ಚಾಮರಾಜನಗರ – ತಾಲೂಕಿನ ಜ್ಯೋತಿಗೌಡನಪುರ ಗ್ರಾಪಂನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಕಾಂಗ್ರೆಸ್ ಬೆಂಬಲಿಗರಿಗೆ ಲಾಟರಿ ಮೂಲಕ ಒಲಿದು ಬಂದಿದೆ.

ಹೀಗಾಗಿ ಗ್ರಾಪಂನ ಅಧ್ಯಕ್ಷರಾಗಿ ಜಯಮ್ಮ ಹಾಗೂ ಉಪಾಧ್ಯಕ್ಷೆಯಾಗಿ ಚಂದ್ರಕಲಾ ಆಯ್ಕೆಯಾಗಿದ್ದಾರೆ. ಈ ಹಿಂದೆಯೂ ನಂಜನಗೂಡಿನಲ್ಲಿ ಕೂಡ ಲಾಟರಿ ಮೂಲಕ ಕಾಂಗ್ರೆಸ್ ಬೆಂಬಲಿತರಿಗೆ ಅಧಿಕಾರದ ಚುಕ್ಕಾಣಿ ಸಿಕ್ಕಿತ್ತು. ಬಿಜೆಪಿ ಬೆಂಬಲಿತ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೇ ತಮ್ಮ ಮತವನ್ನು ಖೊಟ್ಟಿ ಮಾಡಿಕೊಳ್ಳುವುದರ ಮೂಲಕ ಅಧಿಕಾರ ಕಳೆದುಕೊಂಡಿದ್ದರು.

ಆದರೆ, ಜ್ಯೋತಿಗೌಡನಪುರ ಗ್ರಾಪಂನಲ್ಲಿ 20 ಜನ ಸದಸ್ಯರಿದ್ದಾರೆ. ಆದರೆ, ಇಲ್ಲಿ ಕಾಂಗ್ರೆಸ್ ಬೆಂಬಲಿತ ಹಾಗೂ ಬಿಜೆಪಿ ಬೆಂಬಲಿತ ತಲಾ 10 ಜನ ಸದಸ್ಯರು ಆಯ್ಕೆಯಾಗಿದ್ದಾರೆ. ಹೀಗಾಗಿ ಸಮಾನ ಮತಗಳು ಬಿದ್ದಿವೆ. ಹೀಗಾಗಿ ಲಾಟರಿ ಹಾಕುವುದು ಅನಿವಾರ್ಯವಾಯಿತು. ಲಾಟರಿಯಲ್ಲಿ ಕಾಂಗ್ರೆಸ್ ಬೆಂಬಲಿತರಿಗೆ ಜಯ ಸಿಕ್ಕಿದೆ. ಆನಂತರ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಗ್ರಾಮದ ತುಂಬೆಲ್ಲ ಮೆರವಣಿಗೆ ಮಾಡಲಾಯಿತು.

Leave a Reply

Your email address will not be published. Required fields are marked *

You May Also Like

ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ

ನವದೆಹಲಿ : ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಒಂದೇ ದಿನ ದೇಶದಲ್ಲಿ…

ಆರು ತಿಂಗಳ ನ್ಯಾಯ ನೀಡಿ ಮೋದಿಜೀ ಎಂದ ಸಿದ್ದು

20 ಲಕ್ಷ ಕೋಟಿ ಮೊತ್ತದಲ್ಲಿ ಇರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ಸೊನ್ನೆ ಸಿಗಲಿದೆ ಎನ್ನುವುದು ಪ್ರಶ್ನೆಯಾಗಿದೆ ಎಂದು ಪ್ವಾರದಾನಿ ನರೇಂದ್ಗಿರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ.

ಅವ್ವ ಪಾಸಿಟಿವ್, ಐಸಿಯುನಲ್ಲಿ ಕಂದ: ಗದಗ ಜಿಮ್ಸ್ ಸಿಬ್ಬಂದಿಯೇ ತಾಯಿ-ತಂದೆ..!

ಗದಗ: ಕೋವಿಡ್ ಸೋಂಕಿತ ಗರ್ಭಿಣಿಗೆ ಸಿಸೇರಿನ್ ಮೂಲಕ ಹೆರಿಗೆ ಮಾಡಿ, ತಾಯಿ-ಮಗು ಇಬ್ಬರ ಜೀವ ಕಾಪಾಡಿದ…

ಕೋವಿಡ್ ಹಿನ್ನೆಲೆ ಕಾಲಕಾಲೇಶ್ವರ ಜಾತ್ರೆ ರದ್ದು

ಶ್ರೀ ಕಾಲಕಾಲೇಶ್ವರ ಜಾತ್ರಾ ಮಹೋತ್ಸವವನ್ನು ಸರ್ಕಾರದ ಮಾರ್ಗಸೂಚಿ ಅನ್ವಯ ರದ್ದುಮಾಡಲಾಗಿದೆ ಎಂದು ತಹಶೀಲ್ದಾರ ಎ.ಬಿ. ಕಲಘಟಗಿ ಹೇಳಿದರು.