ಬೆಂಗಳೂರು: ರಾಜ್ಯದಲ್ಲಿ ಜಾತ್ರೆ, ಉತ್ಸವ, ರಥೋತ್ಸವ ಆಚರಣೆ ಧಾರ್ಮಿಕ ದತ್ತಿ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯದ ಹೆಚ್ಚಿನ ದೇವಾಲಯಗಳಲ್ಲಿ ಫೆಬ್ರವರಿ ತಿಂಗಳಲ್ಲಿ ಜಾತ್ರಾ, ಉತ್ಸವಗಳು ನಡೆಯತ್ತಿದ್ದು, ಈ ಜಾತ್ರಾ ಉತ್ಸವಗಳನ್ನು ನಡೆಸಲು ಹಲವಾರು ಬೇಡಿಕೆಗಳು ಬರುತ್ತಿರುತ್ತವೆ. ಜಾತ್ರಾ/ ಉತ್ಸವಗಳನ್ನು ತಡೆಹಿಡಿಯವುದರಿಂದ, ಸಾರ್ವಜನಿಕರು/ ಭಕ್ತಾದಿಗಳ ಭಾವನೆಗಳಿಗೆ ಧಕ್ಕೆ ಉಂಟಾಗುವುದರಿಂದ ಸಾರ್ವಜನಿಕರು/ಭಕ್ತಾಧಿಗಳ ಹಿತದೃಷ್ಟಿಯಿಂದ ಹಾಗೂ ಕೋವಿಡ್-19 ಅನ್ನು ನಿಯಂತ್ರಿಸುವ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಮತ್ತು ಆಯಾಯಾ ಜಿಲ್ಲಾಧಿಕಾರಿಗಳು ಹೊರಡಿಸಿರುವ ಅಥವಾ ಹೊರಡಿಸಲಿರುವ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು ಮುಂದೂಡಲಾಗಿರುವ ದೇವಾಲಯಗಳಲ್ಲಿನ ರಥೋತ್ಸವಗಳ ಸಂಬಂಧ ಆಯಾಯಾ ದೇವಾಲಯಗಳ ಶಾಸ್ತ್ರ ಸಂಪ್ರದಾಯದಂತೆ ಪ್ರಾಯಶ್ಚಿತ್ತಾಧಿ ಶಾಸ್ತ್ರೀಯ ಕಾರ್ಯಗಳನ್ನು ನಡೆಸಿ ಈ ಹಿಂದೆ ನಡೆಸುತ್ತಿದ್ದ ಎಲ್ಲಾ ಸೇವೆಗಳು, ಜಾತ್ರಾ ಉತ್ಸವಗಳು, ರಥೋತ್ಸವ, ಪವಿತ್ರೋತ್ಸವ, ವಿಶೇಷ ಉತ್ಸವಗಳು, ಅನ್ನ ದಾಸೋಹ, ಪ್ರಸಾದ ವಿತರಣೆ ಇತರೆ ಪೂಜಾ ಕೈಂಕರ್ಯಗಳನ್ನು ನಡೆಸಲು ಸೂಚಿಸಿದೆ.

ರಾಜ್ಯದಲ್ಲಿ ಕೋವಿಡ್-19 (ಕರೋನಾ ವೈರಸ್) ಹರಡುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳು, ಸಂಸ್ಥೆಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ದಿನನಿತ್ಯ ಶಾಸ್ತ್ರ ಸಂಪ್ರದಾಯದಂತೆ ನಡೆಯುವ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ಮತ್ತು ಪೂಜಾ ಕೈಂಕರ್ಯಗಳನ್ನು ದೇವಾಲಯದ ಒಳಗೆ ಮತ್ತು ಒಳಪ್ರಕಾರದಲ್ಲಿ ಆಗಮಿಕರು / ತಂತ್ರಿಗಳು / ಅರ್ಚಕರು ಹಾಗೂ ದೇವಾಲಯದ ಸಿಬ್ಬಂದಿ ವರ್ಗದವರು ನಡೆಸುವ ಷರತ್ತಿಗೊಳಪಟ್ಟು ಉಳಿದಂತೆ ದೇವಾಲಯಗಳಲ್ಲಿ ನಡೆಯುವ ಎಲ್ಲಾ ಸೇವೆಗಳು, ಜಾತ್ರೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಉತ್ಸವ, ಪ್ರಸಾದ, ದಾಸೋಹ, ತೀರ್ಥ ವಿತರಣೆ ಮತ್ತು ದೇವರ ದರ್ಶನ ಹಾಗೂ ಇತರೆ ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ಹಾಗೂ ದೇವಾಲಯಗಳಲ್ಲಿನ ವಸತಿ ಗೃಹ, ಅತಿಥಿ ಗೃಹಗಳನ್ನು ಭಕ್ತಾಧಿಗಳಿಗೆ ಸಾರ್ವಜನಿಕರಿಗೆ ಹಂಚಿಕೆ ಮಾಡುವುದನ್ನು ಉಲ್ಲೇಖ (2)ರ ವಿನಾಂಕ:20.03.2020ರ ಸುತ್ತೋಲೆಯಲ್ಲಿ ಮುಂದಿನ ಆದೇಶದವರೆಗೆ ರದ್ದುಪಡಿಸಿ ಆದೇಶಿಸಲಾಗಿತ್ತು.

ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಸೇವೆಗಳನ್ನು ಪುನರ್ ಪ್ರಾರಂಭಿಸುವ ಬಗ್ಗೆ ಭಕ್ತಾಧಿಗಳಿಂದ ಬೇಡಿಕೆ ಬರುತ್ತಿದ್ದ ಹಿನ್ನೆಲೆಯಲ್ಲಿ ಭಕ್ತಾಧಿಗಳ ಹಿತದೃಷ್ಟಿಯಿಂದ ದೇವಾಲಯಗಳಲ್ಲಿ ಕೆಲವು ಪರತ್ತಿಗೊಳಪಟ್ಟು ದೈನಂದಿನ ಸೇವೆಗಳನ್ನು ಕೆಲವು ಷರತ್ತುಗಳಿಗೊಳಪಟ್ಟು ದಿನಾಂಕ:01.09.2020ರಿಂದ ಪ್ರಾರಂಭಿಸಲು ಉಲ್ಲೇಖಿತ (2) ಸುತ್ತೋಲೆಯಲ್ಲಿ ಸೂಚಿಸಲಾಗಿತ್ತು.

Leave a Reply

Your email address will not be published. Required fields are marked *

You May Also Like

ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ರೈಲು ಪ್ರಾರಂಭಕ್ಕೆ ಬ್ಯಾಳಿ ಒತ್ತಾಯ

ಬಹಳಷ್ಟು ಪ್ರಯಾಣಿಕರು ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ ಮತ್ತು ಬಳ್ಳಾರಿಯಿಂದ ರಾಯಚೂರು, ಮಂತ್ರಾಲಯ, ಗದ್ವಾಲ್ ಜಲಮ್ಮದೇವಿಗೆ ಕರ್ನೂಲ ಮೂಲಕ ಶ್ರೀಶೈಲಂಗೆ ಹೋಗಿ ಬರಲು ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ಈ ರೈಲುಗಾಡಿ ಕೋವಿಡ್ 19 ಮಹಾಮಾರಿಗಿಂತ ಮುಂಚೆ ಇದ್ದು ಅದು ಪ್ರಯಾಣಿಕರಿಗೆ ಬಹಳ ಅನುಕೂಲವಾಗಿತ್ತು

ಸಿಡಿಲು ಬಡಿದು ಇಬ್ಬರು ಸಾವು

ಉತ್ತರಪ್ರಭಶಿರಹಟ್ಟಿ: ಪಟ್ಟಣದ ಹೊರವಲಯದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ…

ಜೆಡಿಎಸ್ ನೆಲದಲ್ಲಿ ಸೋತರೂ ಅಧಿಕಾರಕ್ಕೆ ಏರುವ ಪ್ರಯತ್ನದಲ್ಲಿ ಬಿಜೆಪಿ!?

ಹಾಸನ : ಜೆಡಿಎಸ್ ಕೋಟೆಯಲ್ಲಿ ತಂತ್ರದಿಂದ ವಶಪಡಿಸಿಕೊಳ್ಳಲು ಬಿಜೆಪಿ ಹವಣಿಸುತ್ತಿದೆಯೇ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿ ಬರುತ್ತಿವೆ. ಮೀಸಲಾತಿ ಹೆಸರಿನಲ್ಲಿ ಇಂತಹದೊಂದು ಕೃತ್ಯ ನಡೆಯುತ್ತಿದೆ ಎಂಬ ಆರೋಪ ಸದ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿದೆ.

ಡ್ರೋನ್ ಪ್ರತಾಪ್: ಟಿವಿ ಸಂದರ್ಶನದಲ್ಲಿ ತೋರಿಸಿದ ಫೋಟೊದ ಅಸಲಿಯತ್ತು ಬಯಲು!

ಸ್ವಯಂಘೋಷಿತ 600 ಡ್ರೋನ್ ಸರದಾರ ಎನ್.ಎಂ.ಪ್ರತಾಪನ ಸುಳ್ಳುಗಳು ಒಂದೊಂದಾಗಿ ಹೊರಬರುತ್ತಿವೆ. ಬಿಟಿವಿಯಲ್ಲಿ ಸುದೀರ್ಘ ಸಂದರ್ಶನದಲ್ಲಿ ಈ ಹುಡುಗ ಮೊಬೈಲ್ ನಲ್ಲಿ ತೋರಿಸಿದ ಫೋಟೊಗಳ ಅಸಲಿಯತ್ತು ಬಯಲಾಗಿದೆ.