ಚಾಮರಾಜನಗರ – ತಾಲೂಕಿನ ಜ್ಯೋತಿಗೌಡನಪುರ ಗ್ರಾಪಂನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ಬೆಂಬಲಿಗರಿಗೆ ಲಾಟರಿ ಮೂಲಕ ಒಲಿದು ಬಂದಿದೆ.

ಹೀಗಾಗಿ ಗ್ರಾಪಂನ ಅಧ್ಯಕ್ಷರಾಗಿ ಜಯಮ್ಮ ಹಾಗೂ ಉಪಾಧ್ಯಕ್ಷೆಯಾಗಿ ಚಂದ್ರಕಲಾ ಆಯ್ಕೆಯಾಗಿದ್ದಾರೆ. ಈ ಹಿಂದೆಯೂ ನಂಜನಗೂಡಿನಲ್ಲಿ ಕೂಡ ಲಾಟರಿ ಮೂಲಕ ಕಾಂಗ್ರೆಸ್ ಬೆಂಬಲಿತರಿಗೆ ಅಧಿಕಾರದ ಚುಕ್ಕಾಣಿ ಸಿಕ್ಕಿತ್ತು. ಬಿಜೆಪಿ ಬೆಂಬಲಿತ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೇ ತಮ್ಮ ಮತವನ್ನು ಖೊಟ್ಟಿ ಮಾಡಿಕೊಳ್ಳುವುದರ ಮೂಲಕ ಅಧಿಕಾರ ಕಳೆದುಕೊಂಡಿದ್ದರು.

ಆದರೆ, ಜ್ಯೋತಿಗೌಡನಪುರ ಗ್ರಾಪಂನಲ್ಲಿ 20 ಜನ ಸದಸ್ಯರಿದ್ದಾರೆ. ಆದರೆ, ಇಲ್ಲಿ ಕಾಂಗ್ರೆಸ್ ಬೆಂಬಲಿತ ಹಾಗೂ ಬಿಜೆಪಿ ಬೆಂಬಲಿತ ತಲಾ 10 ಜನ ಸದಸ್ಯರು ಆಯ್ಕೆಯಾಗಿದ್ದಾರೆ. ಹೀಗಾಗಿ ಸಮಾನ ಮತಗಳು ಬಿದ್ದಿವೆ. ಹೀಗಾಗಿ ಲಾಟರಿ ಹಾಕುವುದು ಅನಿವಾರ್ಯವಾಯಿತು. ಲಾಟರಿಯಲ್ಲಿ ಕಾಂಗ್ರೆಸ್ ಬೆಂಬಲಿತರಿಗೆ ಜಯ ಸಿಕ್ಕಿದೆ. ಆನಂತರ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಲಾಯಿತು.

Leave a Reply

Your email address will not be published. Required fields are marked *

You May Also Like

ಸೋಂಕಿನ ಸವಾಲಿಗೆ ಸರ್ಕಾರ ಸುಸ್ತು!: 3693 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 3693 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…

ಒಡಿಶಾ ಸಿಎಂ ಜೊತೆ ಪ್ರಧಾನಿ ಸಭೆ: ಯಾಸ್ ಚಂಡಮಾರುತದಿಂದ ಹಾನಿ ಮಾಹಿತಿ

ಭುವನೇಶ್ವರ: ಶುಕ್ರವಾರ ಬೆಳಗ್ಗೆ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಲ್ಲಿನ ವಿಮಾನ ನಿಲ್ದಾಣದ ಕಾನ್ಫರೆನ್ಸ್ ಹಾಲ್ ನಲ್ಲಿ ಇಡಿಶಾ ಸಿಎಂ ನವೀನ್ ಪಟ್ನಾಯಕ್ ಜೊತೆ ಸಭೆ ನಡೆಸಿದ್ದಾರೆ.

ಬೆಂಗಳೂರಿನತ್ತ ಮುಖ ಮಾಡಿದ ಜನರು!

ಬೆಂಗಳೂರು: ಲಾಕ್ ಡೌನ್ ಆರಂಭವಾಗುತ್ತಿದ್ದಂತೆ ಬೆಂಗಳೂರಿನಿಂದ ಕಾಲ್ಕಿತ್ತ ಜನರು ಸದ್ಯ ಮತ್ತೆ ನಗರದತ್ತ ಮುಖ ಮಾಡುತ್ತಿದ್ದಾರೆ.…

ಸಾಲೋಣಿ ಅವರಿಗೆ ಕಾಡಾ ಅಧ್ಯಕ್ಷ ಸ್ಥಾನ ನೀಡಲು ಒತ್ತಾಯ

ಕನಕಗಿರಿ ಕ್ಷೇತ್ರದ ಕುರುಬ ಸಮಾಜದ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ನಾಗಪ್ಪ ಸಾಲೋಣಿಗೆ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಬೇಕೆಂದು ಇಲ್ಲಿನ ಕುರುಬ ಸಮಾಜದ ಯುವ ಮುಖಂಡ ಬೀರಪ್ಪ ವೆಂಕಟಾಪೂರ ಒತ್ತಾಯಿಸಿದ್ದಾರೆ.