ಗದಗ: ರಾಜ್ಯ ಸರ್ಕಾರ ತಾಲೂಕು ಪಂಚಾಯತಿಯನ್ನು ರದ್ದು ಪಡಸಲು ಮುಂದಾಗಿದ್ದು, ಸAವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರಕಾರ ರದ್ದು ಪಡಿಸೋಕೆ ಬರುವದಿಲ್ಲ. ಆದರೆ ಯಾವ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.

ಸರಕಾರ ತಾಲೂಕು ಪಂಚಾಯತ ವ್ಯವಸ್ಥೆ ರದ್ದು ಪಡಿಸೋ ವಿಚಾರ ಹಿನ್ನೆಲೆ ಗದಗನಲ್ಲಿ ಮಾತನಾಡಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದರು.

ಸಂವಿಧಾನ ತಿದ್ದುಪಡಿ 73 ರಲ್ಲಿ ಈ ಬಗ್ಗೆ ಬದಲಾವಣೆಯಾಗಿದೆ. ರಚನಾತ್ಮಕ ಹಾಗೂ ರಾಷ್ಟ್ರ ಕಟ್ಟುವ ಕೆಲಸದಲ್ಲಿ ತಾಲೂಕು ಪಂಚಾಯತ ಪರಿಣಾಮಕಾರಿ ಆಗಿವೆ.

ಇದರಲ್ಲಿ ಅಧಿಕಾರಿಶಾಹಿ ಹಾಗೂ ರಾಜಕೀಯ ಇಚ್ಛಾಶಕ್ತಿ ಕೊರತೆ ಇಲ್ಲಿ ಎದ್ದು ಕಾಣುತ್ತದೆ ಎಂದು ಪ್ರಶ್ನಿಸಿದರು.

ಸರಕಾರ ತಾಲೂಕು ಪಂಚಾಯತ ವ್ಯವಸ್ಥೆ ಗಟ್ಟಿಗೊಳಿಸಬೇಕಾಗಿತ್ತು. ಆರೋಗ್ಯ, ಶಿಕ್ಷಣ, ಕೃಷಿ ಕ್ಷೇತ್ರಗಳಲ್ಲಿ ತಾಲೂಕು ಪಂಚಾಯತಿ ಪಾತ್ರ ಮಹತ್ವವಾಗಿದೆ. ಅಧಿಕಾರಿಗಳ ಸಭೆಯಲ್ಲಿ ಕೂತು ರದ್ದು ಮಾಡಬೇಕು ಎಂದು ಹೇಳಿದರೆ ಅದು ಸಮರ್ಪಕ ನಿಲುವಲ್ಲ. ಮೇ ತಿಂಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ ಚುನಾವಣೆ ನಡೆಯಲಿವೆ. ಚುನಾವಣೆ ಮುಂದೂಡಲಿಕ್ಕೆ ಸರಕಾರ ಈ ಹುನ್ನಾರ ನಡೆಸುತ್ತಿದೆ ಎಂದು ದೂರಿದರು.

ಬದಲಾವಣೆ ಹೆಸರಿನಲ್ಲಿ ಚುನಾವಣೆ ಮುಂದೂಡುವ ಪ್ರಯತ್ನ ಸಲ್ಲದು. ಇದರಿಂದ  ಪಂಚಾಯತ್ ಹಾಗೂ ಗ್ರಾಮಸ್ವರಾಜ್ ವ್ಯವಸ್ಥೆಗೆ ಧಕ್ಕೆ ಆಗುತ್ತದೆ. ಸರಕಾರ ಮಾಡುವ ಪ್ರಯತ್ನದಿಂದ ಕೋರ್ಟನಲ್ಲಿ ಮತ್ತೊಮ್ಮೆ ಮಂಗಳಾರುತಿ ಆಗುತ್ತದೆ.

ಈಗಾಗಲೇ ಗ್ರಾಮ ಪಂಚಾಯತ ಚುನಾವಣಾ ವೇಳೆ ಸರಕಾರಕ್ಕೆ ಕೋರ್ಟನಿಂದ ಮಂಗಳಾರತಿಯಾಗಿದೆ. ಅದೇ ರೀತಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ ಚುನಾವಣೆ ವಿಚಾರದಲ್ಲಿ ಆಗುತ್ತದೆ. ಸರಕಾರ ಇಂಥ ಕೆಟ್ಟ ಸಾಹಸಕ್ಕೆ ಮುಂದಾಗಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

You May Also Like

ಕಾಲೇಜು ಪ್ರಾರಂಭಕ್ಕೆ ಕೂಡಿ ಬಂದ ಮುಹೂರ್ತ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳು ತೆರೆಯುವ ಮುನ್ಸೂಚನೆ ಇನ್ನೂ ಸಿಗುತ್ತಿಲ್ಲ. ಆದರೆ, ನವೆಂಬರ್ ನಲ್ಲಿ ತೆರೆಯುವ ಚಿಂತನೆ ಸರ್ಕಾರದ ಮುಂದೆ ಇದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಮೌಲಾನಾ ಅಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಉತ್ತರಪ್ರಭಗದಗ: ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರತಿಷ್ಠಿತ ಮೌಲಾನಾ ಅಜಾದ್ ಆಂಗ್ಲ ಮಾಧ್ಯಮ ಶಾಲೆಯ ಮೊಟ್ಟ…

ಹೊಸೂರ ಗ್ರಾಮದ ಮನೆಗಳ ಅಡಿಪಾಯದಲ್ಲಿ ಉಕ್ಕಿಹರಿಯುತ್ತಿದೆ ಅಂತರ್ಜಲ

ಮುಳಗುಂದ: ಸಮೀಪದ ಹೊಸೂರ ಗ್ರಾಮದ ದೇಶಪಾಂಡೆ ವಾಡೆಯ ಸುತ್ತಮುತ್ತಲಿನ ನೂರಾರು ಮನೆಗಳ ಅಡಿಪಾಯ, ಅಂಗಳದಲ್ಲಿ ಅತಿವೃಷ್ಟಿಯಿಂದ ಅಂತರ್ಜಲ ಹೆಚ್ಚಾಗಿ ನೀರು ಉಕ್ಕಿಹರಿಯುತ್ತಿದೆ.

ರಾಜ್ಯದಲ್ಲಿ ಇಂದು ಇಳಿಕೆ ಕಂಡ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಇಂದು 6,297 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 66 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 8,500 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.