ಮುಳಗುಂದ : ಸಮೀಪದ ಹೊಸೂರ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಯಂಗ್ ಸ್ಟಾರ್ ವತಿಯಿಂದ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಗಳನ್ನ ಇದೇ ಫೆ. 12 ರಂದು ಮಹಾಂತೇಶಗೌಡ ಗೌಡರ ಅವರ ಹೊಲದಲ್ಲಿ ಸಿದ್ದಗೊಳಿಸಿದ ಮೈದಾನದಲ್ಲಿ ಏರ್ಪಡಿಸಲಾಗಿದೆ. ಎಂದು ಸಮಿತಿ ಸದಸ್ಯ ಬಸವರಾಜ ಬಂಡಿವಡ್ಡರ ತಿಳಿಸಿದರು.

ಈ ಕುರಿತು ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಕಾಗೋಷ್ಠಿಯಲ್ಲಿ ಮಾತನಾಡಿದರು. ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ದೃಷ್ಠಿಯಿಂದ ಈ ಬಾರಿ ಪ್ರೋ ಕಬಡ್ಡಿ ಹಮ್ಮಿಕೊಳ್ಳಲಾಗಿದೆ. ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 40 ರಿಂದ 50 ತಂಡಗಳು ಭಾಗವಹಿಸುವ ನೀರಿಕ್ಷೆ ಇದೆ. ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ, ಸುಸಜ್ಜಿತ ಮೈದಾನ ಹಾಗೂ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗುವದು. ಭಾಗವಹಿಸುವ ತಂಡಗಳು 501 ರೂ ಪ್ರವೇಶ ಶುಲ್ಕ ತುಂಬಿ ಪಂದ್ಯಾವಳಿಯ ನಿಯಮಗಳಿಗೆ ಬದ್ದರಾಗಿ ಭಾಗವಹಿಸಬೇಕು. ಎಂದು ತಿಳಿಸಿದರು.

ಫೆ. 12 ರಂದು ಸಂಜೆ 5 ಕ್ಕೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಭಯ್ಯ ದೇಸಾಯಿಮಠ,ತಾಪಂ ಸದಸ್ಯೆ ಸಾವಿತ್ರಮ್ಮ ಸುಂಕದ, ಪ.ಪಂ ಸದಸ್ಯರಾದ ಬಸವರಾಜ ಹಾರೋಗೇರಿ, ಎಸ್.ಸಿ.ಬಡ್ನಿ ಸೇರಿದಂತೆ ಗ್ರಾಂದ ಹಿರಿಯರು ಪಾಲ್ಗೊಳ್ಳಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9482930613, 9980736177 ಸಂಪರ್ಕಿಸಿ ಎಂದರು.

ಈ ಸಂದರ್ಭದಲ್ಲಿ ಅಶೋಕ ಅಂಗಡಿ, ಚೇತನ ದೇಶಪಾಂಡೆ, ಪ್ರಕಾಶ ಹೊಂಬಣ್ಣವರ, ತಾಜುದ್ದಿನ ಹೊಂಬಳ, ಪಪಂ ಸದಸ್ಯ ಬಸವರಾಜ ಹಾರೋಗೇರಿ,ಮಹಾದೇವಪ್ಪ ಗಡಾದ, ಚನ್ನಪ್ಪ ಹುಲ್ಲೂರ, ರಮೇಶ ಮ್ಯಾಗೇರಿ, ಮಹಾದೇವಪ್ಪ ಹುಬ್ಬಳ್ಳಿ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ನಾನು ಧೋನಿ ಪಂದ್ಯ ವೀಕ್ಷಿಸಲು ಯುಎಇಗೆ ಹೋಗಲು ಯೋಚಿಸುತ್ತಿದ್ದೇನೆ

2005ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯವೊಂದರಲ್ಲಿ ಭಾರತೀಯ ಕ್ರಿಕೆಟ್ ನ ಮಾಜಿ ನಾಯಕ ಎಂ.ಎಸ್. ಧೋನಿ 123 ಎಸೆತಗಳಿಗೆ 148 ರನ್ ಬಾರಿಸಿದ್ದರು. ಇದು ಅವರ ಮೊದಲ ಏಕದಿನ ಶತಕವಾಗಿತ್ತು.

ಕಿಂಗ್ ಕೊಹ್ಲಿ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಭಿಮಾನಿಗಳು!

ಶಾರ್ಜಾ : ಇಂದಿನ ಪಂದ್ಯಕ್ಕೂ ಮೊದಲು ಮೈದಾನದಲ್ಲಿ ಕೊಹ್ಲಿ ಡ್ಯಾನ್ಸ್ ಮಾಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

22 ರಂದು ವಲಯ ಮಟ್ಟದ ಕ್ರೀಡಾಕೂಟ

ಉತ್ತರಪ್ರಭ ಆಲಮಟ್ಟಿ: ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ 2022-23 ಶುಕ್ರವಾರ ಇಲ್ಲಿನ ಎಂ.ಎಚ್.…

ಕೊನೆಯ ಪಂದ್ಯದಲ್ಲಿ ಗೆಲುವು ಸಾಧಿಸಿ ಟೂರ್ನಿಯಿಂದ ಹೊರ ನಡೆದ ಚೆನ್ನೈ!

ಅಬುಧಾಬಿ : ಪ್ರಸಕ್ತ ಸಾಲಿನ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ತನ್ನ ಪಾಲಿನ ಕೊನೆಯ ಪಂದ್ಯವನ್ನು ಗೆಲ್ಲುವುದರ ಮೂಲಕ ಟೂರ್ನಿಯಿಂದ ಹೊರ ಬಿದ್ದಿದ್ದು, ಪಂಜಾಬ್ ತಂಡ ಕೂಡ ಹೊರ ಹೋಗುವಂತೆ ಮಾಡಿದೆ.