ಗದಗ: ರಾಜ್ಯ ಸರ್ಕಾರ ತಾಲೂಕು ಪಂಚಾಯತಿಯನ್ನು ರದ್ದು ಪಡಸಲು ಮುಂದಾಗಿದ್ದು, ಸAವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರಕಾರ ರದ್ದು ಪಡಿಸೋಕೆ ಬರುವದಿಲ್ಲ. ಆದರೆ ಯಾವ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.

ಸರಕಾರ ತಾಲೂಕು ಪಂಚಾಯತ ವ್ಯವಸ್ಥೆ ರದ್ದು ಪಡಿಸೋ ವಿಚಾರ ಹಿನ್ನೆಲೆ ಗದಗನಲ್ಲಿ ಮಾತನಾಡಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದರು.

ಸಂವಿಧಾನ ತಿದ್ದುಪಡಿ 73 ರಲ್ಲಿ ಈ ಬಗ್ಗೆ ಬದಲಾವಣೆಯಾಗಿದೆ. ರಚನಾತ್ಮಕ ಹಾಗೂ ರಾಷ್ಟ್ರ ಕಟ್ಟುವ ಕೆಲಸದಲ್ಲಿ ತಾಲೂಕು ಪಂಚಾಯತ ಪರಿಣಾಮಕಾರಿ ಆಗಿವೆ.

ಇದರಲ್ಲಿ ಅಧಿಕಾರಿಶಾಹಿ ಹಾಗೂ ರಾಜಕೀಯ ಇಚ್ಛಾಶಕ್ತಿ ಕೊರತೆ ಇಲ್ಲಿ ಎದ್ದು ಕಾಣುತ್ತದೆ ಎಂದು ಪ್ರಶ್ನಿಸಿದರು.

ಸರಕಾರ ತಾಲೂಕು ಪಂಚಾಯತ ವ್ಯವಸ್ಥೆ ಗಟ್ಟಿಗೊಳಿಸಬೇಕಾಗಿತ್ತು. ಆರೋಗ್ಯ, ಶಿಕ್ಷಣ, ಕೃಷಿ ಕ್ಷೇತ್ರಗಳಲ್ಲಿ ತಾಲೂಕು ಪಂಚಾಯತಿ ಪಾತ್ರ ಮಹತ್ವವಾಗಿದೆ. ಅಧಿಕಾರಿಗಳ ಸಭೆಯಲ್ಲಿ ಕೂತು ರದ್ದು ಮಾಡಬೇಕು ಎಂದು ಹೇಳಿದರೆ ಅದು ಸಮರ್ಪಕ ನಿಲುವಲ್ಲ. ಮೇ ತಿಂಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ ಚುನಾವಣೆ ನಡೆಯಲಿವೆ. ಚುನಾವಣೆ ಮುಂದೂಡಲಿಕ್ಕೆ ಸರಕಾರ ಈ ಹುನ್ನಾರ ನಡೆಸುತ್ತಿದೆ ಎಂದು ದೂರಿದರು.

ಬದಲಾವಣೆ ಹೆಸರಿನಲ್ಲಿ ಚುನಾವಣೆ ಮುಂದೂಡುವ ಪ್ರಯತ್ನ ಸಲ್ಲದು. ಇದರಿಂದ  ಪಂಚಾಯತ್ ಹಾಗೂ ಗ್ರಾಮಸ್ವರಾಜ್ ವ್ಯವಸ್ಥೆಗೆ ಧಕ್ಕೆ ಆಗುತ್ತದೆ. ಸರಕಾರ ಮಾಡುವ ಪ್ರಯತ್ನದಿಂದ ಕೋರ್ಟನಲ್ಲಿ ಮತ್ತೊಮ್ಮೆ ಮಂಗಳಾರುತಿ ಆಗುತ್ತದೆ.

