ ಶೇ.51ರಷ್ಟು ಪಾಲಿಗೆ ಅವಕಾಶ ನೀಡಲಾಗಿದೆ. ಶೇ.49 ತನ್ನ ಬಳಿ ಇರಿಸಿಕೊಂಡಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ನೂರಾರು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಉತ್ತರಪ್ರಭ ಸುದ್ದಿಕೋಲಾರ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಇಂದು ಜೆಡಿಎಸ್ ಹಾಗೂ…

7 ನೇ ವೇತನ ಆಯೋಗಕ್ಕೆ ರಾಜ್ಯಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಮಗ್ರ ವರದಿ ಸಲ್ಲಿಕೆ

ಆಲಮಟ್ಟಿ (ವಿಜಯಪುರ ಜಿಲ್ಲೆ) : 7 ನೇ ವೇತನ ಆಯೋಗದಿಂದ ನಿಗದಿಗೊಳಿಸಿದ ಪ್ರಶ್ನಾವಳಿಗಳಿಗೆ ಸಂಬಂಧಿಸಿದಂತೆ ಕನಾ೯ಟಕ…

Как скачать приложение Мостбет в Казахстане на Android и iOS Информация от компаний Астаны

Мостбет КЗ официальный сайт Mostbet KZ, регистрация и бонусы Content Финансовые транзакции:…

ರಾಜ್ಯ ಕ.ಸಾ.ಪ ಕಾರ್ಯಕಾರಿ ಸಮಿತಿಗೆ ನೇಮಕ.

ಬೆಂಗಳೂರ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಅವರು ಕನ್ನಡ ಭಾಷೆ,…