ಬೆಂಗಳೂರು: ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಈ ಕುರಿತು ಮಾಹಿತಿ ನೀಡಿದ ಅವರು, ಜಿಎಸ್ ಡಿಪಿಗೆ (ಗ್ರಾಸ್ ಸ್ಟೇಟ್ ಡೊಮೆಸ್ಟಿಕ್ ಪ್ರಾಡಕ್ಟ್) ಡಿಜಿಟಲ್ ಎಕಾನಮಿಯ ಕೊಡುಗೆ ಶೇ.30 ತಲುಪಿಸಬೇಕು ಮತ್ತು ಬಿಯಾಂಡ್ ಬೆಂಗಳೂರು ಆರಂಭಿಸುವುದರಿಂದ ಈ ಗುರಿಯನ್ನು ತಲುಪಿಸುವಲ್ಲಿ ಸಹಾಯ ಮಾಡುತ್ತದೆ ಎಂದಿದ್ದಾರೆ.

ಕೆಡಿಇಎಮ್, ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಹೆಚ್ಚು ಬಂಡವಾಳವನ್ನು ಆಕರ್ಷಿಸಲಿದ್ದು, ಮಾಹಿತಿ ತಂತ್ರಜ್ಞಾನ ರಫ್ತಿನಲ್ಲಿ ಕರ್ನಾಟಕವು 150 ಬಿಲಿಯನ್ ಅಮೆರಿಕನ್ ಡಾಲರ್ ಗುರಿ ತಲುಪುವುದಕ್ಕೆ ಹಾಗು 2025ರ ಹೊತ್ತಿಗೆ 300 ಬಿಲಿಯನ್ ಯುಎಸ್ ಡಿ ಆಗುವಲ್ಲಿ ಸಹಾಯ ಮಾಡಲಿದೆ ಎಂದರು.

ಕೆಡಿಇಎಮ್ ಹೆಚ್ಚು ಉದ್ಯಮಸ್ನೇಹಿ ಆಗಬೇಕು ಎಂದು ಸರ್ಕಾರ ಬಯಸಿದೆ. ಸರ್ಕಾರವು ತನ್ನ ಬಳಿ ಅಧಿಕಾರ ಇಟ್ಟುಕೊಳ್ಳುವ ಬದಲಿಗೆ ಅನುಕೂಲ ಮಾಡಿಕೊಡುವ ಸ್ಥಾನ ನಿರ್ವಹಿಸುವುದಕ್ಕೆ ಮುಂದಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೈಗಾರಿಕೆ ಒಕ್ಕೂಟಗಳಿಗೆ ಶೇ.51ರಷ್ಟು ಪಾಲಿಗೆ ಅವಕಾಶ ನೀಡಲಾಗಿದೆ. ಶೇ.49 ತನ್ನ ಬಳಿ ಇರಿಸಿಕೊಂಡಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಪಂಚಾಯತಿ ಚುನಾವಣೆ: ಸರ್ಕಾರ ಎಲ್ಲವನ್ನು ಎಲ್ಲರನ್ನು ಕೇಳಿ ತೀರ್ಮಾನ ಕೈಗೊಳ್ಳಲು ಆಗಲ್ಲ

ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಸರ್ಕಾರ ಎಲ್ಲವನ್ನು ಎಲ್ಲರನ್ನು ಕೇಳಿ ತೀರ್ಮಾನ ಕೈಗೊಳ್ಳಲು ಆಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ಮುಂದಿನ ದಿನಗಳಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಂತೆ

ಮುಂದಿನ ದಿನಗಳಲ್ಲಿ ಒಂದಿಷ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು. ಸಮಸ್ಯೆ ಎದುರಿಸಲು ಸರಕಾರ ಸಂಪೂರ್ಣ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿದರು.

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆ

ಗದಗ:  ಆತ್ಮನಿರ್ಭರ ಭಾರತ ಅಭಿಯಾನದ ಅಂಗವಾಗಿ ಭಾರತ ಸರ್ಕಾರವು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ಯಮಗಳ…

ಕಣ್ಣೆದುರಿಗೆ ಕೊಳೆಯುತ್ತಿರುವ ಈರುಳ್ಳಿಯಿಂದ ಬದುಕು ಕಳೆಗುಂದುವ ಆತಂಕ..!

ದರದ ನಿರೀಕ್ಷೆಯೊಂದಿಗೆ ಪಟ್ಟಣದ ರೈತರು ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಉತ್ತಮ ಇಳುವರಿಯೂ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಯಾರು ಕೇಳದಂತಹ ಸ್ಥಿತಿ ನಿರ್ಮಾಣವಾಗಿದ್ದರಿಂದ ಸೂಕ್ತ ಬೆಲೆಯಿಲ್ಲದೆ ರೈತರು ಪರದಾಡುವಂತಾಗಿದೆ.