ಬೆಂಗಳೂರು: ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

ಈ ಕುರಿತು ಮಾಹಿತಿ ನೀಡಿದ ಅವರು, ಜಿಎಸ್ ಡಿಪಿಗೆ (ಗ್ರಾಸ್ ಸ್ಟೇಟ್ ಡೊಮೆಸ್ಟಿಕ್ ಪ್ರಾಡಕ್ಟ್) ಡಿಜಿಟಲ್ ಎಕಾನಮಿಯ ಕೊಡುಗೆ ಶೇ.30 ತಲುಪಿಸಬೇಕು ಮತ್ತು ಬಿಯಾಂಡ್ ಬೆಂಗಳೂರು ಆರಂಭಿಸುವುದರಿಂದ ಈ ಗುರಿಯನ್ನು ತಲುಪಿಸುವಲ್ಲಿ ಸಹಾಯ ಮಾಡುತ್ತದೆ ಎಂದಿದ್ದಾರೆ.

ಕೆಡಿಇಎಮ್, ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಹೆಚ್ಚು ಬಂಡವಾಳವನ್ನು ಆಕರ್ಷಿಸಲಿದ್ದು, ಮಾಹಿತಿ ತಂತ್ರಜ್ಞಾನ ರಫ್ತಿನಲ್ಲಿ ಕರ್ನಾಟಕವು 150 ಬಿಲಿಯನ್ ಅಮೆರಿಕನ್ ಡಾಲರ್ ಗುರಿ ತಲುಪುವುದಕ್ಕೆ ಹಾಗು 2025ರ ಹೊತ್ತಿಗೆ 300 ಬಿಲಿಯನ್ ಯುಎಸ್ ಡಿ ಆಗುವಲ್ಲಿ ಸಹಾಯ ಮಾಡಲಿದೆ ಎಂದರು.

ಕೆಡಿಇಎಮ್ ಹೆಚ್ಚು ಉದ್ಯಮಸ್ನೇಹಿ ಆಗಬೇಕು ಎಂದು ಸರ್ಕಾರ ಬಯಸಿದೆ. ಸರ್ಕಾರವು ತನ್ನ ಬಳಿ ಅಧಿಕಾರ ಇಟ್ಟುಕೊಳ್ಳುವ ಬದಲಿಗೆ ಅನುಕೂಲ ಮಾಡಿಕೊಡುವ ಸ್ಥಾನ ನಿರ್ವಹಿಸುವುದಕ್ಕೆ ಮುಂದಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೈಗಾರಿಕೆ ಒಕ್ಕೂಟಗಳಿಗೆ ಶೇ.51ರಷ್ಟು ಪಾಲಿಗೆ ಅವಕಾಶ ನೀಡಲಾಗಿದೆ. ಶೇ.49 ತನ್ನ ಬಳಿ ಇರಿಸಿಕೊಂಡಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ: ಶಾಸಕ ರಾಮಣ್ಣ

ಮತಕ್ಷೇತ್ರದ ವ್ಯಾಪ್ತಿಯ ಹಳ್ಳಿಗಳಿಗೆ ಸುಗಮ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ನೀಡುವುದರ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

11 ಎಕರೆ ಹೊಲದಾನ್ ಗೋವಿನ ಜೋಳ ಬೆಂಕಿಗೆ ಆಹುತಿ!

ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳ ಸುಟ್ಟು ಭಸ್ಮಗೊಂಡ ಘಟನೆ ಗದಗ ಜಿಲ್ಲೆಯ ನಾಗಾವಿ ತಾಂಡಾದಲ್ಲಿ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ನಾಶವಾಗಿದೆ. ಲಕ್ಷ್ಮಣ್ ಪವಾರ್ ಎಂಬುವರಿಗೆ ಸೇರಿದ 11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು 2.5 ಲಕ್ಷ ರೂ. ಮೌಲ್ಯದ ಬೆಳೆ ನಾಶವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿದಿಸಲು ಪ್ರಯತ್ನಿಸಿದರು.

ಸಂಕ್ರಾಂತಿಯ ಪುಣ್ಯಸ್ನಾನ : ಇಬ್ಬರು ಯುವಕರು ನದಿ ಪಾಲು.

ರಾಯಚೂರು:ಮಕರ ಸಂಕ್ರಾಂತಿಯ ಪುಣ್ಯಸ್ನಾನ ಮಾಡುವುದಕ್ಕಾಗಿ ತೆರಳಿದ ರಾಯಚೂರಿನ ಇಬ್ಬರು ಯುವಕರು ಕೃಷ್ಣಾ ನದಿಯ ಪಾಲಾಗಿದ್ದಾರೆ.ಸಂಕ್ರಾಂತಿ ಪೀಡೆ…

15 ದಿನದಲ್ಲಿ ಬಾಕಿ ತೆರಿಗೆ ವಸೂಲಿ ಮಾಡಿ : ನಗರಸಭೆಗೆ ಡಿಸಿ ಸೂಚನೆ

ಗದಗ ಬೆಟಗೇರಿ ನಗರಸಭೆಯ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಎಂ. ಸುಂದರೇಶಬಾಬು ನಗರಸಭೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಅವಳಿ ನಗರದ ಎಲ್ಲ ಮುಖ್ಯ ರಸ್ತೆಗಳ ತೆರೆದ ಗುಂಡಿಗಳನ್ನು ತಕ್ಷಣವೇ ಮುಚ್ಚಲು ನಿರ್ದೇಶನ ನೀಡಿದರು.