ಮುಳಗುಂದ: ಸಮೀಪದ ಬೆಳಧಡಿ ಗ್ರಾಮದ ಅಂಚೆ ಕಚೇರಿಯಲ್ಲಿ ಮಂಗಳವಾರ ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಅವರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯಡಿ ಸಂಗಮೇಶ ಅರಕೇರಿಮಠ ಅವರಿಗೆ 2 ಲಕ್ಷ ರೂ ಮೊತ್ತದ ಚೆಕ್ ವಿತರಿಸಿದರು.

ನಂತರ ಮಾತನಾಡಿದ ಅವರು ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ ಕುಟುಂಬಕ್ಕೆ ಭದ್ರತೆಗೆ ಒದಗಿಸುತ್ತದೆ. ಕಡಿಮೆ ಮೊತ್ತದ ವಿಮಾ ಕಂತು ತುಂಬಿ, ಅಪಘಾತವಾಗಿ ಮೃತಪಟ್ಟರೆ 5 ಲಕ್ಷ, ಸ್ವಾಭಾವಿಕ ಸಾವಿಗೆ 2 ಲಕ್ಷ ರೂ ಮೊತ್ತವನ್ನ ಅವರ ಕುಟುಂಬದ ವಾರಸುದಾರರಿಗೆ ಇಲಾಖೆ ಒದಗಿಸುತ್ತದೆ. ಹೀಗೆ ಅನೇಕ ಉಳಿತಾಯ ಹಾಗೂ ಜೀವ ವಿಮಾ ಯೋಜನೆಗಳಿದ್ದು ಅಂಚೆ ಇಲಾಖೆ ಯೋಜನೆಗಳನ್ನು ಗ್ರಾಹಕರು ಸದುಪಯೋಗ ಮಾಡಿಕೊಳ್ಳಬೇಕು. ಎಂದರು.

ಸಹಾಯಕ ಅಂಚೆ ಅಧೀಕ್ಷಕ ಎಂ.ಜಿ.ಕರಣೆ ಮಾತನಾಡಿ, ಅಂಚೆ ಇಲಾಖೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಂಚೆ ಸಿಬ್ಬಂದಿಯು ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಸೌಲಭ್ಯಗಳನ್ನ ಗ್ರಾಹಕರು ಪಡೆದುಕೊಳ್ಳಬೇಕು. ಎಂದರು.

ಗದಗ ಅಂಚೆ ಪಾಲಕ ಡಿ.ಡಿ.ಮುಳಗುಂದ ಸಭೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ನಿರ್ಮಲಾ ಇನಾಮತಿ, ಉಪಾಧ್ಯಕ್ಷ ಶಂಕ್ರಪ್ಪ ಹೊಸಳ್ಳಿ, ಸದಸ್ಯೆ ಲಕ್ಷ್ಮವ್ವ ಮುಂದಲಮನಿ, ಶಿಕ್ಷಕ ಕಲ್ಲಣ್ಣವರ, ಪಶು ವೈದ್ಯಾಧಿಕಾರಿ ಪಿ.ಎಸ್.ಗಣಾಚಾರಿ, ಅಂಚೆ ಮೇಲ್ವಿಚಾರಕ ಎಸ್.ವಿ.ಹಿರೇಮಠ, ವೆಂಕಟೇಶ ಆಕಳವಾಡಿ, ಶ್ರೀದೇವಿ ಕಲಕೇರಿ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಸೋಂಕು ಸರ್ವ ವ್ಯಾಪಿ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಶನಿವಾರ ದಿ. 18 ರಂದು 82 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದ್ದು, ವಿವರ…

ಚರಂಡಿ ಹೂಳು ಎತ್ತಿಸಿ ಸ್ವಚ್ಛತೆ : ಗ್ರಾ.ಪಂ ಸದಸ್ಯನ ಕಾರ್ಯಕ್ಕೆ ಪ್ರಶಂಸೆ

ಕಲ್ಲೂರ ಗ್ರಾಮದ 2ನೇ ವಾರ್ಡಿನ ಯಳವತ್ತಿ ರಸ್ತೆಯ ಚರಂಡಿಯಲ್ಲಿ ಸುಮಾರು ವರ್ಷಗಳಿಂದ ತುಂಬಿಕೊಂಡಿದ್ದ ಹೂಳು ಎತ್ತಿಸಿ ಸ್ವಚ್ಛತೆ ಕೈಗೊಂಡ ಗ್ರಾಮ ಪಂಚಾಯ್ತಿ ಸದಸ್ಯ ಬಸವರಾಜ ರಾಮರಡ್ಡಿ ಅವರ ಕಾರ್ಯಕ್ಕೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದರು.

ಪಕ್ಷದ ಸಿದ್ಧಾಂತ, ತತ್ವಗಳನ್ನು ಕಾರ್ಯಕರ್ತರು ಅರಿತುಕೊಳ್ಳಬೇಕು: ಸಂಕನೂರ್

ಭಿನ್ನತೆ ಹಾಗೂ ವೈಶಿಷ್ಟ್ಯತೆಯಿಂದ ಕೂಡಿರುವ ಪಕ್ಷ ಬಿಜೆಪಿಯಾಗಿದೆ. ಪಕ್ಷದ ಸಿದ್ಧಾಂತ, ತತ್ವಗಳನ್ನು ಕಾರ್ಯಕರ್ತರಿಗೆ ತಿಳಿಸಿ ಅವರಲ್ಲಿ ನಾಯಕತ್ವದ ಗುಣ ಬೆಳೆಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ್ ಹೇಳಿದರು.

ಗಜೇಂದ್ರಗಡ : ಬಂದ್ ಕರೆಗೆ ಕೋಟೆ ನಾಡು ಸ್ಥಬ್ಧ..!

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿ ವಿವಿಧ ಸಂಘಟನೆಗಳಿಂದ ನೀಡಿದ ಕರ್ನಾಟಕ ಬಂದ್ ಕರೆಗೆ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.