ಈಗಾಗಲೇ ಗ್ರಾಮ ಪಂಚಾಯತ ಚುನಾವಣಾ ವೇಳೆ ಸರಕಾರಕ್ಕೆ ಕೋರ್ಟನಿಂದ ಮಂಗಳಾರತಿಯಾಗಿದೆ. ಅದೇ ರೀತಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ ಚುನಾವಣೆ ವಿಚಾರದಲ್ಲಿ ಆಗುತ್ತದೆ. ಸರಕಾರ ಇಂಥ ಕೆಟ್ಟ ಸಾಹಸಕ್ಕೆ ಮುಂದಾಗಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You May Also Like

ಹಿಂದೂ ಅಂತ ಭಾರತೀಯ ಭಾಷೆಯಲ್ಲಿ ಇಲ್ಲ: ಸಾಹಿತಿ ಸೂಳಿಭಾವಿ

ಉತ್ತರಪ್ರಭ ಸುದ್ದಿಗದಗ: ಹಿಂದು ಪದ ಭಾರತೀಯದ್ದಲ್ಲ ಅದು ಪರ್ಷಿಯನ್ ನಿಂದ ಬಂದಿದೆ. ಪರ್ಷಿಯನ್ ಹಾಗೂ ಇಸ್ಲಾಂದಲ್ಲಿ…

ನಾಡಿನ ಸಂಸ್ಕೃತಿ ಉಳಿಸಿ ಬೆಳಸುವಲ್ಲಿ ಕಸಾಪ ಮಹತ್ವ ಪಾತ್ರ ಹೊಂದಿದೆ

ಪಟ್ಟಣದಲ್ಲಿ ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ 300ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಹೊಸ ಭಾಷ್ಯ ಬರೆದಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಐ.ಎ. ರೇವಡಿ ಹೇಳಿದರು.

ಅಧಿಕಾರಿಗಳ ನಿರ್ಲಕ್ಷ್ಯ : ಪೈಪ ಒಡೆದು ನೀರು ಪೊಲು ರಸ್ತೆ ದಾಟಲು ವಿದ್ಯಾರ್ಥಿಗಳ ಪರದಾಟ

ಒಂದು ವಾರದಿಂದ ಕುಡಿಯೋ ನೀರಿನ ಪೈಪ ಹೊಡದೈತರಿ ಹಂಗ ನೀರ ಹರದ ರೊಡ ಮತ್ತು ಹೊಲಕ್ಕ ಹರಿಯಾಕತೈತಿ ಯಾರು ಬಂದು ಅದನ್ನು ರೀಪೆರಿ ಮಾಡಿಲ್ಲ ಶಾಲೆ ಹುಡುಗರು, ಮುದುಕರು ಮತ್ತು ಬಹಳ ಗಾಡಿಯವರು ಜಾರಿ ಬಿದ್ದ ಗಾಯಾ ಮಾಡಕೊಂಡಾರ ಅಷ್ಟ ಅಲ್ಲರಿ ಹೊಲದಾಗ ಒಟ್ಟಿರೊ ಬಣವಿಗೆ ನೀರ್ ಹೊಕ್ಕೊಂಡು ಮೇವ ಹಾಳಾಗೈತಿ, ಈ ಸಮಸ್ಯೆ ಯಾರಿಗ ಹೆಳೋದು ಅಂತ ತಿಳಿವಲ್ದ, ಒಟ್ಟಾರೆ ಸರಿಹೋದ್ರ ಸಾಕು. -ಸೋಮನಗೌಡರ ಪಾಟೀಲ್ ಅಡವಿಸೋಮಾಪುರ ಗ್ರಾಮದ ನಿವಾ

ಮಾಜಿ ಸಂಸದ ಐ.ಜಿ.ಸನದಿಗೆ ಮಾತೃ ವಿಯೋಗ

ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಂಸದರು ಆದ ಮಾನ್ಯ ಶ್ರೀ ಪ್ರೋ.ಐ.ಜಿ.ಸನದಿ ಅವರ ತಾಯಿ ಶ್ರೀಮತಿ ಫಾತೋಬಿ ಕೋಂ ಗೌಸುಸಾಹೇಬ್.ಸನದಿ ಶತಾಯುಷಿ ವಯಾ (102) ಇವರು ಇಂದು ಮಧ್ಯಾಹ್ನ 1-00